Sunday, August 23, 2026

BDA Apartments

Home Front Page ರಾಜ್ಯ ವಿಧಾನ ಮಂಡಲ ಅಧಿವೇಶನ: ಅಗಲಿದ ಗಣ್ಯರಿಗೆ ಸಂತಾಪ

ರಾಜ್ಯ ವಿಧಾನ ಮಂಡಲ ಅಧಿವೇಶನ: ಅಗಲಿದ ಗಣ್ಯರಿಗೆ ಸಂತಾಪ

ಬೆಂಗಳೂರು,ಜುಲೈ,15,2024 (www.justkannada.in):   ಇಂದಿನಿಂದ ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶ ಆರಂಭವಾಗಿದ್ದು, ಅಗಲಿದ ಗಣ್ಯರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಕಲಾಪ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವಾದ ಇಂದು, ವಿಧನಾಸಭೆಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಲಾಯಿತು.   ಮಾಜಿ ಸಂಸದರಾದ ವಿ.ಶ್ರೀನಿವಾಸ್ ಪ್ರಸಾದ್, ಸಂಸದ ಸಿ.ಪಿ.ಮೂಡಲಗಿರಿಯಪ್ಪ, ನಟ, ನಿರ್ಮಾಪಕ ದ್ವಾರಕೀಶ್, ನಟಿ, ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ,  ಸೇರಿದಂತೆ ಅಗಲಿದ ಗಣ್ಯರಿಗೆ ಸ್ಪೀಕರ್ ಯು.ಟಿ.ಖಾದರ್ ಸಂತಾಪ ಸೂಚಿಸಿದರು.

ವಿಧಾನಪರಿಷತ್ ಜೆಡಿಎಸ್ ಸಭಾನಾಯಕರಾಗಿ  ಎಸ್ ಎಲ್ ಬೋಜೇಗೌಡ ನೇಮಕ  ಮಾಡಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ, ಮೂಡಾ ಹಗರಣಗಳ  ಬಗ್ಗೆ ಸದನದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

Key words:  State, Legislature, Session, Condolences