<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Campaign. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/campaign/feed/" rel="self" type="application/rss+xml" />
	<link>https://www.justkannada.in/tag/campaign/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 24 Jun 2026 12:22:35 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Campaign. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/campaign/</link>
	<width>32</width>
	<height>32</height>
</image> 
	<item>
		<title>BSNL ಮೈಸೂರು ವಲಯದಿಂದ ಉಚಿತ ಹೈ-ಸ್ಪೀಡ್ ಇಂಟರ್ನೆಟ್ ಮತ್ತು ಸ್ವಯಂ ಉದ್ಯೋಗ ಅಭಿಯಾನ</title>
		<link>https://www.justkannada.in/bsnl-mysore-zone/</link>
		
		<dc:creator><![CDATA[prashanth]]></dc:creator>
		<pubDate>Wed, 24 Jun 2026 12:22:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[BSNL Mysore zone]]></category>
		<category><![CDATA[Campaign.]]></category>
		<category><![CDATA[free]]></category>
		<category><![CDATA[High Speed]]></category>
		<category><![CDATA[internet]]></category>
		<category><![CDATA[self-employment]]></category>
		<guid isPermaLink="false">https://www.justkannada.in/?p=156478</guid>

					<description><![CDATA[<p>​ಮೈಸೂರು,ಜೂನ್,24,2026 (www.justkannada.in): ಗ್ರಾಮೀಣ ಭಾಗದ ಸಬಲೀಕರಣಕ್ಕಾಗಿ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯ ‘ಡಿಜಿಟಲ್ ಭಾರತ್ ನಿಧಿ’ (DBN) ಯೋಜನೆಯಡಿ, ಬಿಎಸ್‌ಎನ್‌ಎಲ್ ಮೈಸೂರು ವಲಯವು ಹಳ್ಳಿಗಳಲ್ಲಿ ಉಚಿತ ಎಫ್‌ಟಿಟಿಎಚ್ (Free FTTH/Fiber) ಇಂಟರ್ನೆಟ್ ಅಳವಡಿಕೆ ಹಾಗೂ ಗ್ರಾಮೀಣ ಸ್ವಯಂ ಉದ್ಯೋಗ ಅಭಿಯಾನವನ್ನು ಹಮ್ಮಿಕೊಂಡಿದೆ. ​ಈ ಯೋಜನೆಯ ಪ್ರಮುಖಾಂಶಗಳು ಹೀಗಿದೆ.. ​ಉಚಿತ ಅಳವಡಿಕೆ: ಭಾರತನೆಟ್ ಯೋಜನೆಯಡಿ ವೈಫೈ ರೌಟರ್ (CPE/ONT) ಮತ್ತು ಆಪ್ಟಿಕಲ್ ಫೈಬರ್ ಕೇಬಲ್ ಅನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಯಾವುದೇ ಇನ್‌ ಸ್ಟಾಲೇಷನ್ ಶುಲ್ಕ ಇರುವುದಿಲ್ಲ. ಗ್ರಾಹಕರು [&#8230;]</p>
<p>The post <a href="https://www.justkannada.in/bsnl-mysore-zone/">BSNL ಮೈಸೂರು ವಲಯದಿಂದ ಉಚಿತ ಹೈ-ಸ್ಪೀಡ್ ಇಂಟರ್ನೆಟ್ ಮತ್ತು ಸ್ವಯಂ ಉದ್ಯೋಗ ಅಭಿಯಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>​ಮೈಸೂರು,ಜೂನ್,24,2026 (<a href="http://www.justkannada.in">www.justkannada.in</a>):</strong> ಗ್ರಾಮೀಣ ಭಾಗದ ಸಬಲೀಕರಣಕ್ಕಾಗಿ ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯ ‘ಡಿಜಿಟಲ್ ಭಾರತ್ ನಿಧಿ’ (DBN) ಯೋಜನೆಯಡಿ, ಬಿಎಸ್‌ಎನ್‌ಎಲ್ ಮೈಸೂರು ವಲಯವು ಹಳ್ಳಿಗಳಲ್ಲಿ ಉಚಿತ ಎಫ್‌ಟಿಟಿಎಚ್ (Free FTTH/Fiber) ಇಂಟರ್ನೆಟ್ ಅಳವಡಿಕೆ ಹಾಗೂ ಗ್ರಾಮೀಣ ಸ್ವಯಂ ಉದ್ಯೋಗ ಅಭಿಯಾನವನ್ನು ಹಮ್ಮಿಕೊಂಡಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p><strong>​ಈ ಯೋಜನೆಯ ಪ್ರಮುಖಾಂಶಗಳು ಹೀಗಿದೆ..</strong></p>
<p>​ಉಚಿತ ಅಳವಡಿಕೆ: ಭಾರತನೆಟ್ ಯೋಜನೆಯಡಿ ವೈಫೈ ರೌಟರ್ (CPE/ONT) ಮತ್ತು ಆಪ್ಟಿಕಲ್ ಫೈಬರ್ ಕೇಬಲ್ ಅನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಯಾವುದೇ ಇನ್‌ ಸ್ಟಾಲೇಷನ್ ಶುಲ್ಕ ಇರುವುದಿಲ್ಲ. ಗ್ರಾಹಕರು ಕೇವಲ ಮಾಸಿಕ ಚಂದಾದಾರಿಕೆ ಪಾವತಿಸಬೇಕಿರುತ್ತದೆ.</p>
<p>​ವಿಶೇಷ ಆಕರ್ಷಕ ಪ್ಲಾನ್: ಗ್ರಾಮೀಣ ಗ್ರಾಹಕರಿಗಾಗಿ ಕೇವಲ ರೂ. 259/- ರ ಮಾಸಿಕ ಪ್ಲಾನ್ ಪರಿಚಯಿಸಲಾಗಿದ್ದು, ಇದರಲ್ಲಿ 25 Mbps ವೇಗದ 700 GB ಡೇಟಾ, ಅನಿಯಮಿತ ಕರೆಗಳು ಹಾಗೂ ಪ್ರಸಾರ ಭಾರತಿ ಟಿವಿ/Waves App/BSNL-Skypro IFTV ಉಚಿತ ಚಾನೆಲ್‌ ಗಳ ಸೌಲಭ್ಯವಿದೆ.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>​ಸ್ವಯಂ ಉದ್ಯೋಗಾವಕಾಶ: ಗ್ರಾಮೀಣ ಯುವಕರು ಬಿಎಸ್‌ಎನ್‌ಎಲ್ ನೊಂದಿಗೆ ಕೈಜೋಡಿಸಿ &#8216;ಭಾರತ್‌ನೆಟ್ ಉದ್ಯಮಿ&#8217; (BNU) ಆಗಿ ನೋಂದಾಯಿಸಿಕೊಳ್ಳಬಹುದು ಮತ್ತು ಹಳ್ಳಿಗಳಿಗೆ ಇಂಟರ್ನೆಟ್ ಸೇವೆ ಒದಗಿಸುವ ಮೂಲಕ ಆದಾಯ ಗಳಿಸಬಹುದಾಗಿದೆ.<img decoding="async" class="aligncenter size-full wp-image-84679" src="https://www.justkannada.in/wp-content/uploads/2022/01/inter.jpg" alt="" width="650" height="365" srcset="https://www.justkannada.in/wp-content/uploads/2022/01/inter.jpg 650w, https://www.justkannada.in/wp-content/uploads/2022/01/inter-600x337.jpg 600w, https://www.justkannada.in/wp-content/uploads/2022/01/inter-300x168.jpg 300w" sizes="(max-width: 650px) 100vw, 650px" /></p>
<p>​ಈ ಉಚಿತ ಇಂಟರ್ನೆಟ್ ಸಂಪರ್ಕ ಪಡೆಯಲು ಅಥವಾ ಉದ್ಯಮಿಯಾಗಿ ನೋಂದಾಯಿಸಿಕೊಳ್ಳಲು ಸಾರ್ವಜನಿಕರು ಹತ್ತಿರದ ಬಿಎಸ್‌ಎನ್‌ಎಲ್ ಗ್ರಾಹಕ ಸೇವಾ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಬಿಎಸ್‌ಎನ್‌ಎಲ್ ಮೈಸೂರು ವ್ಯವಹಾರ ವಲಯದ ಮಹಾ ಪ್ರಬಂಧಕರಾದ ಶ್ರೀ ರಾಜೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>​ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:</p>
<p>​ಸಹಾಯಕ ಮಹಾ ಪ್ರಬಂಧಕರು (ಮಾರ್ಕೆಟಿಂಗ್), ಬಿಎಸ್‌ಎನ್‌ಎಲ್, ಮೈಸೂರು.</p>
<p>​ದೂರವಾಣಿ: 0821-2364545</p>
<p>​ಮೊಬೈಲ್: 9449031004</p>
<p>​ಇಮೇಲ್: <a href="mailto:agmcfamys@gmail.com">agmcfamys@gmail.com</a></p>
<p>Key words: Free, high-speed, internet, self-employment, campaign, BSNL Mysore zone</p>
<p>The post <a href="https://www.justkannada.in/bsnl-mysore-zone/">BSNL ಮೈಸೂರು ವಲಯದಿಂದ ಉಚಿತ ಹೈ-ಸ್ಪೀಡ್ ಇಂಟರ್ನೆಟ್ ಮತ್ತು ಸ್ವಯಂ ಉದ್ಯೋಗ ಅಭಿಯಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೂ.28ರಿಂದ ಪಲ್ಸ್ ಪೋಲಿಯೋ ಅಭಿಯಾನ: ಪ್ರತಿ ಮಗುವಿಗೂ ಲಸಿಕೆ ಹಾಕಿಸಿ- ಡಿಸಿ ಲಕ್ಷ್ಮೀಕಾಂತ ರೆಡ್ಡಿ</title>
		<link>https://www.justkannada.in/pulse-polio-dc-laxmikant-reddy/</link>
		
