Friday, August 7, 2026

BDA Apartments

Home Front Page ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ : ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸಚಿವರಿಗೆ ಸಿಎಂ ಸಿದ್ಧರಾಮಯ್ಯ...

ಕರಾವಳಿ ಜಿಲ್ಲೆಗಳಲ್ಲಿ ಮಳೆ ಹಾನಿ : ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ಸಚಿವರಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ.

ಬೆಂಗಳೂರು, ಜುಲೈ,6,2023(www.justkannada.in):  ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್,  ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮಾಂಕಾಳ ವೈದ್ಯ ಅವರಿಗೆ ಸಿಎಂ  ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ.

ಮಳೆ ಹಾನಿ ಕುರಿತು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದ  ಸಿಎಂ ಸಿದ್ಧರಾಮಯ್ಯ ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸುವಂತೆ ಆದೇಶಿಸಿದರು.

Key words: Rain -damage – coastal districts-CM Siddaramaiah- instructs -ministers