ಬೆಂಗಳೂರು,ಜೂನ್,4,2025 (www.justkannada.in): 18 ವರ್ಷಗಳ ಬಳಿಕ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇಂದು ಬೆಂಗಳೂರಿನಲ್ಲಿ ಸಿಎ ಸಿದ್ದರಾಮಯ್ಯರನ್ನ ಭೇಟಿಯಾಗಿ ನಂತರ ವಿಜಯೋತ್ಸವ ಮೆರವಣಿಗೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಇಂದು ಬೆಂಗಳೂರಿನಲ್ಲಿ ವಿಜಯಯಾತ್ರೆ ನಡೆಸಲಿದೆ. ಅಹಮದಾಬಾದ್ ನಿಂದ ಆರ್ಸಿಬಿ ತಂಡವು ವಿಶೇಷ ವಿಮಾನದ ಮೂಲಕ ಇಂದು ಮಧ್ಯಾಹ್ನ 1.30 ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಆ ಬಳಿಕ ವಿಜಯಯಾತ್ರೆ ನಡೆಯಲಿದೆ ಎನ್ನಲಾಗಿದೆ.
ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯರನ್ನ ಆಟಗಾರರು ಭೇಟಿಯಾಗಲಿದ್ದು ನಂತರ 5 ಗಂಟೆಗೆ ವಿಧಾನಸೌಧದಿಂದ ಆರ್ಸಿಬಿ ತಂಡದ ವಿಜಯಯಾತ್ರೆ ಆರಂಭವಾಗಲಿದ್ದು, ಎಂ. ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಈ ಪರೇಡ್ ನಡೆಯಲಿದೆ ಎನ್ನಲಾಗಿದೆ. ಇನ್ನು ಈ ವಿಜಯಯಾತ್ರೆ ವೇಳೆ 2024 ರಲ್ಲಿ ವುಮೆನ್ಸ್ ಪ್ರೀಮಿಯರ್ ಲೀಗ್ ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆರ್ಸಿಬಿ ಮಹಿಳಾ ತಂಡವನ್ನು ಸಹ ಕರೆತರುವ ಸಾಧ್ಯತೆಯಿದೆ.
Key words: RCB team, victory parade, Bengaluru, today