		<dc:creator><![CDATA[prashanth]]></dc:creator>
		<pubDate>Wed, 24 Jun 2026 11:31:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Campaign.]]></category>
		<category><![CDATA[DC]]></category>
		<category><![CDATA[Laxmikant Reddy]]></category>
		<category><![CDATA[Mysore.]]></category>
		<category><![CDATA[Pulse Polio]]></category>
		<category><![CDATA[vaccinate]]></category>
		<guid isPermaLink="false">https://www.justkannada.in/?p=156473</guid>

					<description><![CDATA[<p>ಮೈಸೂರು, ಜೂನ್, 24,2026 (www.justkannada.in): 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿ ಎಂದು ಜಿಲ್ಲಾಧಿಕಾರಿ  ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ  ಪೂರ್ವಸಿದ್ಧತಾ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಡಿಸಿ ಲಕ್ಷ್ಮೀಕಾಂತರೆಡ್ಡಿ, ಜಿಲ್ಲೆಯಲ್ಲಿ  ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಶೇಕಡಾ ನೂರರಷ್ಟು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು. ಜೂನ್ [&#8230;]</p>
<p>The post <a href="https://www.justkannada.in/pulse-polio-dc-laxmikant-reddy/">ಜೂ.28ರಿಂದ ಪಲ್ಸ್ ಪೋಲಿಯೋ ಅಭಿಯಾನ: ಪ್ರತಿ ಮಗುವಿಗೂ ಲಸಿಕೆ ಹಾಕಿಸಿ- ಡಿಸಿ ಲಕ್ಷ್ಮೀಕಾಂತ ರೆಡ್ಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಜೂನ್, 24,2026 (<a href="http://www.justkannada.in">www.justkannada.in</a>):</strong> 5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿ ಎಂದು ಜಿಲ್ಲಾಧಿಕಾರಿ  ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ  ಪೂರ್ವಸಿದ್ಧತಾ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಡಿಸಿ ಲಕ್ಷ್ಮೀಕಾಂತರೆಡ್ಡಿ, ಜಿಲ್ಲೆಯಲ್ಲಿ  ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಶೇಕಡಾ ನೂರರಷ್ಟು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.</p>
<p>ಜೂನ್ 28 ರ ಭಾನುವಾರದಂದು ಲಸಿಕಾ ಕೇಂದ್ರಗಳ ಬೂತ್‌ ಗಳಲ್ಲಿ ಲಸಿಕೆ ಹಾಕಲಾಗುವುದು. ಜೂನ್ 29 ರಿಂದ ಜುಲೈ 1 ರವರೆಗೆ ಮನೆ ಮನೆಗೆ ಭೇಟಿ ನೀಡಿ 5 ವರ್ಷದೊಳಗಿನ ಎಲ್ಲಾ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ಹಾಕುವ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.</p>
<p>ಪ್ರತಿ ಹನಿ ಅವಶ್ಯ, ಪ್ರತಿ ಮಗು ಅಮೂಲ್ಯ ಎಂಬ ಧ್ಯೇಯದೊಂದಿಗೆ ಹೆಚ್ಚಿನ ಅಪಾಯದ  ಪ್ರದೇಶಗಳು ಹಾಗೂ ಸಂಚಾರ ಕೇಂದ್ರಗಳಲ್ಲಿ 4 ದಿನಗಳ ವಿಶೇಷ ಅಭಿಯಾನ ನಡೆಯಲಿದೆ.  ಪೋಲಿಯೋ ಮುಕ್ತ ಸಮಾಜವನ್ನು ಉಳಿಸಿಕೊಳ್ಳಲು 5 ವರ್ಷದೊಳಗಿನ ಯಾವುದೇ ಒಂದು ಮಗುವೂ ಸಹ ಲಸಿಕೆಯಿಂದ ವಂಚಿತರಾಗಬಾರದು. ಅಭಿಯಾನದ ಸಮರ್ಪಕ ಅನುಷ್ಠಾನಕ್ಕಾಗಿ ವಿವಿಧ ಇಲಾಖೆಗಳಿಗೆ ಜವಾಬ್ದಾರಿ ವಹಿಸಲಾಗಿದೆ ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>2026ನೇ ಸಾಲಿನ ರಾಷ್ಟ್ರೀಯ ಲಸಿಕಾ ದಿನದ  ಅಂಗವಾಗಿ ಮೈಸೂರು  ಜಿಲ್ಲೆಯಲ್ಲಿ ಐದು ವರ್ಷದೊಳಗಿನ ಒಟ್ಟು 2,19,521 ಮಕ್ಕಳಿಗೆ ಲಸಿಕೆ ನೀಡುವ ಮಹತ್ತರ ಗುರಿಯನ್ನು ಹೊಂದಲಾಗಿದೆ. ಜಿಲ್ಲೆಯ ಒಟ್ಟು 7,78,059 ಮನೆಗಳನ್ನು ತಲುಪಲು ಆರೋಗ್ಯ ಇಲಾಖೆ ಸಜ್ಜಾಗಿದೆ ಎಂದರು.</p>
<p>ನಗರಸಭೆ, ಪುರಸಭೆ ಹಾಗೂ ಮುನ್ಸಿಪಲ್ ಇಲಾಖೆ ನಗರ ಪ್ರದೇಶಗಳಲ್ಲಿ, ವಿಶೇಷವಾಗಿ ಮೈಸೂರು ನಗರದಲ್ಲಿ ಲಸಿಕಾ ಪ್ರಮಾಣ ಕುಂಠಿತವಾಗದಂತೆ ತಡೆಯಲು ಪ್ರತ್ಯೇಕ ನೋಡಲ್ ಅಧಿಕಾರಿ&#8217;ಗಳನ್ನು ನೇಮಿಸಿ ಕ್ರಿಯಾಯೋಜನೆ ರೂಪಿಸಬೇಕು. ಚೆಸ್ಕಾಂ ವತಿಯಿಂದ  ಪೋಲಿಯೋ ಲಸಿಕೆಯನ್ನು ಸುರಕ್ಷಿತವಾಗಿಡಲು ಹಾಗೂ ಶೀತಲ ಐಸ್ ಪ್ಯಾಕ್‌ ಗಳನ್ನು  ಕಾಯ್ದುಕೊಳ್ಳಲು ಜೂನ್ 26 ರಿಂದ ಜುಲೈ 2 ರವರೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಸೂಚನೆ ನೀಡಿದರು.<img loading="lazy" decoding="async" class="aligncenter size-full wp-image-135626" src="https://www.justkannada.in/wp-content/uploads/2025/01/dc-lakshmikanth-reddy.jpg" alt="" width="500" height="280" srcset="https://www.justkannada.in/wp-content/uploads/2025/01/dc-lakshmikanth-reddy.jpg 500w, https://www.justkannada.in/wp-content/uploads/2025/01/dc-lakshmikanth-reddy-300x168.jpg 300w, https://www.justkannada.in/wp-content/uploads/2025/01/dc-lakshmikanth-reddy-150x84.jpg 150w" sizes="auto, (max-width: 500px) 100vw, 500px" /></p>
<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಪಿ.ಸಿ ಕುಮಾರಸ್ವಾಮಿ ಅವರು ಮಾತನಾಡಿ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಜಿಲ್ಲಾದ್ಯಂತ ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಿಬ್ಬಂದಿ ಮತ್ತು ಕೇಂದ್ರಗಳನ್ನು ನಿಯೋಜಿಸಲಾಗಿದೆ. ​ಒಟ್ಟು 1,641 ಬೂತ್ ಗಳಲ್ಲಿ,1396 ಎಚ್.ಆರ್.ಎ  ಸೈಟ್‌ ಗಳು. 51 ಮೊಬೈಲ್ ಮತ್ತು ಟ್ರಾನ್ಸಿಟ್ ತಂಡಗಳು. 328,​ಮೇಲ್ವಿಚಾರಕರು, ​6772 ಲಸಿಕೆ ನೀಡುವ ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದರು.</p>
<p>ಜೂನ್ 26 ಮತ್ತು 27 ರಂದು ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಪೋಲಿಯೋ ಜಾಗೃತಿ ಜಾಥಾ ನಡೆಸಿ ಜನರಲ್ಲಿ ಅರಿವು ಮೂಡಿಸಬೇಕು. ಪ್ರತಿ ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿಯನ್ನು ರಾಯಭಾರಿ ಆಗಿ ಪ್ರೇರೇಪಿಸಬೇಕು.​ ಜೂನ್ 28 ರಂದು ಭಾನುವಾರ ಬೆಳಗ್ಗೆ 8:00 ಗಂಟೆಗೆ ಲಸಿಕಾ ಕಾರ್ಯಕ್ರಮಕ್ಕಾಗಿ ಶಾಲಾ ಕೊಠಡಿಗಳನ್ನು ಸಜ್ಜುಗೊಳಿಸಬೇಕು. ಪ್ರೌಢಶಾಲೆ ಮತ್ತು ಕಾಲೇಜುಗಳ ಎನ್.ಎಸ್.ಎಸ್  ಹಾಗೂ ಎನ್.ಸಿ.ಸಿ ವಿದ್ಯಾರ್ಥಿಗಳನ್ನು ಸ್ವಯಂಸೇವಕರನ್ನಾಗಿ ನಿಯೋಜಿಸಬೇಕು. ಪ್ರೀಸ್ಕೂಲ್, ಎಲ್.ಕೆ.ಜಿ, ಯು.ಕೆ.ಜಿ ಮಕ್ಕಳ ಪೋಷಕರಿಗೂ ಲಸಿಕೆ ಹಾಕಿಸಲು ಪ್ರೇರೇಪಿಸುವಂತೆ ತಿಳಿಸಿದರು.</p>
<p>ತಾಲ್ಲೂಕು ಮಟ್ಟದಲ್ಲಿ ಇ.ಒ ಅವರ ಅಧ್ಯಕ್ಷತೆಯಲ್ಲಿ ಅನುಷ್ಠಾನ ಸಮಿತಿ ರಚಿಸಬೇಕು. ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕರಪತ್ರಗಳ ವಿತರಣೆ ಹಾಗೂ ಟಾಂ ಟಾಂ ಮೂಲಕ ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕು. ಸಾಂಪ್ರದಾಯಿಕವಾಗಿ ತಲುಪಲು ಕಷ್ಟವಾಗುವ ಹಳ್ಳಿಗಳ ಪಟ್ಟಿ ಸಿದ್ಧಪಡಿಸಿ, ಲಸಿಕಾ ಕೇಂದ್ರದ ಸಿಬ್ಬಂದಿಗೆ ಊಟ ಹಾಗೂ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪಂಚಾಯಿತಿ ಜನಪ್ರತಿನಿಧಿಗಳು ಉಸ್ತುವಾರಿ ವಹಿಸಿಕೊಳ್ಳಬೇಕು ಎಂದು ಸೂಚಿಸಿದರು.</p>
<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಲಸಿಕಾ ದಿನದಂದು ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಕಡ್ಡಾಯವಾಗಿ ತೆರೆದು,  ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕರು ಸಕ್ರಿಯವಾಗಿ ಭಾಗವಹಿಸಬೇಕು. ಸ್ತ್ರೀಶಕ್ತಿ ಸಂಘಗಳು ಹಾಗೂ ಬಾಲ ವಿಕಾಸ ಸಮಿತಿಗಳ ಮೂಲಕ ತಾಯಂದಿರ ಸಭೆ ನಡೆಸಿ ಲಸಿಕೆಯ ಮಹತ್ವ ತಿಳಿಸಬೇಕು. ಸಿ.ಡಿ.ಪಿ.ಓ.ಗಳು ತಾಲ್ಲೂಕು ಮಟ್ಟದ ಉಸ್ತುವಾರಿ ನೋಡಿಕೊಳ್ಳಲಿದ್ದು, ಅನಾಥಾಶ್ರಮಗಳಲ್ಲಿರುವ ಮಕ್ಕಳಿಗೂ ಲಸಿಕೆ ತಲುಪಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ  ಮಲ್ಲಿಕಾರ್ಜುನ ಬಾಲದಂಡಿ , ಪಲ್ಸ್ ಪೋಲಿಯೋ ಅನುಷ್ಠಾನ ಅಧಿಕಾರಿ ಡಾ. ಸಿರಾಜ್ ಅಹಮದ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: Mysore, Pulse Polio, Campaign, Vaccinate, DC,  Laxmikant Reddy</p>
<p>The post <a href="https://www.justkannada.in/pulse-polio-dc-laxmikant-reddy/">ಜೂ.28ರಿಂದ ಪಲ್ಸ್ ಪೋಲಿಯೋ ಅಭಿಯಾನ: ಪ್ರತಿ ಮಗುವಿಗೂ ಲಸಿಕೆ ಹಾಕಿಸಿ- ಡಿಸಿ ಲಕ್ಷ್ಮೀಕಾಂತ ರೆಡ್ಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಲೆಗಳಲ್ಲಿ ಕೇಸರಿ ಶಾಲು ಅಭಿಯಾನ ವಿಚಾರ: ಬಿಜೆಪಿ ವಿರುದ್ದ ಸಚಿವ ಮಧು ಬಂಗಾರಪ್ಪ ವಾಗ್ದಾಳಿ</title>
		<link>https://www.justkannada.in/madhu-bangarappa-8/</link>
		
