Thursday, August 20, 2026

BDA Apartments

Home Front Page ಕಲ್ಲು ತೂರಾಟ ಘಟನೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಕಲ್ಲು ತೂರಾಟ ಘಟನೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಬೆಂಗಳೂರು,ಫೆಬ್ರವರಿ,20,2026 (www.justkannada.in): ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಯನ್ನು ಖಂಡಿಸಿರುವ ಸಿಎಂ ಸಿದ್ದರಾಮಯ್ಯ, ಘಟನೆಗೆ ಕಾರಣರಾದ ಪುಂಡರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ. ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ‌ ಮೊದಲ ಆದ್ಯತೆ. ಜನರ ಶಾಂತಿ – ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ – ಶಕ್ತಿಗಳನ್ನು ನಾವು ಸಹಿಸುವುದಿಲ್ಲ.

ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Key words: stone-pelting, Bagalakote, CM Siddaramaiah