ಅಪ್ಪು ಫ್ಯಾನ್ಸ್’ಗೆ ಖುಷಿ ಸುದ್ದಿ ಕೊಟ್ಟ ಸಂತೋಷ್ ರಾಮ್

ಬೆಂಗಳೂರು, ಜುಲೈ 30, 2020 (www.justkannada.in): ನಿರ್ದೇಶಕ ಸಂತೋಷ ರಾಮ್ ಯುವರತ್ನ ಪೋಸ್ಟರ್ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಚಿತ್ರದ ನಿರ್ದೇಶಕ ಸಂತೋಷ್ ಅವರು ಟ್ವೀಟ್ ಮಾಡಿದ್ದಾರೆ. ಅಭಿಮಾನಿಗಳ ಕೋರಿಕೆಗಾಗಿ “ಯುವರತ್ನ” ಪೋಸ್ಟರ್ ವರಮಹಾಲಕ್ಷ್ಮಿ ಹಬ್ಬಕ್ಕೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಲಾಕ್‍ಡೌನ್ , ಕೊರೊನಾ ಪರಿಣಾಮದಿಂದ ಚಿತ್ರ ಬಿಡುಗಡೆ ಮುಂದೂಡಲಾಗಿದ್ದು, ಇನ್ನೂ ರಿಲೀಸ್ ದಿನಾಂಕವನ್ನು ಚಿತ್ರತಂಡ ಬಹಿರಂಗಪಡಿಸಿಲ್ಲ. ಅಭಿಮಾನಿಗಳು ಬಿಡುಗಡೆ ದಿನಾಂಕದ ಘೋಷಣೆಗಾಗಿ ಕಾಯುತ್ತಿದ್ದಾರೆ.