		<dc:creator><![CDATA[prashanth]]></dc:creator>
		<pubDate>Fri, 22 May 2026 05:41:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[Campaign.]]></category>
		<category><![CDATA[madhu bangarappa]]></category>
		<category><![CDATA[minister]]></category>
		<category><![CDATA[saffron shawl]]></category>
		<guid isPermaLink="false">https://www.justkannada.in/?p=155108</guid>

					<description><![CDATA[<p>ಶಿವಮೊಗ್ಗ,ಮೇ,22,2026 (www.justkannada.in): ಶಾಲೆಗಳಲ್ಲಿ ಕೇಸರಿ ಶಾಲು ಅಭಿಯಾನಕ್ಕೆ ನಿರ್ಧಾರ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಾಲೆಗಳಲ್ಲಿ ಕೇಸರಿ ಶಾಲು ಅಭಿಯಾನಕ್ಕೆ ನಿರ್ಧಾರ,  ಈ ರೀತಿ ಹೇಳಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು . ಇವೆಲ್ಲವೂ ಕೂಡ ರಬ್ಬೀಶ್ ಕೆಲಸವಾಗಿದೆ. ಬಿಜೆಪಿಯವರು ಮಕ್ಕಳನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ನೀಟ್ ನಲ್ಲಿ 25 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯ [&#8230;]</p>
<p>The post <a href="https://www.justkannada.in/madhu-bangarappa-8/">ಶಾಲೆಗಳಲ್ಲಿ ಕೇಸರಿ ಶಾಲು ಅಭಿಯಾನ ವಿಚಾರ: ಬಿಜೆಪಿ ವಿರುದ್ದ ಸಚಿವ ಮಧು ಬಂಗಾರಪ್ಪ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಮೇ,22,2026 (<a href="http://www.justkannada.in">www.justkannada.in</a>):</strong> ಶಾಲೆಗಳಲ್ಲಿ ಕೇಸರಿ ಶಾಲು ಅಭಿಯಾನಕ್ಕೆ ನಿರ್ಧಾರ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಾಲೆಗಳಲ್ಲಿ ಕೇಸರಿ ಶಾಲು ಅಭಿಯಾನಕ್ಕೆ ನಿರ್ಧಾರ,  ಈ ರೀತಿ ಹೇಳಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು . ಇವೆಲ್ಲವೂ ಕೂಡ ರಬ್ಬೀಶ್ ಕೆಲಸವಾಗಿದೆ. ಬಿಜೆಪಿಯವರು ಮಕ್ಕಳನ್ನು ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ನೀಟ್ ನಲ್ಲಿ 25 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದ್ದಾರೆ ಎಂದರು.</p>
<p>ಧರ್ಮೇಂದ್ರ ಪ್ರಧಾನ್  ಆ ಹೆಸರು ಇಟ್ಟುಕೊಳ್ಳಲು ನಾಲಾಯಕ್ ಯಾರು ಹೊಣೆಗಾರರೋ ಅವರ ತಲೆದಂಡವಾಗಬೇಕಿತ್ತು ಕೇಂದ್ರ ಶಿಕ್ಷಣ ಸಚಿವರು ಕಾರು ಹತ್ತಿ ಹೋಗಿ ನಾಪತ್ತೆಯಾಗಿದ್ದಾರೆ.  5 ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಈ ದುರಂತದ ಬಗ್ಗೆ ಬಿಜೆಪಿಯವರು ಯಾಕೆ ಮಾತನಾಡಲ್ಲ. ಎಲ್ಲಾ ಧರ್ಮದವರನ್ನು ಕಾಪಡುವ ಕೆಲಸ ನಮ್ಮದು ಎಂದು ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು.<img loading="lazy" decoding="async" class="aligncenter size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p>Key words: Minister, Madhu Bangarappa, BJP, saffron shawl, campaign</p>
<p>The post <a href="https://www.justkannada.in/madhu-bangarappa-8/">ಶಾಲೆಗಳಲ್ಲಿ ಕೇಸರಿ ಶಾಲು ಅಭಿಯಾನ ವಿಚಾರ: ಬಿಜೆಪಿ ವಿರುದ್ದ ಸಚಿವ ಮಧು ಬಂಗಾರಪ್ಪ ವಾಗ್ದಾಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಂಗಡಿ ಮಳಿಗೆಗಳ‌ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಅಭಿಯಾನ: ಅಪರ ಜಿಲ್ಲಾಧಿಕಾರಿ</title>
		<link>https://www.justkannada.in/kannada-shops-mysore-adc/</link>
		
