Friday, August 28, 2026

BDA Apartments

Home Front Page ಲೋಕಸಭೆ ಚುನಾವಣೆ ವೇಳೆಗೆ ಕೆಎಸ್ ಈಶ್ವರಪ್ಪ ಕಾಂಗ್ರೆಸ್ ಗೆ ಬಂದರೂ ಅಚ್ಚರಿ ಪಡಬೇಕಾಗಿಲ್ಲ-ಸಚಿವ ಎಂಬಿ ಪಾಟೀಲ್​

ಲೋಕಸಭೆ ಚುನಾವಣೆ ವೇಳೆಗೆ ಕೆಎಸ್ ಈಶ್ವರಪ್ಪ ಕಾಂಗ್ರೆಸ್ ಗೆ ಬಂದರೂ ಅಚ್ಚರಿ ಪಡಬೇಕಾಗಿಲ್ಲ-ಸಚಿವ ಎಂಬಿ ಪಾಟೀಲ್​

ರಾಯಚೂರು, ಅಕ್ಟೋಬರ್,21,2023(www.justkannada.in):  ಲೋಕಸಭೆ ಚುನಾವಣೆ ವೇಳೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕೂಡ ಬಂದರೂ ಅಚ್ಚರಿಯಿಲ್ಲ ಎಂದು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಲೇವಡಿ ಮಾಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಲೋಕಸಭೆ ಚುನಾವಣೆ ವೇಳೆಗೆ ಕೆಎಸ್ ಈಶ್ವರಪ್ಪ ಕಾಂಗ್ರೆಸ್ ಗೆ ಬಂದರೂ ಆಶ್ಚರ್ಯ ಪಡಬೇಕಿಲ್ಲ.  ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ವಿಚಾರ ಮಾಡುತ್ತೇವೆ. ಈಶ್ವರಪ್ಪ ಬಹಳ ಮೇಧಾವಿಗಳು. ಅವರ ಹೇಳಿಕೆಗೆ ನಾನು ಉತ್ತರ ಕೊಡಲು ಬಯಸಲ್ಲ ಎಂದರು.

Key words: surprised- if -KS Eshwarappa- joins -Congress – Minister- MB Patil