Sunday, August 2, 2026

BDA Apartments

Home Front Page ಚಳಿಗಾಲ ಅಧಿವೇಶನ ಒಂದು ವಾರ ವಿಸ್ತರಿಸುವಂತೆ ಮನವಿ ಮಾಡಿ ಸ್ಪೀಕರ್ ಗೆ ಪತ್ರ ಬರೆದ ಆರ್.ಅಶೋಕ್

ಚಳಿಗಾಲ ಅಧಿವೇಶನ ಒಂದು ವಾರ ವಿಸ್ತರಿಸುವಂತೆ ಮನವಿ ಮಾಡಿ ಸ್ಪೀಕರ್ ಗೆ ಪತ್ರ ಬರೆದ ಆರ್.ಅಶೋಕ್

ಬೆಂಗಳೂರು,ಡಿಸೆಂಬರ್,15,2025 (www.justkannada.in) ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಒಂದು ವಾರಗಳ ಕಾಲ ವಿಸ್ತರಿಸುವಂತೆ ಸ್ಪೀಕರ್ ಯುಟಿ ಖಾದರ್ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್  ಮನವಿ ಮಾಡಿ ಪತ್ರ ಬರೆದಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಆರ್.ಅಶೋಕ್, ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆಯಾಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ಡಿಸೆಂಬರ್‌ 8 ರಿಂದ 19 ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. ಕಾರಣಾಂತರಗಳಿಂದ ಎರಡು ದಿನ ಮೊಟಕುಗೊಂಡಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿವೇಶವನ್ನು ಒಂದು ವಾರ ವಿಸ್ತರಿಸಬೇಕೆಂದು ಮನವಿ ಮಾಡಿದ್ದಾರೆ.

Key words: R. Ashok, Speaker,  extension, winter session