		<dc:creator><![CDATA[prashanth]]></dc:creator>
		<pubDate>Mon, 18 May 2026 12:58:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[ADC]]></category>
		<category><![CDATA[Campaign.]]></category>
		<category><![CDATA[kannada]]></category>
		<category><![CDATA[Mysore.]]></category>
		<category><![CDATA[Shops]]></category>
		<category><![CDATA[use]]></category>
		<guid isPermaLink="false">https://www.justkannada.in/?p=154962</guid>

					<description><![CDATA[<p>ಮೈಸೂರು, ಮೇ,18,2026 (www.justkannada.in): ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರು ನಗರದ ಆಯ್ದ ರಸ್ತೆಗಳಲ್ಲಿ ಇರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಬಳಕೆ ಮಾಡುವ ಬಗ್ಗೆ ಅಭಿಯಾನ ನಡೆಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಸರ್ಕಾರದ ಭಾಷಾ ನೀತಿ ಅನುಷ್ಠಾನದಲ್ಲಿ ಜನರು ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ಮೈಸೂರು ಜಿಲ್ಲೆಯಲ್ಲಿ ಕನ್ನಡ ಜಾಗೃತಿ ಸಮಿತಿಗೆ ಆಯ್ಕೆ ಮಾಡಿರುವ [&#8230;]</p>
<p>The post <a href="https://www.justkannada.in/kannada-shops-mysore-adc/">ಅಂಗಡಿ ಮಳಿಗೆಗಳ‌ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಅಭಿಯಾನ: ಅಪರ ಜಿಲ್ಲಾಧಿಕಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಮೇ,18,2026 (<a href="http://www.justkannada.in">www.justkannada.in</a>):</strong> ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರು ನಗರದ ಆಯ್ದ ರಸ್ತೆಗಳಲ್ಲಿ ಇರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಬಳಕೆ ಮಾಡುವ ಬಗ್ಗೆ ಅಭಿಯಾನ ನಡೆಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಸರ್ಕಾರದ ಭಾಷಾ ನೀತಿ ಅನುಷ್ಠಾನದಲ್ಲಿ ಜನರು ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ಮೈಸೂರು ಜಿಲ್ಲೆಯಲ್ಲಿ ಕನ್ನಡ ಜಾಗೃತಿ ಸಮಿತಿಗೆ ಆಯ್ಕೆ ಮಾಡಿರುವ ಸದಸ್ಯರೊಂದಿಗೆ ಸಭೆ ನಡೆಸಿ ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ ಮಾತನಾಡಿದರು.  ಕನ್ನಡ ನಮ್ಮ ಮಾತೃ ಭಾಷೆ, ಕನ್ನಡ ಭಾಷೆಯನ್ನು ಗೌರವಿಸಿ ಹೆಚ್ಚು ಬಳಕೆ ಮಾಡುವುದನ್ನು ನಾಡಿನ ಜನತೆಯಾದ ನಾವು ಬೆಳಸಿಕೊಳ್ಳಬೇಕು ಎಂದರು.</p>
<p>ಕನ್ನಡ ಭಾಷೆಯ ಬಳಕೆಯನ್ನು‌ ಜನರಲ್ಲಿ ಹೆಚ್ಚು‌ ಮಾಡಲು ಕನ್ನಡಕ್ಕಾಗಿ ಓಟ ಸೇರಿದಂತೆ ‌ವಿವಿಧ ಕಾರ್ಯಕ್ರಮಗಳನ್ನು‌ ಕನ್ನಡ ‌ಜಾಗೃತಿ‌ ಸಮಿತಿ‌ ಸದಸ್ಯರೊಂದಿಗೆ ಸಂಘಟಿಸಿ ಆಯೋಜಿಸಿ ಎಂದರು.</p>
<p>ಕನ್ನಡ ಭಾಷೆಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯಲ್ಲಿ ಬಹಳಷ್ಟು ಇಲಾಖೆಯವರು ಗೈರು ಹಾಜರಾಗಿದ್ದು, ಮುಂದಿನ ಸಭೆಗೆ ಗೈರುಹಾಜರಾದಲ್ಲಿ ನೋಟೀಸ್ ಜಾರಿ ಮಾಡುವುದಾಗಿ ಎಚ್ಚರಿಕೆ ನೀಡಿದರು.</p>
<p>ಸಂಚಾರಿ ನಿಯಮಗಳ ಫಲಕಗಳಲ್ಲಿ ಒಂದು ಬದಿಯಲ್ಲಾದ್ದರೂ ಕನ್ನಡ ಭಾಷೆಯನ್ನು ಬಳಕೆ ಮಾಡಬೇಕು. ಕನ್ನಡಪರ ಹೋರಾಟ ನಡೆದಾಗ ಪೊಲೀಸ್ ಇಲಾಖೆಯಿಂದ ದೂರು ದಾಖಲಿಸುವ ಸಂದರ್ಭ ಎದುರಾದಲ್ಲಿ ಕನ್ನಡ ಪರ ಹೋರಾಟದ ಸಂದರ್ಭ ಎಂದು ಉದ್ದೇಶವನ್ನು ದೂರಿನಲ್ಲಿ ನಮೂದಿಸಬೇಕು. ಮೈಸೂರು ನಗರ ಪ್ರವಾಸಿ ತಾಣವಾಗಿದ್ದು, ಪೆಟ್ರೋಲ್ ಬಂಕ್ ಹಾಗೂ ಇತರೆ ಸ್ಥಳಗಳಲ್ಲಿ ಐ ಲವ್ ಮೈಸೂರು ಎಂಬ ಇಂಗ್ಲಿಷ್ ಪದದ  ಬದಲು ನನ್ನ  ಮೈಸೂರು ಎಂಬ ಕನ್ನಡ ಪದ ಉಪಯೋಗಿಸುವುದು ಉತ್ತಮ. ಕೆಲವು ಖಾಸಗಿ ಶಾಲೆಗಳಲ್ಲಿ ಕನ್ನಡ ಶಿಕ್ಷಕರ‌ ನೇಮಕವೇ ಮಾಡಿಕೊಂಡಿಲ್ಲ ಹಾಗೂ ಕನ್ನಡ ಭಾಷೆಯಲ್ಲಿ ಮಾತನಾಡಿದರೆ ದಂಡ ವಿಧಿಸುವ ಕ್ರಮವಿದೆ. ಇವುಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ಟಿ.ಗುರುರಾಜ್ ಅವರು ತಿಳಿಸಿದರು.</p>
<p>ಪೊಲೀಸ್ ಇಲಾಖೆಯಲ್ಲಿ ಕನ್ನಡಪರ‌ ಹೋರಾಟಗಾರರು ಹೋರಾಟಕ್ಕೆ ಅನುಮತಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳು ಅವರನ್ನು ಗೌರವಯುತವಾಗಿ ಕಾಣಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೂಚನಾ ಫಲಕಗಳು ಹಾಗೂ ಜಾಹೀರಾತು ಫಲಕಗಳಲ್ಲಿ ಹೆಚ್ಚಿನ ಕನ್ನಡ ಬಳಕೆಗೆ ಆದ್ಯತೆ ನೀಡಬೇಕು. ಡಿಟಿಪಿ ಆಪರೇಟರ್ ಗಳಿಗೆ ಕನ್ನಡ ಭಾಷಾ ಜ್ಞಾನದ ತರಬೇತಿ ನೀಡಬೇಕು ಎಂದು ಕನ್ನಡ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಕಡಕೊಳ ಕುಮಾರಸ್ವಾಮಿ ಅವರು ತಿಳಿಸಿದರು.</p>
<p>ಅಂಗಡಿ ಮುಂಗುಟ್ಟು, ಶಿಕ್ಷಣ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡದಲ್ಲಿರಬೇಕು. ಆದರೆ ಇನ್ನೂ ಬಹಳಷ್ಟು ಕಡೆ ಈ ನಿಯಮ ಪಾಲಿಸುತ್ತಿಲ್ಲ. ಇದರ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕನ್ನಡ ಪರ ಹೋರಾಟಗಾರರು ಹೋರಾಟ ನಡೆಸುವುದಾಗಿ ಕನ್ನಡ ಜಿಲ್ಲಾ ಜಾಗೃತಿ ಸಮಿತಿ  ಸದಸ್ಯ ಜಿ. ಮೋಹನ್ ಅವರು ಎಚ್ಚರಿಸಿದರು.</p>
<p>ಬ್ಯಾಂಕ್ ಗಳಲ್ಲಿ ಚಲನ್ ಗಳು ಸೇರಿದಂತೆ ಇತರೆ ನಮೂನೆಗಳಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವ ರೀತಿ ಕನ್ನಡ ಭಾಷೆಯ ಬಳಕೆಯಾಗಬೇಕು.  ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಕನ್ನಡದ ಬಳಕೆಗೆ ಆದ್ಯತೆ ನೀಡಬೇಕು ಎಂದು ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ಕನ್ನಡ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಕೆ.ಆರ್. ಗೋಪಾಲಕೃಷ್ಣ ಅವರು ತಿಳಿಸಿದರು.</p>
<p>ಕನ್ನಡ ಜಿಲ್ಲಾ ಜಾಗೃತಿ‌ ಸಮಿತಿ‌ ಸದಸ್ಯರು‌ ಚರ್ಚಿಸಿರುವ ವಿಷಯಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಆಯಾ ಇಲಾಖೆಗೆ ಪತ್ರ ಬರೆಯುವಂತೆ ಅಪರ ಜಿಲ್ಲಾಧಿಕಾರಿಗಳು ಕನ್ನಡ ಮತ್ತು‌ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ: ಸುದರ್ಶನ್ ಅವರಿಗೆ ಸೂಚನೆ ನೀಡಿದರು.</p>
<p>ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಉಪ ಆಯುಕ್ತ ದಾಸೇಗೌಡ, ಕನ್ನಡ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರುಗಳಾದ ಡಾ.ವಿನೋದಮ್ಮ, ರವಿಪ್ರಸಾದ್ ಹೆಚ್.ಆರ್,ಕುಮಾರ್, ಡಾ.ದಿನಮಣಿ ಬಿ.ಎಸ್,ನಾ.ದಿವಾಕರ, ಪರಮೇಶ್, ಮೋಹನ್ ಕುಮಾರ್ ಗೌಡ, ಡಾ. ಎಂ.ಪಿ. ಮಂಜಪ್ಪ ಶೆಟ್ಟಿ ಮಸಗಲಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Campaign, use, Kannada, shops, Mysore, ADC</p>
<p>The post <a href="https://www.justkannada.in/kannada-shops-mysore-adc/">ಅಂಗಡಿ ಮಳಿಗೆಗಳ‌ ನಾಮಫಲಕಗಳಲ್ಲಿ ಕನ್ನಡ ಬಳಕೆಗೆ ಅಭಿಯಾನ: ಅಪರ ಜಿಲ್ಲಾಧಿಕಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನನ್ನ ಖಾತಾ ನನ್ನ ಹಕ್ಕು ಅಭಿಯಾನ: 6ನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/dcm-dk-shivakumar-161/</link>
		
