PSI ನೇಮಕಾತಿ ಹಗರಣ: ತನಿಖೆಗಾಗಿ ಎಸ್​ ಐಟಿ‌ ರಚಿಸಲು ತೀರ್ಮಾನ.

ಬೆಂಗಳೂರು,14,2024(www.justkannada.in): PSI ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ತನಿಖೆ ನಡೆಸಲು ಎಸ್ ಐಟಿ ರಚಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಈ ಕುರಿತು ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ, PSI ನೇಮಕಾತಿ ಹಗರಣ ಸಂಬಂಧ ಬಿ.ವೀರಪ್ಪ ಸಮಿತಿ ರಚಿಸಿದ್ದವು. ಈ ಸಂಬಂಧ ಬಿ.ವೀರಪ್ಪ ನೇತೃತ್ವದ ಸಮಿತಿ ವರದಿ ಸಲ್ಲಿಕೆ ಮಾಡಿದೆ. ಸರ್ಕಾರಿ, ಖಾಸಗಿ ವ್ಯಕ್ತಿಗಳು ಸೇರಿ 113 ಜನರು ಭಾಗಿ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣ ಸಂಬಂಧ ತನಿಖೆಗೆ ಎಸ್​ಟಿಐ ರಚಿಸಬೇಕೆಂದು ವೀರಪ್ಪ  ಸಮಿತಿ ಶಿಫಾರಸ್ಸು ಮಾಡಿದೆ.  ಹೀಗಾಗಿ ಹೆಚ್ಚುವರಿ ತನಿಖೆಗಾಗಿ ಎಸ್​ಐಟಿ‌ ರಚಿಸಲು ತೀರ್ಮಾನ ಮಾಡಿದ್ದೇವೆ ಎಂದು ಕೃಷ್ಣಭೈರೇಗೌಡ ತಿಳಿಸಿದ್ದಾರೆ.

Key words: PSI recruitment –scam- Decision – form- SIT – probe.