ಬೀದರ್ ನಲ್ಲಿ ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ…

ಬೀದರ್ ಡಿಸೆಂಬರ್,14,2020(www.justkannada.in):   ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು ಈ ಮಧ್ಯೆ ಬೀದರ್ ನಲ್ಲಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆlogo-justkannada-mysore

ಈಶಾನ್ಯ ಸಾರಿಗೆ ಸಂಸ್ಥೆ ಕಲಬುರಗಿ ವಿಭಾಗದ ಬಸ್​ಗಳಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ನಗರದ ಬರಿದ್​ ಶಾಹಿ ಗಾರ್ಡನ್ ಬಳಿ ಕಲಬುರಗಿ ಡಿಪೋದ ಬಸ್​​ನಲ್ಲಿ 25ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ಕಲ್ಲು ತೂರಾಟ ನಡೆಸಿದ್ದು, ಬಸ್​ನ ಹಿಂಬಾಗದ ಗ್ಲಾಸ್ ಪುಡಿ ಪುಡಿಯಾಗಿವೆ.stone-bus-bidar-transport-worker-protest

ಇನ್ನು ಸ್ಥಳಕ್ಕೆ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ ಎನ್ನಲಾಗಿದೆ.  ಸಾರಿಗೆ ನೌಕರರ ಮುಷ್ಕರ ಇನ್ನು ಮುಂದುವರೆದಿದ್ದು ಬಸ್ ಸಂಚಾರವಿಲ್ಲದೇ ಪ್ರರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Key words:  stone – bus – Bidar-transport worker-protest