		<dc:creator><![CDATA[prashanth]]></dc:creator>
		<pubDate>Wed, 13 May 2026 10:17:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[6th guarantee]]></category>
		<category><![CDATA[Campaign.]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[My Account My Rights]]></category>
		<guid isPermaLink="false">https://www.justkannada.in/?p=154773</guid>

					<description><![CDATA[<p>ಬೆಂಗಳೂರು, ಮೇ, 13,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಜನತೆಗೆ ಸಿಹಿಸುದ್ದಿ ನೀಡಿದ್ದು  ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅಭಿಯಾನ ಮಾಡುವುದಾಗಿ ಘೋಷಿಸಿದ್ದಾರೆ. ಇದು 6ನೇ ಗ್ಯಾರಂಟಿ ಎಂದು ಡಿಕೆಶಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್,ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ 16-05-2026 ರಂದು ನಡೆಯುವ ನನ್ನ ಖಾತಾ ನನ್ನ ಹಕ್ಕು ಅಭಿಯಾನ ಘೋಷಿಸಿದ್ದೇವೆ, ಓಸಿ ಇಲ್ಲದೇ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಸಿಗದೇ ಪರದಾಡುತ್ತಾ ಇದ್ದವರಿಗೆ [&#8230;]</p>
<p>The post <a href="https://www.justkannada.in/dcm-dk-shivakumar-161/">ನನ್ನ ಖಾತಾ ನನ್ನ ಹಕ್ಕು ಅಭಿಯಾನ: 6ನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಮೇ, 13,2026 (<a href="http://www.justkannada.in">www.justkannada.in</a>): </strong> ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಜನತೆಗೆ ಸಿಹಿಸುದ್ದಿ ನೀಡಿದ್ದು  ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅಭಿಯಾನ ಮಾಡುವುದಾಗಿ ಘೋಷಿಸಿದ್ದಾರೆ. ಇದು 6ನೇ ಗ್ಯಾರಂಟಿ ಎಂದು ಡಿಕೆಶಿ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್,ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ 16-05-2026 ರಂದು ನಡೆಯುವ ನನ್ನ ಖಾತಾ ನನ್ನ ಹಕ್ಕು ಅಭಿಯಾನ ಘೋಷಿಸಿದ್ದೇವೆ, ಓಸಿ ಇಲ್ಲದೇ ವಿದ್ಯುತ್ ಸಂಪರ್ಕ, ನೀರಿನ ಸಂಪರ್ಕ ಸಿಗದೇ ಪರದಾಡುತ್ತಾ ಇದ್ದವರಿಗೆ ಅನುಕೂಲವಾಗಲಿದೆ.  ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅವಕಾಶ ಕೊಡುತ್ತೇವೆ.</p>
<p>ಒಟ್ಟು 7 ಲಕ್ಷ ಬಿ ಖಾತೆಗಳಿದ್ದು, ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಅಭಿಯಾನ ಮಾಡುತ್ತೇವೆ. ನಗರದಲ್ಲಿ ಕೆಲವರು ಪ್ಲ್ಯಾನ್​ ಇಲ್ಲದೆ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಅಂತಹವರ ಅನುಕೂಲಕಕ್ಕಾಗಿ ಈ ಅಭಿಯಾನ ಹಮ್ಮಿಕೊಂಡಿದ್ದೇವೆ. ಶಾಲೆ ಆವರಣದಲ್ಲಿ ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದ 10 ಕಡೆ ಅಭಿಯಾನ ನಡೆಯಲಿದ್ದು, ಮೇ 16ರ ಬಳಿಕ ಪ್ರತಿ ಶನಿವಾರ ಜಾಗ ನಿಗದಿ ಮಾಡಲಾಗುತ್ತದೆ. ಅಧಿಕಾರಿಗಳು ರಜೆ ಇದ್ದರೂ ಕೂಡ ಕೆಲಸ ಮಾಡಬೇಕು. ನಗರದ ನಾಗರಿಕರು ಬಂದು ದಾಖಲೆಗಳನ್ನು ಸರಿ ಮಾಡಿಕೊಳ್ಳಬೇಕು ಎಂದರು.<img loading="lazy" decoding="async" class="aligncenter size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p>ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳಲು ಗೈಡೆನ್ಸ್ ವ್ಯಾಲ್ಯೂ ಇಳಿಕೆ ಮಾಡುತ್ತೇವೆ. ಶೇ 5ರಂದ ಶೇ 2ಕ್ಕೆ ಗೈಡೆನ್ಸ್ ವ್ಯಾಲ್ಯು ಇಳಿಕೆ ಮಾಡಲಾಗುತ್ತದೆ. 100 ದಿನಗಳಲ್ಲಿ ಬಿ ಖಾತೆಯಿಂದ ಎ ಖಾತೆ ಮಾಡಿಕೊಳ್ಳದಿದ್ದರೇ ಶೇ 5 ರಷ್ಟು ಗೈಡೆನ್ಸ್ ವ್ಯಾಲ್ಯೂ ಇರುತ್ತೆ 7 ಲಕ್ಷ ಬಿ.ಖಾತೆದಾರರಿಗೆ ಇದು ಅನುಕೂಲವಾಗಲಿದೆ ಎಂದು ಡಿಕೆ ಶಿವ ಕುಮಾರ್ ಹೇಳಿದರು.</p>
<p>Key words: My Account My Rights, Campaign, DCM, DK Shivakumar,  6th guarantee</p>
<p>The post <a href="https://www.justkannada.in/dcm-dk-shivakumar-161/">ನನ್ನ ಖಾತಾ ನನ್ನ ಹಕ್ಕು ಅಭಿಯಾನ: 6ನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದು ಸಿಎಂ ಸಿದ್ದರಾಮಯ್ಯ, ಏ.5ಕ್ಕೆ ಜಮೀರ್ ಪ್ರಚಾರಕ್ಕೆ ಬರಲಿದ್ದಾರೆ &#8211; ಸಚಿವ ಎಸ್.ಎಸ್ ಮಲ್ಲಿಕಾರ್ಜುನ್</title>
		<link>https://www.justkannada.in/minister-s-s-mallikarjun/</link>
		
		<dc:creator><![CDATA[prashanth]]></dc:creator>
		<pubDate>Wed, 01 Apr 2026 05:01:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Campaign.]]></category>
		<category><![CDATA[CM Siddaramaiah]]></category>
		<category><![CDATA[minister]]></category>
		<category><![CDATA[S.S. Mallikarjun]]></category>
		<guid isPermaLink="false">https://www.justkannada.in/?p=153187</guid>

