<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Amrita Community Development Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/amrita-community-development/feed/" rel="self" type="application/rss+xml" />
	<link>https://www.justkannada.in/tag/amrita-community-development/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 26 Aug 2021 11:58:45 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Amrita Community Development Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/amrita-community-development/</link>
	<width>32</width>
	<height>32</height>
</image> 
	<item>
		<title>750 ಗ್ರಾಮಗಳ ದತ್ತು ಯೋಜನೆ : &#8216;ಅಮೃತ ಸಮುದಾಯ ಅಭಿವೃದ್ಧಿ ಯೋಜನೆ&#8217;ಅನುಷ್ಟಾನಕ್ಕೆ ಸರ್ಕಾರದ ಆದೇಶ &#8211; ಸಚಿವ ಡಾ. ನಾರಾಯಣಗೌಡ.</title>
		<link>https://www.justkannada.in/adoption-scheme-750-villages-amrita-community-development-project-minister-narayana-gowda/</link>
		
		<dc:creator><![CDATA[JK Desk]]></dc:creator>
		<pubDate>Thu, 26 Aug 2021 11:58:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[750 Villages]]></category>
		<category><![CDATA[Adoption Scheme]]></category>
		<category><![CDATA[Amrita Community Development]]></category>
		<category><![CDATA[minister]]></category>
		<category><![CDATA[Narayana Gowda]]></category>
		<category><![CDATA[project]]></category>
		<guid isPermaLink="false">https://www.justkannada.in/?p=74135</guid>

					<description><![CDATA[<p>ಬೆಂಗಳೂರು, ಆಗಸ್ಟ್. 26,2021(www.justkannada.in):  ಸರ್ಕಾರ ಹತ್ತಾರು ಯೋಜನೆ ಘೋಷಣೆ ಮಾಡಿದರೂ ಅದು ಸಮರ್ಪಕವಾಗಿ ಜನರನ್ನು ತಲುಪುವುದು ಕಷ್ಟ. ಹೀಗಾಗಿ ಪ್ರತಿ ವ್ಯಕ್ತಿಗೂ ಯೋಜನೆಯ ಫಲ ಸಿಗಬೇಕು. ಬಡತನ ರೇಖೆಗಿಂತ ಕೆಳಗಿರುವ ಜನರ ಏಳಿಗೆ ಆಗಬೇಕು. ಇದಕ್ಕಾಗಿ ಸರ್ಕಾರದ ಯೋಜನೆ ಪ್ರತಿ ಮನೆ ಮನೆ ತಲುಪಲು `ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ಯನ್ನು ಸರ್ಕಾರ ಜಾರಿಗೆ ತಂದಿದ್ದು, ಯೋಜನೆ ಅನುಷ್ಟಾನಕ್ಕೆ ಅನುಮೋದನೆ ನೀಡಲಾಗಿದೆ. ಎನ್‍ಎಸ್‍ಎಸ್‍ ನ ಸ್ವಯಂ ಸೇವಕರೇ ಇದರಲ್ಲಿ ಪ್ರಮುಖಪಾತ್ರ ವಹಿಸಲಿದ್ದಾರೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ [&#8230;]</p>
<p>The post <a href="https://www.justkannada.in/adoption-scheme-750-villages-amrita-community-development-project-minister-narayana-gowda/">750 ಗ್ರಾಮಗಳ ದತ್ತು ಯೋಜನೆ : &#8216;ಅಮೃತ ಸಮುದಾಯ ಅಭಿವೃದ್ಧಿ ಯೋಜನೆ&#8217;ಅನುಷ್ಟಾನಕ್ಕೆ ಸರ್ಕಾರದ ಆದೇಶ &#8211; ಸಚಿವ ಡಾ. ನಾರಾಯಣಗೌಡ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಆಗಸ್ಟ್. 26,2021(<a href="https://www.justkannada.in">www.justkannada.in</a>): </strong> ಸರ್ಕಾರ ಹತ್ತಾರು ಯೋಜನೆ ಘೋಷಣೆ ಮಾಡಿದರೂ ಅದು ಸಮರ್ಪಕವಾಗಿ ಜನರನ್ನು ತಲುಪುವುದು ಕಷ್ಟ. ಹೀಗಾಗಿ ಪ್ರತಿ ವ್ಯಕ್ತಿಗೂ ಯೋಜನೆಯ ಫಲ ಸಿಗಬೇಕು. ಬಡತನ ರೇಖೆಗಿಂತ ಕೆಳಗಿರುವ ಜನರ ಏಳಿಗೆ ಆಗಬೇಕು. ಇದಕ್ಕಾಗಿ ಸರ್ಕಾರದ ಯೋಜನೆ ಪ್ರತಿ ಮನೆ ಮನೆ ತಲುಪಲು `ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ಯನ್ನು ಸರ್ಕಾರ ಜಾರಿಗೆ ತಂದಿದ್ದು, ಯೋಜನೆ ಅನುಷ್ಟಾನಕ್ಕೆ ಅನುಮೋದನೆ ನೀಡಲಾಗಿದೆ. ಎನ್‍ಎಸ್‍ಎಸ್‍ ನ ಸ್ವಯಂ ಸೇವಕರೇ ಇದರಲ್ಲಿ ಪ್ರಮುಖಪಾತ್ರ ವಹಿಸಲಿದ್ದಾರೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಸ್ವಾತಂತ್ರ್ಯೋತ್ಸವದ ಭಾಷಣದ ವೇಳೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು `ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ ಘೋಷಿಸಿದ್ದಾರೆ. ಅದರಂತೆಯೆ ಯೋಜನೆಯ ಅನುಷ್ಟಾನಕ್ಕೆ ಅನುಮೋದನೆ ನೀಡಿ ಸರ್ಕಾರ ಆದೇಶಿಸಿದೆ. 