ಹೆಚ್ಚುವರಿ ಅಕ್ಕಿ ಪೂರೈಕೆಗೆ ನಿರಾಕರಣೆ : ಕೇಂದ್ರದ ವಿರುದ‍್ಧ ಡಿಸಿಎಂ ಡಿ.ಕೆ ಶಿವಕುಮಾರ್  ವಾಗ್ದಾಳಿ.

ಮೈಸೂರು,ಜೂನ್,15,2023(www.justkannada.in): ಕೇಂದ್ರದಿಂದ ಅಕ್ಕಿ ಸರಬರಾಜು ನಿಲುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಅವರೇನು ಪುಕ್ಸಟ್ಟೆ ಅಕ್ಕಿ ಕೊಡುತ್ತಿಲ್ಲ. ಕೇಂದ್ರಕ್ಕೆ ಅಕ್ಕಿ ಕೊಡುವಂತೆ ನಾವು  ಪುಕ್ಸಟ್ಟೆ ಕೇಳಿಲ್ಲ ಎಂದು ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಜುಲೈ 1 ರಿಂದ ಅನ್ನ ಭಾಗ್ಯ ಯೋಜನೆಯಡಿ 10kg ಅಕ್ಕಿ ಕೊಡಲು ತೀರ್ಮಾನ ಮಾಡಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ, ನಮ್ಮಲ್ಲಿ ಇಲ್ಲ ಎಂದು ಕಾಗದ ಬರೆದಿದ್ದಾರೆ.  ಸಿಎಂ ಈಗಾಗಲೇ ಛತ್ತಿಸ್ ಘಡ್, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯದ ಜೊತೆ ಮಾತನಾಡಿ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿರುವುದನ್ನ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ.  ನಮಗೆ ಕೊಡಬೇಕಾಗುತ್ತೆ ಎನ್ನುವ ಕಾರಣಕ್ಕೆ ಎಲ್ಲಾ ರಾಜ್ಯಗಳಿಗೂ ಅಕ್ಕಿ ಕೊಡುವುದಿಲ್ಲ ಎಂದು ವಿತ್ ಡ್ರಾ ಮಾಡಿದ್ದಾರೆ. ಈ ಬಗ್ಗೆ ದೊಡ್ಡ ಹೋರಾಟ ಮಾಡುತ್ತೇವೆ. ರೂಪುರೇಷೆಯ ಬಗ್ಗೆ ನಾಳೆ ಮಾತನಾಡುತ್ತೇನೆ ಎಂದರು.

ಕರ್ನಾಟಕದ ರೈತರಿಂದಲೇ ಅಕ್ಕಿ ಖರೀದಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಓಪನ್ ಮಾರ್ಕೆಟ್ ನಲ್ಲಿ ಅಕ್ಕಿ ಖರೀದಿ ಮಾಡಲು ಸಾಧ್ಯವಿಲ್ಲ. ಕೆಲವು ಸಂಸ್ಥೆಗಳು, ಬೇರೆ ಬೇರೆ ಏಜೆನ್ಸಿಗಳ ಮೂಲಕ ಖರೀದಿ ಮಾಡಬೇಕು. ಯಾರ ಬಳಿಯೂ‌ ಬೆಟ್ಟು ತೋರಿಸುಕೊಳ್ಳುವ ರೀತಿ ಕೆಲಸ ಮಾಡುವುದಿಲ್ಲ. ತಿನ್ನುವ ಅಕ್ಕಿ ಹಾಗೂ ಬಡವರ ಮೇಲೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಖಂಡಿಸಿದರು.

Key words: Refusal – supply- rice-DCM -DK Shivakumar – against – Centre.