					<description><![CDATA[<p>ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು ಪ್ರಚಾರಕ್ಕಾಗಿ ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ ತೆರಳಲಿದ್ದಾರೆ. ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಇಂದು ಗ್ರಾಮಾಂತರ ಪ್ರದೇಶಗಳಲ್ಲಿ  ಸಿಎಂ ಮತಯಾಚನೆ ಮಾಡಲಿದ್ದಾರೆ. ನಾಳೆ ನಗರ ಭಾಗದಲ್ಲಿ ಸಿಎಂ  ಸಿದ್ದರಾಮಯ್ಯ ರೋಡ್ ಶೋ ಮಾಡುತ್ತಾರೆ ಎಂದರು. ಏಪ್ರಿಲ್ 5 ರಂದು ಸಚಿವ ಜಮೀರ್ ಅಹ್ಮದ್ ಖಾನ್  ಚುನಾವಣಾ ಪ್ರಚಾರಕ್ಕೆ ಬರುತ್ತಾರೆ.  ಕೇರಳದಲ್ಲಿ ಪ್ರಚಾರ [&#8230;]</p>
<p>The post <a href="https://www.justkannada.in/minister-s-s-mallikarjun/">ಇಂದು ಸಿಎಂ ಸಿದ್ದರಾಮಯ್ಯ, ಏ.5ಕ್ಕೆ ಜಮೀರ್ ಪ್ರಚಾರಕ್ಕೆ ಬರಲಿದ್ದಾರೆ &#8211; ಸಚಿವ ಎಸ್.ಎಸ್ ಮಲ್ಲಿಕಾರ್ಜುನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ಏಪ್ರಿಲ್,1,2026 (<a href="http://www.justkannada.in">www.justkannada.in</a>): </strong> ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು ಪ್ರಚಾರಕ್ಕಾಗಿ ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ ತೆರಳಲಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿ ಮಾಹಿತಿ ನೀಡಿದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಇಂದು ಸಿಎಂ ಸಿದ್ದರಾಮಯ್ಯ ದಾವಣಗೆರೆಗೆ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಇಂದು ಗ್ರಾಮಾಂತರ ಪ್ರದೇಶಗಳಲ್ಲಿ  ಸಿಎಂ ಮತಯಾಚನೆ ಮಾಡಲಿದ್ದಾರೆ. ನಾಳೆ ನಗರ ಭಾಗದಲ್ಲಿ ಸಿಎಂ  ಸಿದ್ದರಾಮಯ್ಯ ರೋಡ್ ಶೋ ಮಾಡುತ್ತಾರೆ ಎಂದರು.</p>
<p>ಏಪ್ರಿಲ್ 5 ರಂದು ಸಚಿವ ಜಮೀರ್ ಅಹ್ಮದ್ ಖಾನ್  ಚುನಾವಣಾ ಪ್ರಚಾರಕ್ಕೆ ಬರುತ್ತಾರೆ.  ಕೇರಳದಲ್ಲಿ ಪ್ರಚಾರ ಮುಗಿಸಿ ದಾವಣಗೆರೆಗೆ ಜಮೀರ್ ಬರುತ್ತಾರೆ ಎಂದು  ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ತಿಳಿಸಿದರು.</p>
<p>Key words: CM Siddaramaiah, campaign, Minister, S.S. Mallikarjun</p>
<p>The post <a href="https://www.justkannada.in/minister-s-s-mallikarjun/">ಇಂದು ಸಿಎಂ ಸಿದ್ದರಾಮಯ್ಯ, ಏ.5ಕ್ಕೆ ಜಮೀರ್ ಪ್ರಚಾರಕ್ಕೆ ಬರಲಿದ್ದಾರೆ &#8211; ಸಚಿವ ಎಸ್.ಎಸ್ ಮಲ್ಲಿಕಾರ್ಜುನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಾಗಲಕೋಟೆ ಬೈ ಎಲೆಕ್ಷನ್: ಸಚಿವ ಜಮೀರ್ ವಿರುದ್ದ ‘ಗೋ ಬ್ಯಾಕ್’ ಅಭಿಯಾನ</title>
		<link>https://www.justkannada.in/bagalkot-by-election-jameer/</link>
		
		<dc:creator><![CDATA[prashanth]]></dc:creator>
		<pubDate>Sat, 28 Mar 2026 09:28:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bagalkot]]></category>
		<category><![CDATA[by-election]]></category>
		<category><![CDATA[Campaign.]]></category>
		<category><![CDATA[go back]]></category>
		<category><![CDATA[Minister Jameer]]></category>
		<guid isPermaLink="false">https://www.justkannada.in/?p=153059</guid>

					<description><![CDATA[<p>ಬಾಗಲಕೋಟೆ,ಮಾರ್ಚ್,28,2026 (www.justkannada.in):  ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ ತೊಡಗಿದ್ದು ಈ ಮಧ್ಯೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಮುಸ್ಲೀಂ ಸಮುದಾಯದ ಮುಖಂಡರೇ ಗೋ ಬ್ಯಾಕ್ ಅಭಿಯಾನ ನಡೆಸಿದ್ದಾರೆ. ಅಂಜುಮನ್  ಕಮಿಟಿಗೆ ಅನುಮೋದನೆ ನೀಡದ ಹಿನ್ನೆಲೆಯಲ್ಲಿ ಅಂಜುಮನ್ ಕಮಿಟಿಯ ಪದಾಧಿಕಾರಿ  ಸದಸ್ಯರು ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಗೋಬ್ಯಾಕ್ ಅಭಿಯಾನ ನಡೆಸಿದ್ದಾರೆ. ನಾವು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ಮಾಢುತ್ತೇವೆ. ಆದರೆ ಜಮೀರ್ ಬಂದರೆ ಕಾಂಗ್ರೆಸ್ ಗೆ ವೋಟ್ ಮೈನಸ್ [&#8230;]</p>
<p>The post <a href="https://www.justkannada.in/bagalkot-by-election-jameer/">ಬಾಗಲಕೋಟೆ ಬೈ ಎಲೆಕ್ಷನ್: ಸಚಿವ ಜಮೀರ್ ವಿರುದ್ದ ‘ಗೋ ಬ್ಯಾಕ್’ ಅಭಿಯಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಮಾರ್ಚ್,28,2026 (<a href="http://www.justkannada.in">www.justkannada.in</a>): </strong> ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ ತೊಡಗಿದ್ದು ಈ ಮಧ್ಯೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಮುಸ್ಲೀಂ ಸಮುದಾಯದ ಮುಖಂಡರೇ ಗೋ ಬ್ಯಾಕ್ ಅಭಿಯಾನ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅಂಜುಮನ್  ಕಮಿಟಿಗೆ ಅನುಮೋದನೆ ನೀಡದ ಹಿನ್ನೆಲೆಯಲ್ಲಿ ಅಂಜುಮನ್ ಕಮಿಟಿಯ ಪದಾಧಿಕಾರಿ  ಸದಸ್ಯರು ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಗೋಬ್ಯಾಕ್ ಅಭಿಯಾನ ನಡೆಸಿದ್ದಾರೆ.</p>
<p>ನಾವು ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ಮಾಢುತ್ತೇವೆ. ಆದರೆ ಜಮೀರ್ ಬಂದರೆ ಕಾಂಗ್ರೆಸ್ ಗೆ ವೋಟ್ ಮೈನಸ್ ಆಗಲಿವೆ.  ಪ್ರಚಾರಕ್ಕೆ ಜಮೀರ್ ಅಹ್ಮದ್ ಖಾನ್ ಬರುವುದು ಬೇಡ. ಅವರ ಬದಲು ರಿಜ್ವಾನ್ ಅರ್ಷಾದ್, ಸಲೀಂ ಅಹ್ಮದ್ ಬರಲಿ ಜಮೀರ್  ಬಂದರೆ ಕಪ್ಪು ಪಟ್ಟಿ ಪ್ರದರ್ಶನ ಮಾಡುತ್ತೇವೆ ಎಂಧು ಮುಸ್ಲೀಂ ಮುಖಂಡರು ಎಚ್ಚರಿಕೆ ನೀಡಿದ್ದಾರೆ.</p>
<p>Key words: Bagalkot, by-election, Go back, campaign, Minister Jameer</p>
<p>The post <a href="https://www.justkannada.in/bagalkot-by-election-jameer/">ಬಾಗಲಕೋಟೆ ಬೈ ಎಲೆಕ್ಷನ್: ಸಚಿವ ಜಮೀರ್ ವಿರುದ್ದ ‘ಗೋ ಬ್ಯಾಕ್’ ಅಭಿಯಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪ್ರಚಾರದ ವೇಳೆ ಹೈಡ್ರಾಮಾ: ‘ಕೈ’ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ , ಪೊರಕೆ ಪ್ರದರ್ಶನ</title>
		<link>https://www.justkannada.in/davanagere-by-election/</link>
		
