Wednesday, July 29, 2026

BDA Apartments

Home Front Page ಮುಂಗಾರಿಗೂ ಮುನ್ನ ವರುಣನ ಆರ್ಭಟ: ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯ ಮುನ್ಸೂಚನೆ.

ಮುಂಗಾರಿಗೂ ಮುನ್ನ ವರುಣನ ಆರ್ಭಟ: ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯ ಮುನ್ಸೂಚನೆ.

ಬೆಂಗಳೂರು,ಮೇ,30,2023(www.justkannada.in): ರಾಜ್ಯದಲ್ಲಿ ಮುಂಗಾರಿಗೂ ಮುನ್ನವೇ ಮಳೆರಾಯ ಅಬ್ಬರಿಸುತ್ತಿದ್ದು ಹಲವು ಕಡೆಗಳಲ್ಲಿ ಭಾರಿ ಮಳೆಯಾಗಿದೆ. ಈ ನಡುವೆ ಇನ್ನೂ ಮೂರು ದಿನಗಳ ಕಾಲ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ಜೂನ್  2ರವರೆಗೂ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಮೂರು ದಿನ ರಾಜ್ಯದಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Key words: rain-before – monsoon-three days – state.