ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ವಿಚಾರ: ಕೆ.ಆರ್‌.ಆಸ್ಪತ್ರೆಗೆ ಶಾಸಕ ಎಲ್.ನಾಗೇಂದ್ರ ಭೇಟಿ, ಪರಿಶೀಲನೆ.

ಮೈಸೂರು,ಜುಲೈ,10,2021(www.justkannada.in): ಕೆ.ಆರ್ ಆಸ್ಪತ್ರೆಯಲ್ಲಿ ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಕೆ.ಆರ್‌.ಆಸ್ಪತ್ರೆಗೆ ಶಾಸಕ ಎಲ್.ನಾಗೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.jk

ಆಸ್ಪತ್ರೆಯ ವಾರ್ಡ್ ಗಳ ಪರಿಶೀಲನೆ ನಡೆಸಿದ ಶಾಸಕ ಎಲ್. ನಾಗೇಂದ್ರ, ಆಸ್ಪತ್ರೆಯ ಡೀನ್ ನಂಜರಾಜ್ ಹಾಗೂ ವೈದ್ಯಕೀಯ ಅಧೀಕ್ಷಕ ನಂಜುಂಡಸ್ವಾಮಿಯಿಂದ ಮಾಹಿತಿ ಪಡೆದರು. ಕೂಡಲೇ ಅವ್ಯವಸ್ಥೆ ಸರಿಪಡಿಸಿ ಸೆಕ್ಯುರಿಟಿ ಹೆಚ್ಚಿಸುವಂತೆ ಸೂಚನೆ ನೀಡಿದರು.

ಬಳಿಕ ಈ ಬಗ್ಗೆ ಮಾತನಾಡಿದ ಶಾಸಕ ಎಲ್. ನಾಗೇಂದ್ರ, ಈ ಬಗ್ಗೆ ಶೀಘ್ರದಲ್ಲೇ ಸಭೆ ನಡೆಸುತ್ತೇನೆ. ಕೆ.ಆರ್ ಆಸ್ಪತ್ರೆ ಹೆಚ್ಚಿನ ಸೆಕ್ಯುರಿಟಿಯ ಅವಶ್ಯಕತೆ ಇದೆ‌. ಮೂರು ಪಾಳಿಯಲ್ಲಿ ಸೆಕ್ಯುರಿಟಿ ಕೆಲಸ ನಿರ್ವಹಿಸುವಂತೆ ಸೂಚಿಸಿದ್ದೇನೆ. ಜೊತೆಗೆ ಎಲ್ಲಾ ಭಾಗಗಳಲ್ಲೂ ಸಿಸಿಟಿವಿ ಅಳವಡಿಸುವಂತೆ ಹೇಳಿದ್ದೇನೆ. ಸದ್ಯಕ್ಕೆ ಚಲುವಾಂಬ ಆಸ್ಪತ್ರೆಯಲ್ಲಿ ಮಹಿಳೆ ಚಿಕಿತ್ಸೆ ನೀಡಲಾಗ್ತಿದೆ. ಕೊರೊನಾದಿಂದಾಗಿ ಜಯದೇವ ಬಿಲ್ಡಿಂಗ್ ನಲ್ಲಿದ್ದ ರೋಗಿಗಳಿಗನ್ನ ಇಲ್ಲಿಗೆ ಶಿಫ್ಟ್ ಮಾಡಲಾಗಿತ್ತು. ಈ ವೇಳೆ ಕೃತ್ಯ ನಡೆದಿದೆ. ಸದ್ಯ ಮುಂದೆ ಈ ರೀತಿಯಾದ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಿದ್ದೇವೆ ಎಂದರು.

Key words: Rape rape case –mysore-KR Hospital-MLA- L Nagendra