		<dc:creator><![CDATA[prashanth]]></dc:creator>
		<pubDate>Sat, 28 Mar 2026 07:51:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[Campaign.]]></category>
		<category><![CDATA[congress]]></category>
		<category><![CDATA[Davanagere by-election]]></category>
		<category><![CDATA[Pradeep Eshwar]]></category>
		<guid isPermaLink="false">https://www.justkannada.in/?p=153053</guid>

					<description><![CDATA[<p>ದಾವಣಗೆರೆ,ಮಾರ್ಚ್,28,2026 (www.justkannada.in):  ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣಾ ಕಣ ರಂಗೇರಿದ್ದು ಕಾಂಗ್ರೆಸ್ ಪ್ರಚಾರದ ವೇಳೆ ಹೈಡ್ರಾಮಾ ನಡೆದಿದೆ. ಬಿಜೆಪಿ ನಾಯಕರಿಗೆ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ದಾವಣಗೆರೆಗೆ ಪ್ರಚಾರಕ್ಕೆ ಬರುವಂತೆ ಬಿಜೆಪಿ ಹಾಕಿದ್ದ  ಸವಾಲು ಸ್ವೀಕರಿಸಿ ಬಂದಿದ್ದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ, ಪೊರಕೆ ಪ್ರದರ್ಶನವಾಗಿದೆ. ಶಾಸಕ ಪ್ರದೀಪ್ ಈಶ್ವರ್ ಅವರು ಬಿಜೆಪಿ ನಾಯಕರಾದ ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪವಿದೆ. [&#8230;]</p>
<p>The post <a href="https://www.justkannada.in/davanagere-by-election/">ಪ್ರಚಾರದ ವೇಳೆ ಹೈಡ್ರಾಮಾ: ‘ಕೈ’ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ , ಪೊರಕೆ ಪ್ರದರ್ಶನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ಮಾರ್ಚ್,28,2026 (<a href="http://www.justkannada.in">www.justkannada.in</a>):</strong>  ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣಾ ಕಣ ರಂಗೇರಿದ್ದು ಕಾಂಗ್ರೆಸ್ ಪ್ರಚಾರದ ವೇಳೆ ಹೈಡ್ರಾಮಾ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬಿಜೆಪಿ ನಾಯಕರಿಗೆ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ದಾವಣಗೆರೆಗೆ ಪ್ರಚಾರಕ್ಕೆ ಬರುವಂತೆ ಬಿಜೆಪಿ ಹಾಕಿದ್ದ  ಸವಾಲು ಸ್ವೀಕರಿಸಿ ಬಂದಿದ್ದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ, ಪೊರಕೆ ಪ್ರದರ್ಶನವಾಗಿದೆ.</p>
<p>ಶಾಸಕ ಪ್ರದೀಪ್ ಈಶ್ವರ್ ಅವರು ಬಿಜೆಪಿ ನಾಯಕರಾದ ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆಗೆ ಬರುವಂತೆ ಶಾಸಕ ಪ್ರದೀಪ್ ಈಶ್ವರ್ ಗೆ ಬಿಜೆಪಿ ಕಾರ್ಯಕರ್ತರು ಸವಾಲು  ಹಾಕಿದ್ದರು.</p>
<p>ಹೀಗಾಗಿ ಬಿಜೆಪಿ ಕಚೇರಿಯಿಂದಲೇ ಪ್ರದೀಪ್ ಈಶ್ವರ್ ಪ್ರಚಾರ ಆರಂಭಿಸಿದ್ದು ಈ ವೇಳೆ ಶಾಸಕ ಪ್ರದೀಪ್ ಈಶ್ವರ್ ಗೆ ಬಿಜೆಪಿ ಕಾರ್ಯಕರ್ತರು ಚಪ್ಪಲಿ, ಪೊರಕೆ ಪ್ರದರ್ಶಿಸಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ಪ್ರದೀಪ್ ಈಶ್ವರ್ ಕಾರಿನ ಮೇಲೆ ನಿಂತು  ಭಾವುಟ ಹಾರಿಸಿ ಭುಜ ತಟ್ಟಿದ್ದಾರೆ. ಈ ವೇಳೆ ಹುಚ್ಚ ಹುಚ್ಚ ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ .</p>
<p>Key words: Davanagere by-election, Campaign, Congress, Pradeep Eshwar, BJP</p>
<p>The post <a href="https://www.justkannada.in/davanagere-by-election/">ಪ್ರಚಾರದ ವೇಳೆ ಹೈಡ್ರಾಮಾ: ‘ಕೈ’ಶಾಸಕ ಪ್ರದೀಪ್ ಈಶ್ವರ್ ಗೆ ಚಪ್ಪಲಿ , ಪೊರಕೆ ಪ್ರದರ್ಶನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಸಿದ್ದರಾಮಯ್ಯ ಪ್ರಚಾರದಿಂದ ನಮಗೇನು ವ್ಯತ್ಯಾಸವಾಗಲ್ಲ- ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ</title>
		<link>https://www.justkannada.in/veeranna-charantimath/</link>
		
		<dc:creator><![CDATA[prashanth]]></dc:creator>
		<pubDate>Tue, 24 Mar 2026 05:42:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bjp candidate]]></category>
		<category><![CDATA[Campaign.]]></category>
		<category><![CDATA[CM Siddaramaiah]]></category>
		<category><![CDATA[Veeranna Charantimath]]></category>
		<guid isPermaLink="false">https://www.justkannada.in/?p=152842</guid>

					<description><![CDATA[<p>ಬಾಗಲಕೋಟೆ, ಮಾರ್ಚ್,24,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕೆ ಬಂದರೆ ನಮಗೇನೂ ವ್ಯತ್ಯಾಸವಾಗಲ್ಲ ಎಂದು ಬಿಜೆಪಿ ಅಭ್ಯರ್ಥೀ ವೀರಣ್ಣ ಚರಂತಿಮಠ ತಿಳಿಸಿದರು. ಇಂದು  ಪ್ರಚಾರಕಾರ್ಯ ಚುರುಕುಗೊಳಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ  ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಮೋಟಗಿ ಬವೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ  ಕೌಲಪೇಟೆ ದೊಡ್ಡಸಾಬನ ಓಣಿಯಲ್ಲಿ ಪ್ರಚಾರ ನಡೆಸಿದರು. ಸಿಎಂ ಸಿದ್ದರಾಮಯ್ಯ ನಾಲ್ಕೈದು ದಿನ ಬಾಗಲಕೋಟೆಯಲ್ಲಿರುತ್ತಾರೆ ಎಂಬ ವಿಚಾರ ಕುರಿತು ಮಾತನಾಡಿದ ವೀರಣ್ಣ ಚರಂತಿಮಠ,  ಎರಡುವರೆ ಲಕ್ಷ ಜನರ ಮತವನ್ನೇ [&#8230;]</p>
<p>The post <a href="https://www.justkannada.in/veeranna-charantimath/">ಸಿಎಂ ಸಿದ್ದರಾಮಯ್ಯ ಪ್ರಚಾರದಿಂದ ನಮಗೇನು ವ್ಯತ್ಯಾಸವಾಗಲ್ಲ- ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ, ಮಾರ್ಚ್,24,2026 (<a href="http://www.justkannada.in">www.justkannada.in</a>):</strong>  ಬಾಗಲಕೋಟೆ ಉಪಚುನಾವಣೆ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕೆ ಬಂದರೆ ನಮಗೇನೂ ವ್ಯತ್ಯಾಸವಾಗಲ್ಲ ಎಂದು ಬಿಜೆಪಿ ಅಭ್ಯರ್ಥೀ ವೀರಣ್ಣ ಚರಂತಿಮಠ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು  ಪ್ರಚಾರಕಾರ್ಯ ಚುರುಕುಗೊಳಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ  ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಮೋಟಗಿ ಬವೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿ  ಕೌಲಪೇಟೆ ದೊಡ್ಡಸಾಬನ ಓಣಿಯಲ್ಲಿ ಪ್ರಚಾರ ನಡೆಸಿದರು.</p>
<p>ಸಿಎಂ ಸಿದ್ದರಾಮಯ್ಯ ನಾಲ್ಕೈದು ದಿನ ಬಾಗಲಕೋಟೆಯಲ್ಲಿರುತ್ತಾರೆ ಎಂಬ ವಿಚಾರ ಕುರಿತು ಮಾತನಾಡಿದ ವೀರಣ್ಣ ಚರಂತಿಮಠ,  ಎರಡುವರೆ ಲಕ್ಷ ಜನರ ಮತವನ್ನೇ ಸಿಎಂ ಹಾಕ್ತಾರಾ? ಸಿಎಂ ಸಿದ್ದರಾಮಯ್ಯ ಪ್ರಚಾರದಿಂದ ನಮಗೇನು ವ್ಯತ್ಯಾಸ ಆಗಲ್ಲ.  ಯತ್ನಾಳ್ ಪ್ರಚಾರಕ್ಕೆ ಬರ್ತಾರೆ ಎಂದು ಮೊದಲೇ ಹೇಳಿದ್ದೇನೆ. ಪ್ರಚಾರಕ್ಕೆ ಬರುವುದಾಗಿ ಯತ್ನಾಳ್ ಕೂಡ ಹೇಳಿದ್ದಾರೆ.  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಹ ಪ್ರಚಾರಕ್ಕೆ ಬರುತ್ತಾರೆ ಎಂದರು.</p>
<p>Key words: CM Siddaramaiah, campaign, BJP candidate, Veeranna Charantimath</p>
<p>The post <a href="https://www.justkannada.in/veeranna-charantimath/">ಸಿಎಂ ಸಿದ್ದರಾಮಯ್ಯ ಪ್ರಚಾರದಿಂದ ನಮಗೇನು ವ್ಯತ್ಯಾಸವಾಗಲ್ಲ- ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ</title>
		<link>https://www.justkannada.in/mysore-hpv-vaccine-campaign/</link>
		
