ಬೆಂಗಳೂರು,ಆಗಸ್ಟ್,30,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು( ಆರ್ ಸಿಬಿ) ತಲಾ 25 ಲಕ್ಷ ರೂ ಪರಿಹಾರ ಘೋಷಿಸಿದೆ.
ಆರ್ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಪ್ರತಿ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಆರ್ಥಿಕ ಸಹಾಯ ನೀಡಿರುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅಧಿಕೃತವಾಗಿ ಪ್ರಕಟಿಸಿದೆ.
11 ಅಭಿಮಾನಿಗಳ ಸಾವಿನ ಬೆನ್ನಲ್ಲೇ ಆರ್ಸಿಬಿ ಕೇರ್ಸ್ ಶುರು ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಇದೀಗ ಮೃತಪಟ್ಟ ಕುಟುಂಬಗಳಿಗೆ ಧನ ಸಹಾಯ ನೀಡಿದೆ. ಅಲ್ಲದೆ ಆರ್ಸಿಬಿ ಕೇರ್ಸ್ ಮೂಲಕ ಮತ್ತಷ್ಟು ಸಹಾಯಹಸ್ತ ನೀಡುವ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸುವ ಭರವಸೆಯನ್ನು ಸಹ ನೀಡಿದ್ದಾರೆ.
Key words: stampede case, RCB, announces, Rs 25 lakh, compensation