ಸಂಸದ ಪ್ರತಾಪ್ ಸಿಂಹ ವಿರುದ್ದ ಪ್ರತಿಭಟನಾ ಮೆರವಣಿಗೆ: ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ….

ಮೈಸೂರು,ಸೆ,27,2019(www.justkannada.in): ಮಹಿಷಾ ದಸರಾ ಆಚರಣೆಗಾಗಿ ಮೈಸೂರಿನ ಚಾಮುಂಡಿಬೆಟ್ಟದ ಮಹಿಷಾಸುರ ಪ್ರತಿಮೆ ಬಳಿ ಹಾಕಲಾಗಿದ್ದ ಶಾಮಿಯಾನವನ್ನ ತೆಗೆಸಿ ಪೊಲೀಸರ ಮೇಲೆಯೇ ತಮ್ಮ ಪ್ರಲಾಪ ಪ್ರದರ್ಶಿಸಿದ್ದ  ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ದ ಪ್ರಗತಿಪರರು ಸಿಡಿದೆದ್ದಿದ್ದಾರೆ.

ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ಸರ್ಕಾರದ ವಿರುದ್ದ  ಮಹಿಷಾ ದಸರಾ ಆಚರಣೆ ಸಮಿತಿಯಿಂದ ಪ್ರತಿಭಟನಾ‌ ಮೆರವಣಿಗೆ ನಡೆಯಿತು. ಮೈಸೂರಿನ ಅಶೋಕಪುರಂನ ಅಂಬೇಡ್ಕರ್ ಪಾರ್ಕ್ ನಿಂದ ಹೊರಟ ಪ್ರತಿಭಟನಾ ಮೆರವಣಿಗೆ ಡಿಸಿ ಕಚೇರಿವರಗೆ ಸಾಗಿತು. ಮೆರವಣಿಗೆ ವೇಳೆ ಸಂಸದ ಪ್ರತಾಪ್ ಸಿಂಹ ಹಾಗೂ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸ್ ಭದ್ರತೆಯಲ್ಲಿ ಪ್ರತಿಭಟನಾ ಮೆರವಣಿಗೆ ಸಾಗಿತು.  ಪ್ರತಿಭಟನಾ ಮೆರವಣಿಗೆಯಲ್ಲಿ ಜ್ಞಾನ ಪ್ರಕಾಶ ಸ್ವಾಮೀಜಿ, ಪುರುಷೋತ್ತಮ್ ಸೇರಿ ಪ್ರಗತಿಪರರು ಭಾಗಿಯಾಗಿದ್ದರು.

ಪ್ರತಾಪ್ ಸಿಂಹ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ…

ಹಾಗೆಯೇ ಸಂಸದ ಪ್ರತಾಪ್ ಸಿಂಹ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಭರಿತ ಮಾತುಗಳನ್ನಾಡಿ ಆಕ್ರೋಶ ವ್ಯಕ್ತಪಡಿಸಿಲಾಯಿತು.  ಪ್ರತಾಪ್ ಸಿಂಹ ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

Key words: Protest — against -MP -Pratap simha-mysore