Thursday, August 13, 2026

BDA Apartments

Home Front Page ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರೆಂಟಿ ಘೋಷಿಸಿ ಈಗ ಮತದಾರರ ಬಗ್ಗೆ ಯಾಕೆ ಕೀಳು ಮಾತು..? ಆರ್.ಅಶೋಕ್...

ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರೆಂಟಿ ಘೋಷಿಸಿ ಈಗ ಮತದಾರರ ಬಗ್ಗೆ ಯಾಕೆ ಕೀಳು ಮಾತು..? ಆರ್.ಅಶೋಕ್ ಕಿಡಿ

ಬೆಂಗಳೂರು,ಫೆಬ್ರವರಿ,19,2025 (www.justkannada.in): ಕಳೆದ ಮೂರ್ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮೀ, ಅನ್ನಭಾಗ್ಯ ಹಣ ಜಮೆಯಾಗದ ಬಗ್ಗೆ ಪ್ರಶ್ನಿಸಿದ್ದಕ್ಕೆ ಗೃಹಲಕ್ಷ್ಮೀ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ ಎಂದು ಹೇಳಿಕೆ ನೀಡಿದ್ದ ಇಂಧನ ಸಚಿವ ಕೆ.ಜೆ ಜಾರ್ಜ್ ಗೆ  ವಿಪಕ್ಷ ನಾಯಕ ಆರ್. ಅಶೋಕ್ ತಿರುಗೇಟು ಕೊಟ್ಟಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ಸ್ವಾಮಿ ಸಚಿವ ಕೆ.ಜೆ ಜಾರ್ಜ್ ಅವರೇ, ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ವಲ್ಲ ಅಂತ ಹೇಳಿದ್ದೀರಲ್ಲಾ, ಇದೇನಾ ಮತದಾರರಿಗೆ ನೀವು ಕೊಡುವ ಗೌರವ? ಗೃಹಲಕ್ಷ್ಮಿ ಹಣ ಕೊಡಿ, ಅನ್ನಭಾಗ್ಯದ ಹಣ ಕೊಡಿ ಅಂತ ಮಾತಾದರರೇನು ನಿಮ್ಮ ಬಳಿ ಭಿಕ್ಷೆ ಬೇಡುತ್ತಿಲ್ಲ. ಈ ಗ್ಯಾರೆಂಟಿ ಯೋಜನೆಗಳನ್ನು ಪ್ರಾರಂಭಿಸಿ ಅಂತ ಜನತೆ ಕೇಳಿಯೂ ಇರಲಿಲ್ಲ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಕೋಳಿ ಕೂಗಿದರೆ ಕರ್ನಾಟಕದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುಸ್ಥಿತಿ ಕನ್ನಡಿಗರಿಗೆ ಬಂದಿಲ್ಲ.

ಹಾಗೆಯೇ ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿ ಈಗ ಮತದಾರರ ಬಗ್ಗೆ ಕೀಳಾಗಿ ಯಾಕೆ ಮಾಡುತ್ತೀರಿ? ನಿಮ್ಮ ಕೈಲಾದರೆ ಕೊಟ್ಟ ಮಾತಿನಂತೆ ಗ್ಯಾರೆಂಟಿ ಯೋಜನೆಗಳನ್ನು ಗೌರವದಿಂದ ಜಾರಿ ಮಾಡಿ. ನಿಮ್ಮ ಕೈಲಾಗದಿದ್ದರೆ ಬಿಟ್ಟುಬಿಡಿ. ಗ್ಯಾರೆಂಟಿ ಯೋಜನೆಗಳು ಜಾರಿ ಆಗುವ ಮುನ್ನವೂ ಜನರು ತಮ್ಮ ಬದುಕು ಕಟ್ಟಿಕೊಂಡಿದ್ದರು. ಅವು ಇಲ್ಲದೆಯೂ ತಮ್ಮ ಬದುಕು ಕಟ್ಟಿಕೊಳ್ಳುತ್ತಾರೆ. ಕಾಂಗ್ರೆಸ್ ಕೋಳಿ ಕೂಗಿದರೆ ಕರ್ನಾಟಕದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುಸ್ಥಿತಿ ಕನ್ನಡಿಗರಿಗೆ ಬಂದಿಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.

ಕನ್ನಡಿಗರ ಸ್ವಾಭಿಮಾನ ಕೆಣಕಬೇಡಿ. ಈಗಾಗಲೇ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಅಡ್ರೆಸ್ ಇಲ್ಲದಂತಾಗಿದೆ. ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ನಿರ್ನಾಮ ಆಗುವುದು ಗ್ಯಾರೆಂಟಿ ಎಂದು ಆರ್.ಅಶೋಕ್ ಎಚ್ಚರಿಕೆ  ಕೊಟ್ಟಿದ್ದಾರೆ.

Key words: guarantee Scheme, money, congress, power, R. Ashok