ಹುಬ್ಬಳ್ಳಿ-ಧಾರವಾಡ ಬಿಜೆಪಿ ಅಭ್ಯರ್ಥಿ ಗೆಲುವಿಗೆ ತಂತ್ರಗಾರಿಕೆ ರೂಪಿಸಿದ್ದೇವೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಹುಬ್ಬಳ್ಳಿ,ಏಪ್ರಿಲ್,27,2023(www.justkannada.in): ಹುಬ್ಬಳ್ಳಿ-ಧಾರವಾಡ ಬಿಜೆಪಿ ಅಭ್ಯರ್ಥಿ ಟೆಂಗಿನಕಾಯಿ ಗೆಲ್ಲುತ್ತಾರೆ. ಟೆಂಗಿನಕಾಯಿ ಗೆಲುವಿಗೆ ತಂತ್ರಗಾರಿಕೆ ರೂಫಿಸಿದ್ದೇವೆ ಎಂದು  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಬಿಎಸ್ ಯಡಿಯೂರಪ್ಪ, ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ.  ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ. ಪ್ರಧಾನಿ ಮೋದಿಯವರ ಆಪೇಕ್ಷೆ ಈಡೇರಿಸುತ್ತೇವೆ.  ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದರು.

Key words:  strategy – victory – Hubli-Dharwad- BJP candidate- Former CM- BS Yeddyurappa