ಬೆಂಗಳೂರು,ಆಗಸ್ಟ್,20,2025 (www.justkannada.in): ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಕಳ್ಳತನದ ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೆಎಂ ದೊಡ್ಡಿಯಲ್ಲಿ ನಡೆದಿದೆ.
ರಮೇಶ್ ಆತ್ಮಹತ್ಯೆಗೆ ಶರಣಾದ ಆರೋಪಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದುಂಡನಹಳ್ಳಿ ನಿವಾಸಿಯಾಗಿರುವ ರಮೇಶ್ ಸೇರಿ ಹಲವು ಆರೋಪಿಗಳನ್ನು ದೇವಸ್ಥಾನದ ಕಳ್ಳತನ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು.
ಬೊಮ್ಮನಾಯಕನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ಕಳ್ಳತನ ನಡೆದಿತ್ತು. ಈ ಪ್ರಕರಣದಲ್ಲಿ ರಮೇಶ್, ಮಂಜು, ಕೋಲಾರ ಮೂಲದ ಅನಿಲ್ ರನ್ನು ಪೊಲೀಸರು ಬಂಧಿಸಿ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು. ಈ ಮಧ್ಯೆ ಬೆಳಗ್ಗೆ ಪೊಲೀಸ್ ಠಾಣೆಯ ಶೌಚಾಲಯಕ್ಕೆ ಹೋಗಿ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ರಮೇಶ್ ಸಂಬಂಧಿಕರು ಇದು ಲಾಕಪ್ ಡೆತ್ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Key words: Accused, commits suicide, police station toilet.