ಬೆಂಗಳೂರು,ಮಾರ್ಚ್,4,2021(www.justkannada.in): ರಮೇಶ್ ಜಾರಕಿಹೊಳಿ ವಿರುದ್ಧ ವ್ಯವಸ್ಥಿತ ಪಿತೂರಿ ನಡೆದಿದೆ. ಈ ಪ್ರಕರಣದ ಹಿಂದೆ ಯಾರದ್ದೂ ಕೈವಾಡವಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಶಾಸಕ ರಾಜುಗೌಡ ಆಗ್ರಹಿಸಿದರು.
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ರಾಜುಗೌಡ, ರಮೇಶ್ ಜಾರಕಿಹೊಳಿ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಲಾಗಿದೆ. ಆ ವಿಡಿಯೋ ನೊಡಿದರೇ ಪಿತೂರಿ ಎಂದು ಹೇಳಬಹುದು. ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ಬಹಿರಂಗವಾಗಬೇಕು ಎಂದು ಹೇಳಿದರು.
![rasaleele-cd-release-case-mla-raju-gowda-batting-ramesh-jarakiiholi](https://www.justkannada.in/wp-content/uploads/2021/03/fsd-300x169.jpg)
ರಮೇಶ್ ಜಾರಕಿಹೊಳಿ ಅವರನ್ನು ನಾನು ಹಲವು ವರ್ಷಗಳಿಂದ ನೋಡಿದ್ದೇನೆ. ಅವರು ಅಂತಹ ತಪ್ಪು ಮಾಡುವವರಲ್ಲ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಯಾರದೋ ಒತ್ತಾಯಕ್ಕಾಗಿ ರಾಜೀನಾಮೆ ನೀಡಿಲ್ಲ. ಇದು ಅವರ ವಿರುದ್ಧ ನಡೆದಿರುವ ವ್ಯವಸ್ಥಿತ ಷಡ್ಯಂತ್ರ. ಈ ಬಗ್ಗೆ ತನಿಖೆಯಾಗಬೇಕು ಎಂದು ರಾಜುಗೌಡ ಆಗ್ರಹಿಸಿದರು.
Key words: Rasaleele- CD –release- case-MLA- Raju Gowda- batting – Ramesh Jarakiiholi.