ತಮಿಳುನಾಡು ಬಸ್ ಗಳ ಮೇಲೆ ಕಲ್ಲು ತೂರಾಟ: ಎಫ್ ಐಆರ್ ದಾಖಲು.

ಬೆಂಗಳೂರು, ಸೆಪ್ಟಂಬರ್,12,2023(www.justkannada.in):  ತಮಿಳುನಾಡು ಬಸ್ ಗಳ ಮೇಲೆ ಕಲ್ಲು ತೂರಾಟವಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಸ್ಯಾಟ್​ ಲೈಟ್ ಸಮೀಪ‌ದ ಭಾರತ್ ಪೆಟ್ರೋಲ್ ಬಂಕ್ ಬಳಿ ತಮಿಳುನಾಡು ಸಾರಿಗೆ ಬಸ್ ​ಗಳ ಮೇಲೆ ಕಲ್ಲು ತೂರಾಟವಾಗಿದೆ.  ನಿನ್ನೆ ಮಧ್ಯರಾತ್ರಿ ತಮಿಳುನಾಡಿಗೆ ಸೇರಿದ 4 ಬಸ್​ಗಳ​ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ ಎನ್ನಲಾಗಿದೆ.

ಈ ಕುರಿತು ಬಸ್ ಚಾಲಕ ಗುಣಶೇಖರನ್ ದೂರಿ ಚಾಮರಾಜಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು,  ಎಫ್‌ಐಆರ್ ದಾಖಲಾಗಿದೆ. ಚಾಮರಾಜಪೇಟೆ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Key words: Stone pelting -Tamil Nadu- buses-FIR -filed.