ದೀಪಾವಳಿ ಹಬ್ಬದಂದು ಗೋಪೂಜೆ ಮಾಡಲು ದೇವಾಲಯಗಳಿಗೆ ರಾಜ್ಯ ಸರ್ಕಾರ ಆದೇಶ.

ಬೆಂಗಳೂರು,ಅಕ್ಟೋಬರ್,26,2021(www.justkannada.in): ದೀಪಾವಳಿ ಹಬ್ಬದಂದು ಗೋ ಪೂಜೆ ಮಾಡುವಂತೆ ದೇವಾಲಯಗಳಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದೀಪಾವಳಿ ಹಬ್ಬದಂದು ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಮುಜರಾಯಿ ಇಲಾಖೆಯ ಎಲ್ಲಾ ದೇವಸ್ಥಾನದಲ್ಲಿ ಗೋಪೂಜೆ ಮಾಡುವಂತೆ ತಿಳಿಸಿದೆ. ನವೆಂಬರ್‌ 5ರಂದು ಆಚರಣೆ ಮಾಡುವ ಬಲಿಪಾಡ್ಯಮಿಯಂದು ಗೋ ಪೂಜೆ ಮಾಡಬೇಕು.  ಅಂದು ಸಂಜೆ 5.30ರಿಂದ 6.30ರ ಗೋಧೂಳಿ ಲಗ್ನದಲ್ಲಿ ಪೂಜೆ ಮಾಡುವಂತೆ ಆದೇಶ  ಹೊರಡಿಸಲಾಗಿದೆ.covid-dead-body-cancels-license-order-state-government

ಹಬ್ಬಗಳಲ್ಲಿ ಮನೆಯಲ್ಲಿರುವ ದನ ಕರುಗಳಿಗೆ ಅಲಂಕರಿಸಿ, ಅವುಗಳಿಗೆ ಪೂಜೆ ಮಾಡಿ, ತಿಂಡಿತಿನಿಸುಗಳನ್ನು ನೀಡುವ ಸಂಪ್ರದಾಯ ನಮ್ಮಲ್ಲಿದ್ದು ಇದೀಗ ದೇವಾಲಯಗಳಲ್ಲಿ ಗೋಪೂಜೆಗೆ ಆದೇಶಿಸಲಾಗಿದೆ.

Key words:  state government – ordered – temples –go pooja- worship – Diwali.