ಲೈಂಗಿಕ ದೌರ್ಜನ್ಯ ಕೇಸ್: ಸಾಧುಕೋಕಿಲ, ಮಂಡ್ಯ ರಮೇಶ್ ವಿರುದ್ದದ ಪ್ರಕರಣ ರದ್ದು

ಬೆಂಗಳೂರು,ಫೆಬ್ರವರಿ,11,2026 (www.justkannada.in):  ಹಾಸ್ಯನಟರಾದ ಸಾಧುಕೋಕಿಲ ಮತ್ತು ಮಂಡ್ಯ ರಮೇಶ್ ವಿರುದ್ದ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಈ ಮೂಲಕ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಸಾಧುಕೋಕಿಲ, ಮಂಡ್ಯ ರಮೇಶ್ ಗೆ ಬಿಗ್ ರಿಲೀಫ್ ಸಿಕ್ಕಿದೆ.  ಹೈಕೋರ್ಟ್ ನ್ಯಾಯಮೂರ್ತಿ ಎಂಜಿ ಉಮಾ ಅವರಿದ್ದ ಪೀಠ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದೆ.

ಸಾಧುಕೋಕಿಲ ಮತ್ತು ಮಂಡ್ಯ ರಮೇಶ್ ವಿರುದ್ದ ಮಸಾಜ್ ಮಾಡಿಸಿಕೊಳ್ಳುವಾಗ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪ ಕೇಳಿ ಬಂದಿತ್ತು. ಮೈಸೂರಿನ ಬ್ಯೂಟಿ ಪಾರ್ಲರ್ ಮಹಿಳೆಯೊಬ್ಬರು ಈ ರೀತಿ ಆರೋಪ ಮಾಡಿದ್ದರು.

ಪ್ರಕರಣ ಸಂಬಂಧ ಮೈಸೂರಿನ ಸರಸ್ವತಿಪುರಂ ಠಾಣಾ ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು.  ಆರೋಪಪಟ್ಟಿ ರದ್ದುಗೊಳಿಸುವಂತೆ ಕೋರಿ ಸಾಧು ಕೋಗಿಲ ಮತ್ತು ಮಂಡ್ಯರಮೇಶ್ ಅರ್ಜಿ ಸಲ್ಲಿಸಿದ್ದರು.

ಎಫ್ ಐಆರ್ ನಲ್ಲಿ ಹೆಸರಿಲ್ಲ. ಆರೋಪಕ್ಕೆ ಸಾಕ್ಷ್ಯಗಳಿಲ್ಲವೆಂದು ಅರ್ಜಿದಾರರ ಪರ ವಕೀಲ ಹೆಚ್ ಎಸ್ ಚಂದ್ರಮೌಳಿ ವಾದ ಮಂಡಿಸಿದ್ದರು.  ಸಾಕ್ಷಾಧಾರ ಕೊರತೆ ಹಿನ್ನೆಲೆಯಲ್ಲಿ ಹೈಕೋರ್ಟ್ ಪ್ರಕರಣವನ್ನು ರದ್ದುಪಡಿಸಿದೆ.

Key words: Sadhukokila, Mandya Ramesh, Sexual assault case, Case,  cancelled