ಸ್ಯಾಂಡಲ್ ವುಡ್, ಕೆಜಿಎಫ್ ಬಗ್ಗೆ ರಾಮ್ ಗೋಪಾಲ್ ವರ್ಮಾ ಟ್ವೀಟ್ !

ಬೆಂಗಳೂರು, ಜನವರಿ 15, 2020 (www.justkannada.in): ಸ್ಯಾಂಡಲ್ ವುಡ್ ಬಗ್ಗೆ ಮಾತನಾಡಿದ್ದಾರೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ.

ಕೆಜಿಎಫ್ ನಂತರ ಕನ್ನಡ ಚಿತ್ರರಂಗವನ್ನು ಬೇರೆಯವರು ನೋಡುವ ದೃಷ್ಟಿಕೋನವೇ ಬದಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಮ್ ಗೋಪಾಲ್ ವರ್ಮಾ, ಎರಡು ವರ್ಷಗಳ ಹಿಂದೆ ಕನ್ನಡ ಚಿತ್ರರಂಗವನ್ನು ಬಾಲಿವುಡ್ ಮಾತ್ರವಲ್ಲ, ದಕ್ಷಿಣ ಭಾರತದ ಸಿನಿಮಾ ರಂಗವೇ ಲೆಕ್ಕಕ್ಕೇ ತೆಗೆದುಕೊಂಡಿರಲಿಲ್ಲ. ಆದರೆ ಕೆಜಿಎಫ್ ಮೂಲಕ ಕನ್ನಡ ಸಿನಿಮಾ ರಂಗವನ್ನು ವಿಶ್ವಮಟ್ಟಕ್ಕೆ ಏರಿಸಿದೆ ಎಂದಿದ್ದಾರೆ.

ಈ ಹಿರಿಮೆ ಪ್ರಶಾಂತ್ ನೀಲ್ ಮತ್ತು ಯಶ್ ಮತ್ತು ಅವರ ಕೆಜಿಎಫ್ ತಂಡಕ್ಕೆ ಸೇರಬೇಕು’ ಎಂದಿದ್ದಾರೆ.