<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Chennai-Mysore-Chennai &#039;Vande Bharat&#039; &#039;14 minutes miracle&#039; for cleanliness! Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/chennai-mysore-chennai-vande-bharat-14-minutes-miracle-for-cleanliness/feed/" rel="self" type="application/rss+xml" />
	<link>https://www.justkannada.in/tag/chennai-mysore-chennai-vande-bharat-14-minutes-miracle-for-cleanliness/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 01 Oct 2023 09:42:35 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Chennai-Mysore-Chennai &#039;Vande Bharat&#039; &#039;14 minutes miracle&#039; for cleanliness! Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/chennai-mysore-chennai-vande-bharat-14-minutes-miracle-for-cleanliness/</link>
	<width>32</width>
	<height>32</height>
</image> 
	<item>
		<title>ಚೆನ್ನೈ-ಮೈಸೂರು-ಚೆನ್ನೈ ‘ವಂದೇ ಭಾರತ್’ ಸ್ವಚ್ಛತೆಗೆ ‘14 ನಿಮಿಷಗಳ ಪವಾಡ’ !</title>
		<link>https://www.justkannada.in/chennai-mysore-chennai-vande-bharat-14-minutes-miracle-for-cleanliness/</link>
		
		<dc:creator><![CDATA[thinkbigh]]></dc:creator>
		<pubDate>Sun, 01 Oct 2023 09:39:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Chennai-Mysore-Chennai 'Vande Bharat' '14 minutes miracle' for cleanliness!]]></category>
		<guid isPermaLink="false">https://www.justkannada.in/?p=113266</guid>

					<description><![CDATA[<p>ಮೈಸೂರು, ಅಕ್ಟೋಬರ್ 01, 2023 (www.justkannada.in): ರೈಲ್ವೆ ಸಚಿವಾಲಯದ ನಿರ್ದೇಶನದಂತೆ, ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಚೆನ್ನೈ-ಮೈಸೂರು &#8211; ಚೆನ್ನೈ ವಂದೇ ಭಾರತ್ ರೈಲಿಗೆ &#8217;14 ನಿಮಿಷಗಳ ಪವಾಡ&#8217; &#8211; ಶುಚಿಗೊಳಿಸುವ ಹೊಸ ಪ್ರಕ್ರಿಯೆಯನ್ನು ಪರಿಚಯಿಸುತ್ತಿದೆ. ನೈಋತ್ಯ ರೈಲ್ವೆಯ ಮೈಸೂರು ವಿಭಾಗವು &#8220;14 ನಿಮಿಷಗಳ ಪವಾಡ&#8221; ಎಂದು ಕರೆಯಲ್ಪಡುವ ಒಂದು ಅದ್ಭುತ ಉಪಕ್ರಮವನ್ನು ಅನಾವರಣಗೊಳಿಸುತ್ತಿದೆ. ಚೆನ್ನೈ-ಮೈಸೂರು-ಚೆನ್ನೈನ 16 ಕೋಚುಗಳ ‘ವಂದೇ ಭಾರತ್’ ರೈಲಿನ ಸ್ವಚ್ಛತೆಗೆ ಈ ವಿನೂತನ ಶುಚಿಗೊಳಿಸಲು ನಡೆಸಲಾಗುವ ಪ್ರಕ್ರಿಯೆಯು ರೈಲಿನ ಸ್ವಚ್ಛತೆ ಮತ್ತು ದಕ್ಷತೆಯಲ್ಲಿಒಂದು ನವೀನ [&#8230;]</p>
