ಆರ್ ಎಸ್ ಎಸ್ ತತ್ವವು  ಪ್ರಜಾಪ್ರಭುತ್ವ ವಿರೋಧಿ, ದೇಶ‌ ವಿರೋಧಿ-ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ.

ಕಲ್ಬುರ್ಗಿ,ಸೆಪ್ಟಂಬರ್,16,2023(www.justkannada.in): ಆರ್ ಎಸ್ ಎಸ್ ತತ್ವವು  ಪ್ರಜಾಪ್ರಭುತ್ವ ವಿರೋಧಿ, ದೇಶ‌ ವಿರೋಧಿಯಾಗಿದೆ  ಎಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಆರ್​ಎಸ್​ಎಸ್​ ತತ್ವ ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ. ಆರ್ ಎಸ್ ಎಸ್ ತತ್ವದಲ್ಲಿ ಆರ್ಥಿಕ ಸಮಾನತೆ ಇಲ್ಲ, ದೇಶಭಕ್ತಿಯೂ ಇಲ್ಲ ಎಂದು ಕಿಡಿಕಾರಿದರು.

ನಾನೇನು ಆರ್​ಎಸ್​ಎಸ್ ಬಗ್ಗೆ ಮಾತನಾಡಲು ಭಯ ಪಡಲ್ಲ. ಸರ್ಕಾರದ ಶೈಕ್ಷಣಿಕ ಕೇಂದ್ರಗಳಲ್ಲಿ ಕೇಸರಿಕರಣ ನಡೆಯಬಾರದು. ಆರ್​​ಎಸ್​ಎಸ್​ನವರಿಗೆ ಆಸಕ್ತಿ ಇದ್ದರೆ ಖಾಸಗಿಯಾಗಿ ನಡೆಸಲಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

Key words: RSS – anti-democratic-anti-national – Minister- Priyank Kharge