ಬೆಂಗಳೂರು,ಫೆಬ್ರವರಿ,14,2023(www.justkannada.in): ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಇರಲ್ಲ ಔಷಧಿ ಗುಣ ದೆ ಎಂದು ವರದಿ ನೀಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.![]()
ವಿಧಾನಪರಿಷತ್ ನಲ್ಲಿ ಇಂದು ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಒಂದು ವರ್ಷದ ಹಿಂದೆ ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಇದೆಯೇ ಎಂಬ ಬಗ್ಗೆ ಸಂಶೋಧನೆ ನಡೆಸಲು ಹೇಳಿದ್ದವು . ಸಂಶೋದನೆ ನಡೆಸಲು ರಾಮಯ್ಯ ತಾಂತ್ರಿಕವಿವಿಗೆ ಹೇಳಿದ್ದವು . ತಾಂತ್ರಿಕ ವಿವಿ ಸಂಶೋಧನಾ ವರದಿ ನೀಡಿದೆ.
ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಇರಲ್ಲ ಔಷಧಿ ಇರುತ್ತೆ ಎಂದು ವರದಿ ಸಲ್ಲಿಕೆ ಮಾಡಿದೆ. ಆದರೆ ಹಿಂದಿನ ಸರ್ಕಾರ ಅಡಿಕೆಯಲ್ಲಿ ಕ್ಯಾನ್ಸರ್ ಗುಣ ಇದೆ ಎಂದಿತ್ತು . ಈ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣವಿದೆ. ನಾವು ಸುಪ್ರೀಂಕೋರ್ಟ್ ಗೆ ಹೋಗುತ್ತೇವೆ ಎಂದು ಅರಗ ಜ್ಞಾನೇಂದ್ರ ಹೇಳಿದರು.
Key words: report- no carcinogenic-elements – betelnut -Home Minister- Araga jnanendra.







