ಸುಳ್ಳು ದಾಖಲೆ ಪತ್ರ ಸೃಷ್ಠಿಸಿ ಸರ್ಕಾರದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ-ಕಂದಾಯ ಸಚಿವ ಕೃಷ್ಣಭೈರೇಗೌಡ.

ಮೈಸೂರು,ಆಗಸ್ಟ್,8,2023(www.justkannada.in): ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧ, ಸುಳ್ಳು ದಾಖಲೆ ಪತ್ರಗಳನ್ನ ಸೃಷ್ಟಿ ಮಾಡಿ ಕಾಂಗ್ರೆಸ್ ಸರ್ಕಾರಕ್ಕೆ ಅಪಪ್ರಚಾರ ಮಾಡುವ ವ್ಯವಸ್ಥಿಯ ಷಡ್ಯಂತ್ರ ನಡೆಯುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಆರೋಪಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಕೃಷ್ಣಭೈರೇಗೌಡ,  ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಶಾಸಕರ ಪತ್ರ ಸಹ ನಕಲಿ ಮಾಡಿದ್ದರು. ಇದಕ್ಕೆ ವ್ಯಾಪಕ ಪ್ರಚಾರ ಸಹ ಸಿಕ್ಕಿತ್ತು. ನಕಲಿ ಪತ್ರ ಅಂತ ಗೊತ್ತಿದ್ದರೂ ವ್ಯಾಪಕ ಪ್ರಚಾರ ಸಿಕ್ತು. ಚಲುವರಾಯಸ್ವಾಮಿ‌ ವಿಚಾರದಲ್ಲೂ ಈಗಾಗಲೇ ಅಧಿಕಾರಿಗಳೇ ಸ್ಪಷ್ಟ ಪಡಿಸಿದ್ದಾರೆ. ಪತ್ರ ನಾವು ಬರೆದಿಲ್ಲ, ಅದು ನಕಲಿ ಅಂತ ಹೇಳಿದ್ದಾರೆ. ಈ ವಿಚಾರವೇ ನಮಗೆ ಗೊತ್ತಿಲ್ಲ ಅಂತಾ ಅಧಿಕಾರಿಗಳು ಹೇಳಿದ್ದಾರೆ.  ನಕಲಿ ದಾಖಲೆ ಸೃಷ್ಟಿ ಮಾಡಿ ಜನರಿಗೆ ಸರ್ಕಾರದ ಮೇಲೆ ಕೆಟ್ಟ ಹೆಸರು ತರಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ಇದೊಂದು ರಾಜಕೀಯ ಆಟ. ಇದನ್ನ ರಾಜಕೀಯವಾಗಿಯೇ ಫೇಸ್ ಮಾಡುತ್ತೇವೆ. ಅಧಿಕಾರಿಗಳಿಗೆ ತೊಂದರೆ ಆದ್ರೆ ನೇರವಾಗಿ ಲೋಕಯುಕ್ತಗೆ‌ ದೂರು ನೀಡಬಹುದು. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ವಿರೋಧ ಪಕ್ಷದವರಿಗೆ ಸರ್ಕಾರದ ಜನಪ್ರಿಯತೆ ಸಹಿಸಲು ಸಾಧ್ಯವಾಗುತ್ತಿಲ್ಲ. ಕೊಟ್ಟ ಮಾತನ್ನ ರಾಜ್ಯ ಸರ್ಕಾರ ಈಡೇರಿಸಿದೆ. ಐದು ವರ್ಷವಾದರೂ ಗ್ಯಾರೆಂಟಿ ಯೋಜನೆ ಜಾರಿ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಆದರೆ ಸರ್ಕಾರ ಬಂದ ಎರೆಡೇ ತಿಂಗಳಲ್ಲಿ ಗ್ಯಾರೆಂಟಿ ಯೋಜನೆ ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

ಮೈಸೂರಿನಲ್ಲಿ ಕಂದಾಯ ಇಲಾಖೆಯ ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನೆ ಸಭೆ.

