ಹುಲಿ ಗಣತಿ ವರದಿ ಬಿಡುಗಡೆ: ಪ್ರಧಾನಿ ಮೋದಿ ಭಾಗಿ

ಮೈಸೂರು, ಏಪ್ರಿಲ್ 09, 2023 (www.justkannada.in): ಮೈಸೂರಿನ ಕರಾಮುವಿ ಘಟಿಕೋತ್ಸವ ಭವನದಲ್ಲಿ 2022 ರ ಹುಲಿ ಗಣತಿ ವರದಿ ಬಿಡುಗಡೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಂಡೀಪುರದಿಂದ ವಿಶೇಷ ಹೆಲಿಕಾಫ್ಟರ್ ಮೂಲಕ ಮೈಸೂರಿನ ಓವಲ್ ಮೈದಾನದ ಹೆಲಿಪ್ಯಾಡ್ ಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್, ಕೇಂದ್ರದ ಪರಿಸರ ಅರಣ್ಯ ಹಾಗೂ ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವರಾದ ಅಶ್ವಿನಿ ಕುಮಾರ್ ಚೌಬೆ ಪ್ರಧಾನ ಮಂತ್ರಿಯವರನ್ನು ಸ್ವಾಗತಿಸಿದರು.