<p>The post <a href="https://www.justkannada.in/chennai-mysore-chennai-vande-bharat-14-minutes-miracle-for-cleanliness/">ಚೆನ್ನೈ-ಮೈಸೂರು-ಚೆನ್ನೈ ‘ವಂದೇ ಭಾರತ್’ ಸ್ವಚ್ಛತೆಗೆ ‘14 ನಿಮಿಷಗಳ ಪವಾಡ’ !</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಅಕ್ಟೋಬರ್ 01, 2023 (www.justkannada.in): </strong>ರೈಲ್ವೆ ಸಚಿವಾಲಯದ ನಿರ್ದೇಶನದಂತೆ, ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಚೆನ್ನೈ-ಮೈಸೂರು &#8211; ಚೆನ್ನೈ ವಂದೇ ಭಾರತ್ ರೈಲಿಗೆ &#8217;14 ನಿಮಿಷಗಳ ಪವಾಡ&#8217; &#8211; ಶುಚಿಗೊಳಿಸುವ ಹೊಸ ಪ್ರಕ್ರಿಯೆಯನ್ನು ಪರಿಚಯಿಸುತ್ತಿದೆ.</p>
<p>ನೈಋತ್ಯ ರೈಲ್ವೆಯ ಮೈಸೂರು ವಿಭಾಗವು &#8220;14 ನಿಮಿಷಗಳ ಪವಾಡ&#8221; ಎಂದು ಕರೆಯಲ್ಪಡುವ ಒಂದು ಅದ್ಭುತ ಉಪಕ್ರಮವನ್ನು ಅನಾವರಣಗೊಳಿಸುತ್ತಿದೆ. ಚೆನ್ನೈ-ಮೈಸೂರು-ಚೆನ್ನೈನ 16 ಕೋಚುಗಳ ‘ವಂದೇ ಭಾರತ್’ ರೈಲಿನ ಸ್ವಚ್ಛತೆಗೆ ಈ ವಿನೂತನ ಶುಚಿಗೊಳಿಸಲು ನಡೆಸಲಾಗುವ ಪ್ರಕ್ರಿಯೆಯು ರೈಲಿನ ಸ್ವಚ್ಛತೆ ಮತ್ತು ದಕ್ಷತೆಯಲ್ಲಿಒಂದು ನವೀನ ಮಾದರಿ ಬದಲಾವಣೆಯ ಭರವಸೆ ನೀಡುತ್ತದೆ.</p>
<p>&#8220;14 ನಿಮಿಷಗಳ ಪವಾಡ&#8221; ಕಾರ್ಯಕ್ರಮವನ್ನು ವಂದೇ ಭಾರತ್ ರೈಲುಗಳು ವಿವಿಧ ಗಮ್ಯ ಸ್ಥಾನಗಳಿಗೆ ಆಗಮಿಸಿದ ನಂತರ ಅವುಗಳನ್ನು ಶುಚಿಗೊಳಿಸುವ ಪ್ರಕ್ರಿಯೆ ಸುಗಮಗೊಳಿಸಲು ನಿಖರವಾಗಿ ವಿನ್ಯಾಸಗೊಳಿಸಲಾಗಿದೆ. ಭಾರತೀಯ ರೈಲ್ವೆ ಅಭಿವೃದ್ಧಿಪಡಿಸಿರುವ ಈ ವಿಧಾನದಿಂದ ಕೇವಲ 14 ನಿಮಿಷಗಳಲ್ಲಿ ಸಂಪೂರ್ಣವಾಗಿ ಸಮಗ್ರವಾಗಿ ಶುಚಿಗೊಳಿಸುವಿಕೆಯನ್ನು ಸಾಧಿಸಲಾಗುತ್ತದೆ. ಇದು ರೈಲಿನ ಹಿಂತಿರುಗುವಿಕೆಯ ಸಮಯವನ್ನು ಗಣನೀಯವಾಗಿ ಇಳಿಸುತ್ತದೆ ಮತ್ತು ಪ್ರಯಾಣಿಕರ ಆಹ್ಲಾದಕರ ಅನುಭವವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ.</p>
<p><strong>‘14 ನಿಮಿಷಗಳ ಪವಾಡ’ದ ಹೈಲೈಟ್ಸ್ !</strong></p>
<p>&#8211; ಒಟ್ಟು ಸ್ವಚ್ಛಗೊಳಿಸುವ ಸಿಬ್ಬಂದಿ ನಿಯೋಜನೆ: 48 ಸಿಬ್ಬಂದಿ ಮತ್ತು 3 ಮೇಲ್ವಿಚಾರಕರು.</p>
<p>&#8211; ಪ್ರತಿಯೊಂದು ಬೋಗಿಗೂ ತರಬೇತಿ ಪಡೆದ 3 ಸಿಬ್ಬಂದಿ ಸದಸ್ಯರನ್ನು ನಿಯೋಜಿಸಲಾಗುತ್ತದೆ</p>
