ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಆತಂಕಪಡುವ ಅಗತ್ಯವಿಲ್ಲ- ಗೃಹಸಚಿವ ಡಾ.ಜಿ.ಪರಮೇಶ್ವರ್.

ಬೆಂಗಳೂರು,ಅಕ್ಟೋಬರ್,3,2023(www.justkannada.in): ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಘಟನೆಗೆ ಕಾರಣ ಯಾರು ಅನ್ನೋದರ ಬಗ್ಗೆ ತನಿಖೆ ಮಾಡುತ್ತಿದ್ದಾರೆ.  ಕಾನೂನು ಸುವ್ಯವಸ್ಥೆ ಎಡಿಜಿಪಿಯನ್ನ ಘಟನಾ ಸ್ಥಳಕ್ಕೆ ಕಳಿಸಿದ್ದೇವು . ಎರಡು ಕಡೆಯಿಂದಲೂ ಕಲ್ಲು ಹೊಡೆದಿದ್ದಾರೆ. ಪ್ರಕರಣ ಸಂಬಂಧ ಕೆಲವರ ಬಂಧನ ಆಗಿದೆ. ತನಿಖೆ ನಡೆಯುತ್ತಿದೆ. ತನಿಖೆ ಮುಗಿದ ನಂತರ ಪೂರ್ಣಮಾಹಿತಿ ಲಭ್ಯವಾಗಲಿದೆ ಎಂದು ತಿಳಿಸಿದರು.

Key words: situation – control – Shimoga- Home Minister- Dr. G. Parameshwar.