ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ಭೇಟಿ ಮಾಡಿದ ರಜನಿಕಾಂತ್: ಸೋಷಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್

ಬೆಂಗಳೂರು, ಆಗಸ್ಟ್ 20, 2023 (www.justkannada.in): ನಟ, ಸೂಪರ್ ಸ್ಟಾರ್ ರಜನಿಕಾಂತ್ ಲಕ್ನೋದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಭೇಟಿಯಾದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆದಿತ್ಯನಾಥ್‌ ಅವರನ್ನು ಭೇಟಿಯಾದ ರಜನಿಕಾಂತ್, ಅವರ ಕಾಲಿಗೆ ಬಿದ್ದು ಆಶಿರ್ವಾದ ಪಡೆದಿದ್ದಾರೆ. ಈ ಚಿತ್ರಗಳು ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ ಆರಂಭವಾಗಿದೆ.

ಅಂದಹಾಗೆ ತಮ್ಮ ಹೊಸ ಚಿತ್ರವಾದ ‘ಜೈಲರ್’ ಅನ್ನು ಮುಖ್ಯಮಂತ್ರಿ ಆದಿತ್ಯನಾಥ್ ಜೊತೆ ವೀಕ್ಷಿಸುವ ಸಲುವಾಗಿ ರಜನಿಕಾಂತ್ ಉತ್ತರಪ್ರದೇಶಕ್ಕೆ ತೆರಳಿದ್ದರು.

ನಾನು ಸಿಎಂ ಜೊತೆ ಸಿನಿಮಾ ನೋಡುತ್ತೇನೆ. ಚಿತ್ರ ಹಿಟ್ ಆಗುತ್ತಿರುವುದು ದೇವರ ಆಶೀರ್ವಾದ ಎಂದು ರಜನಿಕಾಂತ್  ಹೇಳಿದ್ದಾರೆ.