2015-16ರ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಶೇ. 17.3 ರಷ್ಟು (30ಲಕ್ಷ) ಕುಟುಂಬಗಳು ಬಡತನ ರೇಖೆಗಿಂತ ಕೆಳಗಿವೆ. ಈ ಪೈಕಿ 750 ಹಳ್ಳಿಗಳಲ್ಲಿ ಸುಮಾರು 1,27,369 ಕುಟುಂಬಗಳು ಅತೀ ಬಡತನದಲ್ಲಿವೆ. ಅಂತಹ ಕುಟುಂಬಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಿ, ಬಡತನ ರೇಖೆಗಿಂತ ಮೇಲೆ ತರುವುದಕ್ಕಾಗಿಯೇ `ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ ತರಲಾಗಿದೆ ಎಂದು ಸಚಿವ ನಾರಾಯಣಗೌಡ ತಿಳಿಸಿದರು.</p>
<p>ಈಗಾಗಲೆ ಗುರುತಿಸಲಾಗಿರುವ 750 ಗ್ರಾಮಗಳನ್ನು ಎನ್‍ಎಸ್‍ಎಸ್ ಘಟಕಗಳ ಮೂಲಕ ದತ್ತು ಸ್ವೀಕಾರ ಮಾಡಿ, `ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ಯಲ್ಲಿ ತೊಡಗಿಸಿ, ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿ ಈ ಕುಟುಂಬಗಳಿಗೆ ಅಗತ್ಯವಿರುವ ಯೋಜನೆಗಳನ್ನು ನೇರವಾಗಿ ತಲುಪಿಸುವ ಕಾರ್ಯ ಮಾಡಲಾಗುವುದು.<img decoding="async" class="aligncenter size-full wp-image-74136" src="https://www.justkannada.in/wp-content/uploads/2021/08/adoption-scheme-750-villages-amrita-community-development-project-minister-narayana-gowda.png" alt="" width="696" height="598" /></p>
<p>ಮಹಿಳಾ ಮತ್ತು ಮಕ್ಕಳ ಇಲಾಖೆ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ ಮತ್ತು ವಸತಿ ಇಲಾಖೆಗಳಲ್ಲಿನ ಯೋಜನೆಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಗೊಳಿಸಿ ಬಡತನ ನಿರ್ಮೂಲನೆಗೆ ಪ್ರಯತ್ನಿಸಲಾಗುವುದು. ಎನ್‍ಎಸ್‍ಎಸ್ ಘಟಕಗಳ ಮೂಲಕ ಈ ಯೋಜನೆ ಜನರನ್ನು ತಲುಪಲಿದ್ದು, ಪ್ರತಿ ವರ್ಷ ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರವು ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡಲಿದೆ.</p>
<p>ಈಗಾಗಲೇ ಎನ್‍ಎಸ್‍ಎಸ್ ಮೂಲಕ ರಾಜ್ಯದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಿಮ್ಹಾನ್ಸ್ ಸಂಸ್ಥೆ ಮೂಲಕ 5 ಲಕ್ಷಕ್ಕೂ ಹೆಚ್ಚು ಯುವಕ ಯುವತಿಯರಿಗೆ ಕೌನ್ಸಿಲಿಂಗ್ ತರಬೇತಿ ನೀಡಲಾಗಿದ್ದು, ಅವರು ಕಾರಣಾಂತರಗಳಿಂದ ದಾರಿತಪ್ಪಿರುವ ಯುವಜನರನ್ನು ಗುರುತಿಸಿ ಕೌನ್ಸಿಲಿಂಗ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಕೋವಿಡ್-19 ಸಂದರ್ಭದಲ್ಲೂ ಕೊರೊನಾದಿಂದ ಬಳಲುತ್ತಿರುವವರಿಗೆ, ಕೊರೊನಾದಿಂದಲೇ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಅದೇ ಎನ್‍ಎಸ್‍ಎಸ್ ತಂಡ ಈಗ `ಅಮೃತ ಸಮುದಾಯ ಅಭಿವೃದ್ಧಿ ಯೋಜನೆ’ಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ.</p>
<p><img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Adoption Scheme &#8211; 750 Villages-Amrita Community Development- Project-  Minister &#8211; Narayana Gowda.</p>
<p>The post <a href="https://www.justkannada.in/adoption-scheme-750-villages-amrita-community-development-project-minister-narayana-gowda/">750 ಗ್ರಾಮಗಳ ದತ್ತು ಯೋಜನೆ : &#8216;ಅಮೃತ ಸಮುದಾಯ ಅಭಿವೃದ್ಧಿ ಯೋಜನೆ&#8217;ಅನುಷ್ಟಾನಕ್ಕೆ ಸರ್ಕಾರದ ಆದೇಶ &#8211; ಸಚಿವ ಡಾ. ನಾರಾಯಣಗೌಡ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
