ಜುಲೈ 3ರಿಂದ ರಾಜ್ಯ ಬಜೆಟ್ ಅಧಿವೇಶನ: ಜು.7ರಂದು ಆಯವ್ಯಯ ಮಂಡನೆ- ಸಿಎಂ ಸಿದ‍್ಧರಾಮಯ್ಯ.

ದಾವಣಗೆರೆ,ಜೂನ್,5,2023(www.justkannada.in): ಜುಲೈ 3ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು ಜುಲೈ 7 ರಂದು ಬಜೆಟ್ ಮಂಡಿಸಲಾಗುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.

ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಜುಲೈ 3ರಿಂದ ರಾಜ್ಯ ಬಜೆಟ್ ಅಧಿವೇಶನ ನಡೆಯಲಿದೆ. ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ಸದನದಲ್ಲಿ 3 ದಿನ ಚರ್ಚೆ ನಡೆಯಲಿದೆ ಎಂದರು.

ಜುಲೈ 7 ರಂದು ಪೂರ್ಣಪ್ರಮಾಣದ ಬಜೆಟ್ ಮಂಡಿಸುತ್ತೇವೆ. ಮಳೇ ಅವಾಂತರ ತಪ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ.  ಪ್ರವಾಹ ಪರಿಸ್ಥಿತಿ ಬರದಂತೆ ಮುನ್ಸೂಚನೆ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.

Key words: State -budget- session -July 3-Budget – June 7-CM Siddhuramaiah.