ಇಂದು ಮೈಸೂರಿನಲ್ಲಿ ವಿಭಾಗೀಯ ಮಟ್ಟದ ಸಭೆ ನಡೆಸಲು ಬಂದಿದ್ದೇನೆ. ಹೊಸ ಸರ್ಕಾರ ಬಂದ ಮೇಲೆ ಒಂದು ಒಳ್ಳೆಯ ಆಡಳಿತ ಕೊಡುವ ದೃಷ್ಟಿಯಿಂದ ಆಡಳಿತವನ್ನ ಚುರುಕುಗೊಳಿಸುವ ಕೆಲಸ ಮಾಡುತ್ತಿದ್ದೇವೆ.ಸಾವಿರಾರು ವ್ಯಾಜ್ಯ ಪ್ರಕರಣಗಳಿವೆ ಅವುಗಳ ಇತ್ಯರ್ಥ ಮತ್ತು ಪರಿಹಾರ ಕಂಡುಕೊಳ್ಳಲು ಇಂದು ಸಭೆ ಮಾಡುತಿದ್ದೇವೆ. ಮೈಸೂರು ವಿಭಾಗೀಯ ಎಲ್ಲಾ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ಮಾಡುತ್ತಿದ್ದೇನೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ರಾಜ್ಯದಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕಂದಾಯ ಅದಾಲತ್ ಮಾಡುವ ಚಿಂತನೆ ಇದೆ. ಸಣ್ಣಪುಟ್ಟ ವ್ಯಾಜ್ಯಗಳನ್ನ ಅಲ್ಲೇ ಪರಿಹರಿಸಿಕೊಳ್ಳಬಹುದು. ಹಿಂದೆ ಇದ್ದ ನಮ್ಮ ಸರ್ಕಾರ ಅದೇ ಕೆಲಸ ಮಾಡಿತ್ತು ಈಗ ಅದನ್ನ ಮುಂದುವರಿಸುವ ಕುರಿತು ಪರಿಶೀಲನೆ ಮಾಡಲಾಗುತ್ತದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಸರ್ಕಾರಿ ಜಮೀನು ಒತ್ತವರಿ ತೆರವಿಗೆ ಸರ್ಕಾರದಿಂದ ಕಠಿಣ ಕ್ರಮ.

ಸರ್ಕಾರಿ ಜಮೀನು ಒತ್ತವರಿ ತೆರವಿಗೆ ಸರ್ಕಾರದಿಂದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಅಧಿಕಾರಿಗಳಿಗೆ ಫ್ರೀ ಹ್ಯಾಂಡ್ ಕೊಡುವ ಜೊತೆಗೆ ಅವರ ತಲೆಯ ಮೇಲೆ ಕೂತು ಕೆಲಸ ಮಾಡಿಸುವ ನಿಟ್ಟಿನಲ್ಲಿ ನಾವು ಒತ್ತಡ ಹಾಕುತ್ತೇವೆ. ಈಗಾಗಲೇ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಭೆ ಮಾಡಿದ್ದೇನೆ ಯಾವುದೇ ಕಾರಣಕ್ಕೂ ಒತ್ತುವರಿ ಸಹಿಸುವುದಿಲ್ಲ. ಮುಖ್ಯಮಂತ್ರಿಗಳ ನಿರ್ದೇಶನದಂತೆ ನಾವು ಒತ್ತುವರಿ ತೆರವು ಮಾಡಿಯೇ ತೀರುತ್ತೇವೆ. ಯಾರ ಪ್ರಭಾವಕ್ಕೂ ಒಳಗಾಗುವ ಮಾತಿಲ್ಲ. ರಾಜ್ಯದ ಎಲ್ಲಾ ಭಾಗಗಳಲ್ಲೂ ಒತ್ತುವರಿ ತೆರವು ಪ್ರಕ್ರೀಯೆ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ವಿಭಾಗೀಯ ಮಟ್ಟದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಆರಂಭ

ಕಂದಾಯ ಸಚಿವ ಕೃಷ್ಣ ಭೈರೇಗೌಡರಿಂದ ವಿಭಾಗೀಯ ಮಟ್ಟದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಆರಂಭವಾಗಿದ್ದು,ಮೈಸೂರು, ಕೊಡುಗು, ಚಾಮರಾಜನಗರ, ಮಂಡ್ಯ ಚಿಕ್ಕಮಗಳೂರು ಸೇರಿದ ವಿವಿಧ ಜಿಲ್ಲೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ.ಕಂದಾಯ ಇಲಾಖೆ ಸಂಬಂಧಿಸಿದ ವ್ಯಾಜ್ಯ ಪ್ರಕರಣಗಳು ಸೇರಿದಂತೆ ಹಲವು ಗಂಭೀರ ವಿಚಾರಗಳ ಕುರಿತು ಚರ್ಚೆ ನಡೆಯುತ್ತಿದೆ.

Key words: systematic- conspiracy -against – government-Minister -Krishnabhairegowda.