<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>chief minister -silent -about Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/chief-minister-silent-about/feed/" rel="self" type="application/rss+xml" />
	<link>https://www.justkannada.in/tag/chief-minister-silent-about/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 30 May 2023 11:02:33 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>chief minister -silent -about Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/chief-minister-silent-about/</link>
	<width>32</width>
	<height>32</height>
</image> 
	<item>
		<title>ನನಗೂ ಫ್ರೀ, ನಿನಗೂ ಫ್ರೀ  ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ?  ಮಾಜಿ ಸಿಎಂ ಹೆಚ್.ಡಿಕೆ ಚಾಟಿ..</title>
		<link>https://www.justkannada.in/chief-minister-silent-about-guarantees-former-cm-hdk/</link>
		
		<dc:creator><![CDATA[JK Desk]]></dc:creator>
		<pubDate>Tue, 30 May 2023 11:02:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[chief minister -silent -about]]></category>
		<category><![CDATA[Former CM]]></category>
		<category><![CDATA[guarantees]]></category>
		<category><![CDATA[HDK]]></category>
		<guid isPermaLink="false">https://www.justkannada.in/?p=107881</guid>

					<description><![CDATA[<p>ಬೆಂಗಳೂರು,ಮೇ,30,2023(www.justkannada.in):  5 ಗ್ಯಾರಂಟಿ ಯೋಜನೆಗಳ ಜಾರಿಗೆ ಕಾಂಗ್ರೆಸ್ ಸರ್ಕಾರ ವಿಳಂಬ ಧೋರಣೆ ತಾಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಟೀಕಿಸಿದ್ದಾರೆ. ಈ ಕುರಿತು  ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿಕೆ, ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ &#8216;ಗ್ಯಾರಂಟಿ ಬೇಡಿಕೆ&#8217;ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ಕಾಂಗ್ರೆಸ್ ಸರಕಾರದ ಜವಾಬ್ದಾರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ [&#8230;]</p>
<p>The post <a href="https://www.justkannada.in/chief-minister-silent-about-guarantees-former-cm-hdk/">ನನಗೂ ಫ್ರೀ, ನಿನಗೂ ಫ್ರೀ  ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ?  ಮಾಜಿ ಸಿಎಂ ಹೆಚ್.ಡಿಕೆ ಚಾಟಿ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,30,2023(<a href="http://www.justkannada.in">www.justkannada.in</a>):</strong>  5 ಗ್ಯಾರಂಟಿ ಯೋಜನೆಗಳ ಜಾರಿಗೆ ಕಾಂಗ್ರೆಸ್ ಸರ್ಕಾರ ವಿಳಂಬ ಧೋರಣೆ ತಾಳುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಟೀಕಿಸಿದ್ದಾರೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು  ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿಕೆ, ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ &#8216;ಗ್ಯಾರಂಟಿ ಬೇಡಿಕೆ&#8217;ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ಕಾಂಗ್ರೆಸ್ ಸರಕಾರದ ಜವಾಬ್ದಾರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.</p>
<p>ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆಯೂ ಮೇರೆ ಮೀರುತ್ತದೆ, ಆಕ್ರೋಶವೂ ಹೆಚ್ಚುತ್ತಿದೆ. ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ.  ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ. ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಾಮೇಷ ಎಂದರೆ ಜನ ಒಪ್ಪುವರೇ?  ಎಂದು ಹೆಚ್.ಡಿಕೆ ಚಾಟಿ ಬೀಸಿದ್ದಾರೆ.</p>
<p>ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ ಎಂದು ಸಲಹೆ ನೀಡಿದ್ದಾರೆ.</p>
<p>ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ &#8216;ಗ್ಯಾರಂಟಿ ಜಾಹೀರಾತು&#8217;ಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ; ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ.<img decoding="async" class="aligncenter size-full wp-image-105635" src="https://www.justkannada.in/wp-content/uploads/2023/04/hdk.jpg" alt="" width="500" height="285" srcset="https://www.justkannada.in/wp-content/uploads/2023/04/hdk.jpg 500w, https://www.justkannada.in/wp-content/uploads/2023/04/hdk-300x171.jpg 300w" sizes="(max-width: 500px) 100vw, 500px" /></p>
<p>ಅದು ಬಿಟ್ಟು &#8216;ಕೆಲ ಸಚಿವರು, ಶಾಸಕ&#8217;ರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂಥ ರಾಜಕಾರಣ ಉಪಯೋಗವೂ ಇಲ್ಲ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ  ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ ಎಂದು ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಸರ್ಕಾರವನ್ನ ಕುಟುಕಿದ್ದಾರೆ.</p>
<p>Key words: chief minister -silent -about &#8211; guarantees &#8211; Former CM -HDK</p>
<p>The post <a href="https://www.justkannada.in/chief-minister-silent-about-guarantees-former-cm-hdk/">ನನಗೂ ಫ್ರೀ, ನಿನಗೂ ಫ್ರೀ  ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ?  ಮಾಜಿ ಸಿಎಂ ಹೆಚ್.ಡಿಕೆ ಚಾಟಿ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