<p>&#8211; ಮೊದಲನೆ ಸಿಬ್ಬಂದಿ ಕಸವನ್ನು ಸಂಗ್ರಹಿಸುತ್ತಾರೆ, ಒಣ ಒರಸುವಿಕೆಯನ್ನು ನಿರ್ವಹಿಸುತ್ತಾರೆ ಮತ್ತು ಹೊರಗಿನ ಕಿಟಕಿ ಗಾಜನ್ನು ಸ್ವಚ್ಛಗೊಳಿಸುತ್ತಾರೆ.</p>
<p>&#8211; ಎರಡನೆಯ ಸಿಬ್ಬಂದಿ ಉಪಹಾರ ಮೇಜು ಮತ್ತು ಆಸನಗಳನ್ನು ಶುಚಿಗೊಳಿಸುತ್ತಾರೆ ಮತ್ತು ನೀರಿನಿಂದ ಒರೆಸುತ್ತಾರೆ.</p>
<p>&#8211; ಮೂರನೆಯ ಸಿಬ್ಬಂದಿ ಕಸದಬುಟ್ಟಿಗಳನ್ನು ಶೌಚಾಲಯಗಳನ್ನು ಕನ್ನಡಿಗಳನ್ನು ದ್ವಾರದ ಪ್ರದೇಶಗಳನ್ನು ಸ್ವಚ್ಛಗೊಳಿಸುತ್ತಾರೆ ಮತ್ತು ಈ ಪ್ರದೇಶಗಳನ್ನು ಸೂಕ್ಷ್ಮವಾಗಿ ಒರೆಸುತ್ತಾರೆ.</p>
<p><strong>ಶ್ರಮದಾನ ಕಾರ್ಯಕ್ರಮ</strong></p>
<p>ಇಂದು ಮೈಸೂರು ರೈಲು ನಿಲ್ದಾಣದಲ್ಲಿ &#8220;ಏಕ್ ತಾರೀಖ್ ಏಕ್ ಘಂಟಾ ಏಕ್ ಸಾಥ್&#8221; ಎಂಬ ಶೀರ್ಷಿಕೆಯಡಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.</p>
<p>ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್ವಾಲ್ ಇತರ ಹಿರಿಯ ಅಧಿಕಾರಿಗಳು, ವಿಭಾಗದ ಸಿಬ್ಬಂದಿ ಮತ್ತು ‘ಬ್ರಹ್ಮಕುಮಾರಿ’ ಮತ್ತು ಇತರ ಸಂಸ್ಥೆಗಳ ಸ್ವಯಂಸೇವಕರ ಜೊತೆ ಈ ಶ್ರಮದಾನ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದರು.</p>
<p>ಈ ಕಾರ್ಯಕ್ರಮವು ಮೈಸೂರು ವಿಭಾಗದಲ್ಲಿ ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 02 ರವರೆಗೆ ಆಯೋಜಿಸಲಾಗಿರುವ ಹದಿನೈದು ದಿನಗಳ ವಿಶೇಷ ಸ್ವಚ್ಛತಾ ಅಭಿಯಾನದ ಭಾಗವಾಗಿತ್ತು. ರೈಲ್ವೆ ನಿಲ್ದಾಣಗಳು, ರೈಲುಗಳು, ಕಚೇರಿಗಳು, ಕಾಲೋನಿಗಳು, ಡಿಪೋಗಳು, ಆಸ್ಪತ್ರೆಗಳು, ಇತ್ಯಾದಿ ಸೇರಿದಂತೆ ಎಲ್ಲಾ ಆವರಣಗಳಲ್ಲಿ ಸ್ವಚ್ಛತೆಯಲ್ಲಿ ಗಮನೀಯವಾದ ಮತ್ತು ಸ್ಪಷ್ಟವಾದ ಸುಧಾರಣೆಗಳನ್ನು ತರುವ ಉದ್ದೇಶದಿಂದ ಸ್ವಚ್ಛತಾ ಪಾಕ್ಷಿಕವನ್ನು ಆಯೋಜಿಸಲಾಗಿದೆ.</p>
<p>ಹದಿನೈದು ದಿನಗಳ ಅಭಿಯಾನದ ಉದ್ದಕ್ಕೂ ಹಳಿಗಳು, ನಿಲ್ದಾಣದ ಆವರಣಗಳು ಇತ್ಯಾದಿಗಳನ್ನು ಸ್ವಚ್ಛಗೊಳಿಸಲು ಮತ್ತು ಇದರಲ್ಲಿ ವಿವಿಧ ಇಲಾಖೆಗಳಾದ್ಯಂತ ಗರಿಷ್ಟ ಪ್ರದೇಶಗಳನ್ನು ಶುಚಿಗೊಳಿಸುವ ಯೋಜನೆಯನ್ನು ವ್ಯವಸ್ಥಿತ ವಾಗಿ ಮತ್ತು ವಿವರವಾಗಿ ತಯಾರಿಸಲು ವಿಶೇಷ ಗಮನ ನೀಡಲಾಗುತ್ತದೆ.</p>
<p>The post <a href="https://www.justkannada.in/chennai-mysore-chennai-vande-bharat-14-minutes-miracle-for-cleanliness/">ಚೆನ್ನೈ-ಮೈಸೂರು-ಚೆನ್ನೈ ‘ವಂದೇ ಭಾರತ್’ ಸ್ವಚ್ಛತೆಗೆ ‘14 ನಿಮಿಷಗಳ ಪವಾಡ’ !</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
