<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>CM Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/cm/feed/" rel="self" type="application/rss+xml" />
	<link>https://www.justkannada.in/tag/cm/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 04 Aug 2026 08:40:26 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>CM Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/cm/</link>
	<width>32</width>
	<height>32</height>
</image> 
	<item>
		<title>ಯಾರಾದ್ರೂ ರಾಜೀನಾಮೆ ಕೊಟ್ರೆ ಕೆಲ ನಿಮಿಷದಲ್ಲಿ ಅಂಗೀಕಾರ- ಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/s-cm-dk-shivakumar/</link>
		
		<dc:creator><![CDATA[prashanth]]></dc:creator>
		<pubDate>Tue, 04 Aug 2026 08:40:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[accepted]]></category>
		<category><![CDATA[cabinet- expansion]]></category>
		<category><![CDATA[CM]]></category>
		<category><![CDATA[DK Shivakumar]]></category>
		<category><![CDATA[few minutes]]></category>
		<category><![CDATA[resigns]]></category>
		<category><![CDATA[within]]></category>
		<guid isPermaLink="false">https://www.justkannada.in/?p=158186</guid>

					<description><![CDATA[<p>ಬೆಂಗಳೂರು ಆಗಸ್ಟ್,4,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಸಚಿವ ಸ್ಥಾನ ಕೈತಪ್ಪಿ ಅಸಮಾಧಾನಗೊಂಡಿರುವ ಹಾಗೂ ರಾಜೀನಾಮೆ ನೀಡುವುದಾಗಿ ಹೇಳಿರುವ ಶಾಸಕರಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಡಿಕೆ ಶಿವಕುಮಾರ್,  ಯಾರಾದರೂ  ರಾಜೀನಾಮೆ ಕೊಟ್ಟರೇ ಕೆಲ ನಿಮಿಷದಲ್ಲಿ ಅಂಗೀಕಾರ ಮಾಡುತ್ತೇವೆ. ಪಕ್ಷದ ಶಿಸ್ತು ಮೀರಿ ರಾಜೀನಾಮೆ ನಾಟಕವಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ನೀಡಲು ಬಂದರೆ ಕ್ಷಣಮಾತ್ರದಲ್ಲೇ [&#8230;]</p>
<p>The post <a href="https://www.justkannada.in/s-cm-dk-shivakumar/">ಯಾರಾದ್ರೂ ರಾಜೀನಾಮೆ ಕೊಟ್ರೆ ಕೆಲ ನಿಮಿಷದಲ್ಲಿ ಅಂಗೀಕಾರ- ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಆಗಸ್ಟ್,4,2026 (<a href="http://www.justkannada.in">www.justkannada.in</a>): </strong> ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಸಚಿವ ಸ್ಥಾನ ಕೈತಪ್ಪಿ ಅಸಮಾಧಾನಗೊಂಡಿರುವ ಹಾಗೂ ರಾಜೀನಾಮೆ ನೀಡುವುದಾಗಿ ಹೇಳಿರುವ ಶಾಸಕರಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಸಿಎಂ ಡಿಕೆ ಶಿವಕುಮಾರ್,  ಯಾರಾದರೂ  ರಾಜೀನಾಮೆ ಕೊಟ್ಟರೇ ಕೆಲ ನಿಮಿಷದಲ್ಲಿ ಅಂಗೀಕಾರ ಮಾಡುತ್ತೇವೆ. ಪಕ್ಷದ ಶಿಸ್ತು ಮೀರಿ ರಾಜೀನಾಮೆ ನಾಟಕವಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ನೀಡಲು ಬಂದರೆ ಕ್ಷಣಮಾತ್ರದಲ್ಲೇ ಅವರ ರಾಜೀನಾಮೆಯನ್ನು ಅಂಗೀಕರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಕಾಂಗ್ರೆಸ್ ದೊಡ್ಡ ಪಕ್ಷವಾಗಿದ್ದು, ಎಲ್ಲರಿಗೂ ಒಂದೇ ಬಾರಿಗೆ ಅವಕಾಶ ನೀಡಲು ಸಾಧ್ಯವಿಲ್ಲ. ಹಿರಿಯರು ಹಾಗೂ ಆಕಾಂಕ್ಷಿಗಳು ತಾಳ್ಮೆಯಿಂದಿರಬೇಕು. ಪಕ್ಷದ ನಿಯಮ ಮತ್ತು ಶಿಸ್ತನ್ನು ಮೀರಿ ನಡೆದರೇ ಸಹಿಸಲ್ಲ ಸರ್ಕಾರ ಅಥವಾ ಪಕ್ಷಕ್ಕೆ ರಾಜೀನಾಮೆ ಬೆದರಿಕೆ ಹಾಕುವ ಮೂಲಕ ಒತ್ತಡ ಹೇರಲು ಯತ್ನಿಸುವವರ ತಂತ್ರಗಳಿಗೆ ಹೈಕಮಾಂಡ್ ಅಥವಾ ಸರ್ಕಾರ ಮಣಿಯುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Cabinet expansion, resigns, accepted, within, few minutes, CM, DK Shivakumar</p>
<p>The post <a href="https://www.justkannada.in/s-cm-dk-shivakumar/">ಯಾರಾದ್ರೂ ರಾಜೀನಾಮೆ ಕೊಟ್ರೆ ಕೆಲ ನಿಮಿಷದಲ್ಲಿ ಅಂಗೀಕಾರ- ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು- ಸಿಎಂ ಡಿ.ಕೆ ಶಿವಕುಮಾರ್</title>
		<link>https://www.justkannada.in/cm-dk-shivakumar-33/</link>
		
