Thursday, August 20, 2026

BDA Apartments

Home Front Page ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರೆಸಲು ಸುಪ್ರೀಂ ಸೂಚನೆ

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರೆಸಲು ಸುಪ್ರೀಂ ಸೂಚನೆ

ಚಿಕ್ಕಮಗಳೂರು,ಮೇ,21,2026 (www.justkannada.in): ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಥಾಸ್ಥಿತಿ ಮುಂದುವರಿಸಲು ಸೂಚನೆ ನೀಡಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಜು.23ಕ್ಕೆ ಮುಂದೂಡಿಕೆ ಮಾಡಿದೆ.

ಮೇ 2ರಂದು ನಡೆದ ಮರು ಮತ ಎಣಿಕೆ ವೇಳೆ ಅಂಚೆ ಮತಪತ್ರ ತಿರುಚಲಾಗಿದೆ ಎಂದು ಆರೋಪಿಸಿ, ಜತೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ ನ ಟಿ.ಡಿ.ರಾಜೇಗೌಡ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಮೇ 11ರಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಮರು ಮತ ಎಣಿಕೆ ಪ್ರಕ್ರಿಯೆ ಮತ್ತು ಫಲಿತಾಂಶಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿತ್ತು. ಹಾಗೆಯೇ ಮರು ಎಣಿಕೆಗೆ ಸಂಬಂಧಿಸಿದ ಎಲ್ಲ ದಾಖಲೆ ಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತ್ತು.

ಇದೀಗ ಪ್ರಕರಣ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಯಥಾಸ್ಥಿತಿ ಮುಂದುವರಿಕೆಗೆ ಆದೇಶಿಸಿ ವಿಚಾರಣೆಯನ್ನು ಜುಲೈ23ಕ್ಕೆ ಮುಂದೂಡಿಕೆ ಮಾಡಿದೆ.

Key words: Sringeri, postal vote ,recount case, Supreme Court