ಬೆಂಗಳೂರು,ಮಾರ್ಚ್,20,2026 (www.justkannada.in): ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತು ಮಾಹಿತಿ ನೀಡಿರುವ ಹವಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್, ರಾಜ್ಯದ ಕೆಲವು ಕಡೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಉಷ್ಣಾಂಶ ಏರಿಕೆಯಿಂದ ಏಕಾಏಕಿ ಮಳೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ಇಂದು ನಾಳೆ ಎರಡು ದಿನಗಳ ಕಾಲ ಬೆಂಗಳೂರು ಸೇರಿ ಹಲವೆಡೆ ಮಳೆ ಮುಂದುವರೆಯಲಿದೆ ಎನ್ನಲಾಗಿದೆ.
Key words: Rain, state, today, Meteorological Department







