ಎಸಿಬಿ ರದ್ಧುಗೊಳಿಸಿದ್ಧ ಹೈಕೋರ್ಟ್ ಆದೇಶ ಪ್ರಶ್ನಿಸಿ  ಸುಪ್ರೀಂಕೋರ್ಟ್ ಮೊರೆ ಹೋದ ರಾಜ್ಯ ಸರ್ಕಾರ.

ನವದೆಹಲಿ,ಆಗಸ್ಟ್,23,2022(www.justkannada.in):  ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ಧುಗೊಳಿಸಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ಧ ಆದೇಶವನ್ನ ಪ್ರಶ್ನಿಸಿ ರಾಜ್ಯ ಸರ್ಕಾರ ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

ಎಸಿಬಿ ರದ್ಧುಗೊಳಿಸಿ ಹೈಕೋರ್ಟ್ ಹೊರಡಿಸಿದ್ಧ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ  ರಾಜ್ಯ ಸರ್ಕಾರ  ಮೇಲ್ಮನವಿ ಅರ್ಜಿಯನ್ನ ಸಲ್ಲಿಸಿದೆ. ಈ ಅರ್ಜಿಯನ್ನ ವಿಚಾರಣೆಗೆ ಪರಿಗಣಿಸುವುದಾಗಿ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ .ವಿ ರಮಣ ತಿಳಿಸಿದ್ದಾರೆ.

ಆಗಸ್ಟ್ 11 ರಂದು ಎಸಿಬಿ  ರದ್ಧುಗೊಳಿಸಿ ಲೋಕಾಯುಕ್ತಕ್ಕೆ ಅಧಿಕಾರ ನೀಡಿ  ಹೈಕೋರ್ಟ್ ಆದೇಶ ಹೊರಡಿಸಿತ್ತು.

Key words: state government -Supreme Court – High Court -order – ACB- cancellation