‘ಅಕ್ಕಿ ರಾಜಕೀಯ’: ಸ್ಪಷ್ಟನೆ ನೀಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್

ಬೆಂಗಳೂರು, ಜೂನ್ 21, 2023 (www.justkannada.in): ಕೇಂದ್ರ ಸರ್ಕಾರ ಅಕ್ಕಿ ಪೂರೈಕೆಯಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬ ಕಾಂಗ್ರೆಸ್ ಆರೋಪದ ಕುರಿತು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ ನೀಡಿದ್ದಾರೆ.

ಮುಕ್ತ ಮಾರುಕಟ್ಟೆಯಲ್ಲಿ ಧಾನ್ಯದ ಬೆಲೆ ಏರಿಕೆಯಾಗುದಂತೆ ನಿಗಾ ವಹಿಸಲು ಕೇಂದ್ರ ಕ್ರಮ ವಹಿಸಿದೆ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಧಾನ್ಯದ ಬೆಲೆ ಏರಿಕೆ ತಡೆ ಹಾಗೂ ಕೈಗೆಟುಕುವ ದರದಲ್ಲಿ ಜನತೆಗೆ ಧಾನ್ಯ ಸಿಗುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ಅಕ್ಕಿ ನೀಡಲು ನಿರಾಕರಿಸಲಾಗಿದೆ ಎಂದು ಹೇಳಿದ್ದಾರೆ.

ಈ ಮಧ್ಯೆ ಕೇಂದ್ರ ಸರ್ಕಾರ, ಅಕ್ಕಿ ಪೂರೈಕೆಯಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ನಿನ್ನೆ ರಾಜ್ಯದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು.