ಮೈಸೂರು,ಸೆಪ್ಟಂಬರ್,12,2026 (www.justkannada.in): ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೈವಾಡವಿದೆ ಅನ್ನೋದು ರಾಜಕೀಯ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ಎಲ್ಲದಕ್ಕೂ ರಾಜಕೀಯ ಮಾಡೋದು ಸರಿಯಲ್ಲ. ಈ ಹಿಂದೆ ಬಿಜೆಪಿ ನಾಯಕರ ಮನೆ ಮೇಲೂ ಇಡಿ ದಾಳಿಯಾಗಿದೆ. ನಟ ನಟಿಯರ ಮನೆ ಮೇಲೂ ದಾಳಿಯಾಗಿದೆ. ಇಡಿ ಅಧಿಕಾರಿಗಳ ದಾಳಿ ವಿಚಾರದಲ್ಲಿ ರಾಜಕೀಯ ಮಾಡೋದು ತಪ್ಪು ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ಚಿತಾವಣೆ ಇರುವ ಒಂದೇ ವಿಚಾರ ಅಂದರೇ ಮಾಜಿ ಸಚಿವ ಮಹದೇವಪ್ಪ ಮನೆ ಖಾಲಿ ಮಾಡಿಸಿದ್ದು. ಮಹದೇವಪ್ಪರನ್ನ ಏಕಾಏಕಿ ಮನೆ ಖಾಲಿ ಮಾಡಿಸಿದ್ದು ಸಿದ್ದರಾಮಯ್ಯ ಎಂದು ಪ್ರತಾಪ್ ಸಿಂಹ ಹೇಳಿದರು.
Key words: Siddaramaiah, involvement, ED raid, Satish Jarkiholi, political, Pratap Simha.







