ನಾಳಿನ ಮೈಸೂರು ಸಮಾವೇಶಕ್ಕೆ ಶ್ರೀನಿವಾಸ್ ಪ್ರಸಾದ್ ಬರ್ತಾರೆ- ಮಾಜಿ ಸಿಎಂ ಬಿಎಸ್ ವೈ.

ಮೈಸೂರು, ಏಪ್ರಿಲ್,13,2024 (www.justkannada.in):  ನಾಳೆ ಮೈಸೂರಿನಲ್ಲಿ ನಡೆಯುವ ಪ್ರಧಾನಿ ಮೋದಿ ಸಮಾವೇಶಕ್ಕೆ ವಿ. ಶ್ರೀನಿವಾಸ್ ಪ್ರಸಾದ್  ಬರಲಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ನುಡಿದರು.

ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ವಿ.ಶ್ರೀನಿವಾಸ್ ಪ್ರಸಾದ್ ನಾಳಿನ ಪ್ರಧಾನಿ ಮೋದಿ ಸಮಾವೇಶಕ್ಕೆ ಹೋಗಲ್ಲ ಎಂದಿದ್ದರು. ಈ ಕುರಿತು ಮಾತನಾಡಿದ ಬಿಎಸ್ ಯಡಿಯೂರಪ್ಪ, ನಾಳೆ ಮೈಸೂರಿನಲ್ಲಿ ಬಿಜೆಪಿ-ಜೆಡಿಎಸ್ ಸಮಾವೇಶ ಇದೆ.  ಸಮಾವೇಶಕ್ಕೆ ಶ್ರೀನಿವಾಸ್ ಪ್ರಸಾದ್ ಬರುತ್ತಾರೆ.  ಮೈಸೂರು ಭಾಗದಲ್ಲಿ ಶ್ರೀನಿವಾಸ್ ಪ್ರಸಾದ್ ನಮಗೆ ಶಕ್ತಿ . ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ ಎಂದರು.

Key words: Srinivas Prasad, attend,  BS yeddyurappa