ಬೆಂಗಳೂರು,ಸೆಪ್ಟಂಬರ್,16,2026 (www.justkannada.in): ರಾಜ್ಯ ಸಚಿವ ಸಂಪುಟದಲ್ಲಿ ಮಹಿಳಾ ಶಾಸಕರಿಗೆ ಸ್ಥಾನ ನೀಡದ ವಿಚಾರಕ್ಕೆ ಸಂಬಂಧಿಸಿದಂತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಒಬ್ಬರಿಗಿಂತ ಹೆಚ್ಚು ಆಕಾಂಕ್ಷಿಗಳಿದ್ದರು ಹೀಗಾಗಿ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲು ಸಾಧ್ಯವಾಗಲಿಲ್ಲ. ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಶೀಘ್ರದಲ್ಲೇ ನಿರ್ಧರಿಸುತ್ತೇವೆ ಎಂದರು.
ಸಚಿವ ಸಂಪುಟದಲ್ಲಿ ಮಹಿಳಾ ಮಂತ್ರಿಗೆ ಸ್ಥಾನ ಇಲ್ಲದಿರುವುದಕ್ಕೆ ತಪ್ಪು ನನ್ನದೇ. ದೆಹಲಿಯ ಹೈಕಮಾಂಡ್ ತಪ್ಪಲ್ಲ. ನನ್ನ ತಪ್ಪು ನಾನೇ ಒಬ್ಬ ಅಭ್ಯರ್ಥಿಯನ್ನ ಫೈನಲ್ ಮಾಡಲು ಆಗಲಿಲ್ಲ. ಒಬ್ಬರಿಗಿಂತ ಹೆಚ್ಚು ಆಕಾಂಕ್ಷಿಗಳಿದ್ದರು. ಹೀಗಾಗಿ ಸಾಧ್ಯವಾಗಲಿಲ್ಲ. ರಾಜಕೀಯ ಅನಿವಾರ್ಯ ಕಾರಣದಿಂದ ನಿರ್ಧಾರ ಮಾಡಲು ಆಗಿಲ್ಲ ಎಂದರು.







