ಇಂಧನ ಸಚಿವ ಕೆ.ಜೆ ಜಾರ್ಜ್ ರಾಜೀನಾಮೆಗೆ ಆರ್.ಅಶೋಕ್ ಆಗ್ರಹ.

ಬೆಂಗಳೂರು,ಫೆಬ್ರವರಿ,8,2024(www.justkannada.in): ಕಳೆದ ವರ್ಷ ನವೆಂಬರ್‌ನಲ್ಲಿ ವೈಟ್​ಫೀಲ್ಡ್​​​ ನ ಕಾಡುಗೋಡಿಯಲ್ಲಿ ಪಾದಾಚಾರಿ ಮಾರ್ಗದಲ್ಲಿ ವಿದ್ಯುತ್ ತಂತಿ ತುಳಿದು ತಾಯಿ-ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನ ಸಚಿವ ಕೆ.ಜೆ ಜಾರ್ಜ್ ರಾಜೀನಾಮೆಗೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್. ಅಶೋಕ್, ಬೆಂಗಳೂರಿನಲ್ಲಿ ಕಳೆದ ನವೆಂಬರ್ ನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ-ಮಗು ಮೃತಪಟ್ಟ ಪ್ರಕರಣಕ್ಕೆ ‘ಇಲಿ’ ಕಾರಣ ಎಂಬ ಬೇಜವಾಬ್ದಾರಿ ಹೇಳಿಕೆ ನೀಡಿದ್ದ ಸಚಿವ ಜಾರ್ಜ್ ಅವರ ಹೊಣೆಗೇಡಿತನ ಈಗ ತನಿಖಾ ವರದಿಯಲ್ಲಿ ಬಯಲಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಸಾಮಾನ್ಯ ಜನರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದ್ದು, ಸಿಎಂ ಸಿದ್ದರಾಮಯ್ಯ ನವರು ಈ ಕೂಡಲೇ ಸಚಿವ ಕೆ.ಜೆ.ಜಾರ್ಜ್ ಅವರ ರಾಜೀನಾಮೆ ಪಡೆದುಕೊಂಡು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ಪಾದಾಚಾರಿ ಮಾರ್ಗದಲ್ಲಿ ವಿದ್ಯುತ್ ತಂತಿ ತುಳಿದು ತಾಯಿ-ಮಗು ಮೃತಪಟ್ಟ ದುರ್ಘಟನೆ ನಡೆದಿತ್ತು. ಈ ಘಟನೆಯ ತನಿಖೆ ನಡೆಸಿದ ತಜ್ಞರ ಸಮಿತಿ ಈ ಘಟನೆಗೆ ತಾಂತ್ರಿಕ ಲೋಪಗಳೇ ಕಾರಣ ಎಂದು ವರದಿ ನೀಡಿದ್ದಾರೆ.

ಈ ಹಿಂದೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ವಿದ್ಯುತ್ ಸ್ಪರ್ಶದಿಂದ ಸಂಭವಿಸಿದ ತಾಯಿ-ಮಗು ಸಾವಿಗೆ ಇಲಿ ಕಾರಣ. ಹೆಗ್ಗಣ ವೈರ್‌ ಕಡಿದು ತಂತಿ ತುಂಡಾಗಿ ಬೀಳುವಂತೆ ಮಾಡಿದೆ ಎಂದು ಹೇಳಿದ್ದರು. ಸದ್ಯ ಈಗ ತನಿಖೆ ವರದಿ ಸತ್ಯ ಬಯಲು ಮಾಡಿದ್ದು ವಿಪಕ್ಷ ನಾಯಕ ಆರ್​ ಅಶೋಕ್  ಅವರು ಟ್ವೀಟ್ ಮೂಲಕ ಟ್ವೀಟ್ ಮಾಡಿ ಸಚಿವ ಜಾರ್ಜ್ ವಿರುದ್ಧ  ವಾಗ್ದಾಳಿ ನಡೆಸಿದ್ದಾರೆ.

Key words: R. Ashok -demands -resignation -Energy Minister- KJ George.