		<dc:creator><![CDATA[prashanth]]></dc:creator>
		<pubDate>Tue, 10 Mar 2026 12:13:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[14-year-old girls]]></category>
		<category><![CDATA[Campaign.]]></category>
		<category><![CDATA[HPV vaccine]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=152378</guid>

					<description><![CDATA[<p>ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ ಉಂಟಾಗುವ ಗರ್ಭಕಂಠದ ಕ್ಯಾನ್ಸರ್, ಇತರ ಕೆಲವು ಕ್ಯಾನ್ಸರ್ ಗಳಿಂದ ರಕ್ಷಿಸುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕುಮಾರಸ್ವಾಮಿ ಪಿಸಿ ಅವರು ತಿಳಿಸಿದರು. ಮೈಸೂರಿನ ಎಸ್.ಎಂ.ಟಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ 14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ನಿರೋಧಕ (ಹೆಚ್.ಪಿ.ವಿ) ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕುಮಾರಸ್ವಾಮಿ ಪಿಸಿ ಅವರು ಉದ್ಘಾಟಿಸಿ [&#8230;]</p>
<p>The post <a href="https://www.justkannada.in/mysore-hpv-vaccine-campaign/">14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಮಾರ್ಚ್,10,2026 (<a href="http://www.justkannada.in">www.justkannada.in</a>):</strong> HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ ಉಂಟಾಗುವ ಗರ್ಭಕಂಠದ ಕ್ಯಾನ್ಸರ್, ಇತರ ಕೆಲವು ಕ್ಯಾನ್ಸರ್ ಗಳಿಂದ ರಕ್ಷಿಸುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕುಮಾರಸ್ವಾಮಿ ಪಿಸಿ ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನ ಎಸ್.ಎಂ.ಟಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ 14 ವರ್ಷದ ಹೆಣ್ಣು ಮಕ್ಕಳಿಗೆ ಗರ್ಭಕಂಠ ಕ್ಯಾನ್ಸರ್ ನಿರೋಧಕ (ಹೆಚ್.ಪಿ.ವಿ) ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕುಮಾರಸ್ವಾಮಿ ಪಿಸಿ ಅವರು ಉದ್ಘಾಟಿಸಿ ಮಾತನಾಡಿದರು.</p>
<p>HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಎಂಬ ವೈರಸ್ ನಿಂದ ಉಂಟಾಗುವ ಕೆಲವು ಗಂಭೀರ ಕಾಯಿಲೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಈ ಕಾಯಿಲೆಗಳಲ್ಲಿ ಗರ್ಭಕಂಠದ ಕ್ಯಾನ್ಸರ್ ಗುದ ಮತ್ತು ಗಂಟಲು ಕ್ಯಾನ್ಸರ್ ಎಂಬ ವಿವಿಧ ಭಾಗದ ಕ್ಯಾನ್ಸರ್ ಗಳಿದ್ದು ಹೆಚ್.ಪಿವಿ.ಲಸಿಕೆಯಿಂದ ತಡೆಗಟ್ಟಬಹುದಾಗಿದೆ. ಇದರಿಂದ ನಮ್ಮ ಹೆಣ್ಣುಮಕ್ಕಳ ಆರೋಗ್ಯ ಈ ನಾಡಿನ ಸುಭದ್ರತೆ ಭವಿಷ್ಯದ ಬುನಾದಿಯಾಗಿದೆ ಎಂದರು.</p>
<p>ಪ್ರಸ್ತುತ ಸದರಿ ಲಸಿಕೆಯನ್ನು14 ವರ್ಷ ತುಂಬಿದ ಹಾಗೂ 15 ವರ್ಷ ವಯಸ್ಸಿನ ಒಳಗಿನ ಹೆಣ್ಣು ಮಕ್ಕಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸಾರ ನೀಡಲಾಗುವುದು ಹಾಗೂ ಸದರಿ ಲಸಿಕಾಕರಣವನ್ನು ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ ಮಾರ್ಗಸೂಚಿ ಅನುಸಾರ ಆಯೋಜನೆ ಮಾಡಲಾಗುತ್ತಿದೆ. ಸದರಿ ಲಸಿಕೆಯ ಪ್ರಮುಖ ಫಲಾನುಭವಿಗಳು 14 ವರ್ಷದ ಎಲ್ಲಾ ಹೆಣ್ಣು ಮಕ್ಕಳಾಗಿದ್ದು,  HPV ಲಸಿಕಾಕರಣವನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ತಜ್ಞ ವೈದ್ಯರ ಮೂಲಕ ಲಸಿಕೆಯನ್ನು ನೀಡಲಾಗುವುದು ಎಂದರು.</p>
<p>ಲಸಿಕೆ ಪಡೆದ ಮ್ಕಕಳಿಗೆ ಯೂ-ವಿನ್ ತಂತ್ರಾಂಶದಲ್ಲಿ ನೋಂದಣಿ ಮಾಡಿ ಆ ಮೂಲಕ ಲಸಿಕೆ ಪಡೆದ ಫಲಾನುಭವಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಗತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಫಲಾನುಭವಿಗಳು ಆಗತ್ಯವಾದ ಸೂಕ್ತ ಗುರುತಿನ ಚೀಟಿಯೊಂದಿಗೆ ಮೊಬೈಲ್ ನಂ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿರುತ್ತದೆ.  ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು HPV ಲಸಿಕೆಯು ಸುರಕ್ಷಿತ ಮತ್ತು ಪರಿಣಾಮಕಾರಿ ಲಸಿಕೆಯಾಗಿದೆ. ಈ ಲಸಿಕೆಯನ್ನು ಪಡೆಯುವ ಮೂಲಕ ಹೆಣ್ಣು ಮಕ್ಕಳ  ಸದೃಢ ಆರೋಗ್ಯವನ್ನು ರಕ್ಷಿಸುವ ನಿಟ್ಟಿನಲ್ಲಿ ಎಲ್ಲಾ ಪೋಷಕರು ಸಹಕರಿಸಿ ಎಂದು ಮನವಿ ಮಾಡಿದರು.</p>
<p>ಹೆಣ್ಣು ಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸುವುದರೊಂದಿಗೆ ಸುರಕ್ಷಿತ ಲಸಿಕೆ, ಸುಂದರ ಭವಿಷ್ಯ- ನಮ್ಮ ಹೆಣ್ಣು ಮಕ್ಕಳ ಆರೋಗ್ಯ ನಮ್ಮ ಆದ್ಯತೆ ಎಂಬ ಘೋಷ ವಾಕ್ಯದೊಂದಿಗೆ 14 ವರ್ಷದ ಎಲ್ಲಾ ಹೆಣ್ಣು ಮಕ್ಕಳಿಗೆ HPV ಲಸಿಕೆಯನ್ನು ಹಾಕಿಸುವುದರ ಮೂಲಕ ಗರ್ಭಕಂಠದ ಕ್ಯಾನ್ಸರ್ ಮುಕ್ತ ಸಮಾಜ-ಪ್ರತಿಯೊಬ್ಬ ಅರ್ಹ ಎಲ್ಲಾ ಹೆಣ್ಣು ಮಗುವಿಗೆ ತಲುಪುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಾರ್ಯಪ್ರವೃತವಾಗಿದ್ದು, ಜಿಲ್ಲಾ ಆಡಳಿತದ ಪರವಾಗಿ ಲಸಿಕೆ ಪಡೆಯುವಂತೆ ಮನವಿ ಮಾಡುತ್ತೇನೆ ಎಂದರು.</p>
<p>ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಮಹಮ್ಮದ್ ಸಿರಾಜ್ ಅಹಮ್ಮದ್, ಮೈಸೂರು ತಾಲ್ಲೂಕು ಆರೋಗ್ಯಾಧಿಕಾರಿ(ಪ್ರ), ಡಾ. ಅರುಣಕುಮಾರ, ಆಡಳಿತ ವೈದ್ಯಾಧಿಕಾರಿ ಡಾ. ಅನುರಾಧ,   ಹಾಗೂ ಎಸ್.ಎಂ.ಟಿ ಆಸ್ಪತ್ರೆ ತಜ್ಞ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು  ಉಪಸ್ಥಿತರಿದ್ದರು.</p>
<p>Key words: Mysore, HPV vaccine, campaign, 14-year-old girls</p>
<p>The post <a href="https://www.justkannada.in/mysore-hpv-vaccine-campaign/">14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
