ಸೋಮವಾರ ಅಮಾವಾಸ್ಯೆ! : ಬುಧವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆ

ಬೆಂಗಳೂರು, ಜೂನ್ 02, 2019 (www.justkannada.in): ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ಸಿಕ್ಕಿದೆ.

ಬುಧವಾರ ಮೂವರು ಶಾಸಕರು ಎಚ್.ಡಿ.ಕುಮಾರಸ್ವಾಮಿ ಸಂಪುಟ ಸೇರುವುದು ಖಚಿತವಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಶನಿವಾರ ರಾತ್ರಿ ಈ ಕುರಿತು ಮಾತುಕತೆ ನಡೆಸಿದ್ದಾರೆ.

ಸೋಮವಾರವೇ ಸಂಪುಟ ವಿಸ್ತರಣೆಗೆ ಚಿಂತನೆ ನಡೆದಿತ್ತು. ಆದರೆ, ಅಮಾವಾಸ್ಯೆ ಎಂಬ ಕಾರಣಕ್ಕೆ ಬುಧವಾರಕ್ಕೆ ಮುಂದೂಡಲಾಗಿದೆ.
ಕಾಂಗ್ರೆಸ್‌- ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿರುವ ಇಬ್ಬರು ಪಕ್ಷೇತರರು ಸಂಪುಟ ಸೇರುವುದು ಖಚಿತವಾಗಿದೆ. ಇನ್ನೊಂದು ಸ್ಥಾನ ಯಾರಿಗೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಜೆಡಿಎಸ್‌ ಕೋಟಾದ 2, ಕಾಂಗ್ರೆಸ್‌ ಕೋಟಾದ 1 ಸ್ಥಾನ ಸಂಪುಟದಲ್ಲಿ ಖಾಲಿ ಇದೆ.