Saturday, August 8, 2026

BDA Apartments

Home Front Page ವೀರ ಸಾವರ್ಕರ್ ಫೋಟೊ ಅಳವಡಿಕೆ: ಸುವರ್ಣಸೌಧದ ಮೆಟ್ಟಿಲಿನ ಮೇಲೆ  ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ.

ವೀರ ಸಾವರ್ಕರ್ ಫೋಟೊ ಅಳವಡಿಕೆ: ಸುವರ್ಣಸೌಧದ ಮೆಟ್ಟಿಲಿನ ಮೇಲೆ  ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ.

ಬೆಳಗಾವಿ,ಡಿಸೆಂಬರ್,19,2022(www.justkannada.in): ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ  ಆರಂಭವಾಗಲಿದ್ದು ಈ ಮುನ್ನವೇ ರಾಜ್ಯ ಬಿಜೆಪಿ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ತಟ್ಟಿದೆ.

ಇಂದಿನಿಂದ ಸುವರ್ಣಸೌಧದಲ್ಲಿ 10 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಬಿಜೆಪಿ ಸರ್ಕಾರದ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಈ ಮಧ್ಯೆ ಸುವರ್ಣಸೌಧದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಫೋಟೊ ಹಾಕಿದ್ದಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸುವರ್ಣ ಸೌಧದ ಮೆಟ್ಟಿಲ ಬಳಿ ಪ್ರತಿಭಟನೆ ನಡೆಸಿದರು.

ಸುವರ್ಣ ಸೌಧದ ಮುಖ್ಯದ್ವಾರದ ಬಳಿ ಜಗಜ್ಯೋತಿ ಬಸವಣ್ಣ, ರಾಷ್ಟ್ರಕವಿ ಕುವೇಂಪು, ವಾಲ್ಮಿಕಿ ಅವರಂತಹ ಮಹಾನೀಯರ ಫೋಟೋ  ಹಿಡಿದು ಕಾಂಗ್ರೆಸ್ ನಾಯಕರು ಧರಣಿ ನಡೆಸಿದರು. ಈ ವೇಳೆ ಮಾಜಿ ಸಚಿವರಾದ ಹೆಚ್.ಕೆ ಪಾಟೀಲ್ ಯು.ಟಿಖಾದರ್ ಸೇರಿ ಹಲವರು ನಾಯಕರು ಉಪಸ್ಥಿತರಿದ್ದರು.

Key words: Savarkar -photo -Protest – Congress leaders – Suvarnasoudha.