Thursday, August 13, 2026

BDA Apartments

Home Front Page ಬಿಜೆಪಿ ಅವಧಿಯಲ್ಲಿ 300 ಕೋಟಿ ರೂ.ಗೂ ಅಧಿಕ ಹಗರಣ: ತನಿಖೆಗೆ ನಿರ್ಧಾರ- ಡಿಸಿಎಂ ಡಿಕೆ ಶಿವಕುಮಾರ್

ಬಿಜೆಪಿ ಅವಧಿಯಲ್ಲಿ 300 ಕೋಟಿ ರೂ.ಗೂ ಅಧಿಕ ಹಗರಣ: ತನಿಖೆಗೆ ನಿರ್ಧಾರ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ,19,2024 (www.justkannada.in):  ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣವನ್ನ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,  ಸದನದಲ್ಲಿ ಬಿಜೆಪಿಯವರ ಅವಧಿಯಲ್ಲಿ ಆಗಿರುವ  ಹಗರಣದ ಬಗ್ಗೆ ಪ್ರಸ್ತಾಪ ಮಾಡುತ್ತೇವೆ.  ಬಿಜೆಪಿ ಅವಧಿಯಲ್ಲಿ ವಿವಿಧ ಇಲಾಖೆಯಲ್ಲಿ 300 ಕೋಟಿ ರೂ.ಗೂ ಅಧಿಕ ಹಗರಣ ನಡೆದಿದೆ.  ಪೂರಕ ದಾಖಲೆಯೊಂದಿಗೆ ಸದನದಲ್ಲಿ ಬಹಿರಂಗ ಪಡಿಸುತ್ತೇವೆ ಎಂದರು.

ಹಾಗೆಯೇ ಬಿಜೆಪಿ ಅವಧಿಯಲ್ಲಿ ಆಗಿರುವ ಹಗರಣಗಳ ಬಗ್ಗೆ ತನಿಖೆ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Key words: Rs 300 crore, scam, BJP, DCM, DK Shivakumar