ಸಿದ್ದರಾಮಯ್ಯ ದೊಡ್ಡ ಕೋಮುವಾದಿ- ಶಾಸಕ ಅಶ್ವಥ್ ನಾರಾಯಣ್ ವಾಗ್ದಾಳಿ.

ಬೆಳಗಾವಿ,ಡಿಸೆಂಬರ್,5,2023(www.justkannada.in): ಮುಸ್ಲೀಮರಿಗೆ ಅನ್ಯಾಯವಾಗಲು ಬಿಡಲ್ಲ. ಮುಸ್ಲೀಮರಿಗೆ ದೇಶದ ಸಂಪತ್ತು ಹಚ್ಚುತ್ತೇವೆ  ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ವಾಗ್ದಾಳೀ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಸಚಿವ ಅಶ್ವಥ್ ನಾರಾಯಣ್, ಅಲ್ಪಸಂಖ್ಯಾತರು,  ಬಹುಸಂಖ್ಯಾತರು ಅನ್ನೋದು ಬಿಡಬೇಕು. ಭ್ರಷ್ಟಾಚಾರ ನಿರ್ಮೂಲನೆ ಮಾಡಿ, ಜನಪರ ಆಡಳಿತ ನೀಡಿದರೇ  ಎಲ್ಲಾ ಸಮುದಾಯಗಳಿಗೂ ಸಲ್ಲುವಂತಹದ್ದು ಸಲ್ಲಲಿದೆ ಎಂದರು.

ದೊಡ್ಡ ಕೋಮುವಾದಿ ಅಂದ್ರೆ ಕಾಂಗ್ರೆಸ್ ನವರು. ಸಿದ್ದರಾಮಯ್ಯ ದೊಡ್ಡ ಕೋಮುವಾದಿ. ಸುಖದಲ್ಲಿ ತೇಲುತ್ತಿರುವ ವ್ಯಕ್ತಿ ಅಂದ್ರೆ ಸಿದ್ದಾರಾಮಯ್ಯ  ಎಂದು ಅಶ್ವಥ್ ನಾರಾಯಣ್ ಕಿಡಿಕಾರಿದರು.

Key words: Siddaramaiah – big -communalist- MLA -Aswath Narayan lashed