		<dc:creator><![CDATA[prashanth]]></dc:creator>
		<pubDate>Sat, 01 Aug 2026 10:35:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[DK Shivakumar]]></category>
		<category><![CDATA[filling up]]></category>
		<category><![CDATA[Kabini]]></category>
		<category><![CDATA[release]]></category>
		<category><![CDATA[Reservoir]]></category>
		<category><![CDATA[water]]></category>
		<guid isPermaLink="false">https://www.justkannada.in/?p=158076</guid>

					<description><![CDATA[<p>ಮೈಸೂರು, ಆ.1,2026 (www.justkannada.in): “ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಅಣೆಕಟ್ಟು ತುಂಬಿದಾಗ ನೀರು ಹರಿಸಲೇಬೇಕಾಗುತ್ತದೆ. ಅದನ್ನು ಹಿಡಿದಿಡಲು ಸಾಧ್ಯವಿಲ್ಲ. ನೀರು ಬಿಡಬಾರದು ಎಂದು ಹೋರಾಟ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆಶಿವಕುಮಾರ್,  “ಕಬಿನಿ ಜಲಾಶಯದ ನೀರಿನ ಸಂಗ್ರಹಣೆ ಬಗ್ಗೆ ಅಧಿಕಾರಿಗಳು ಪ್ರತಿ ಗಂಟೆಯೂ ಮಾಹಿತಿ ನೀಡುತ್ತಿದ್ದಾರೆ. ಒಳಹರಿವು 40 ಸಾವಿರ ಕ್ಯೂಸೆಕ್ಸ್ ಮುಟ್ಟಿದೆ. ಪ್ರಕೃತಿ ಯಾರ [&#8230;]</p>
<p>The post <a href="https://www.justkannada.in/cm-dk-shivakumar-33/">ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು- ಸಿಎಂ ಡಿ.ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಆ.1,2026 (<a href="http://www.justkannada.in">www.justkannada.in</a>):</strong> “ಕಬಿನಿ ಜಲಾಶಯ ಭರ್ತಿಯಾಗುತ್ತಿದೆ. ಅಣೆಕಟ್ಟು ತುಂಬಿದಾಗ ನೀರು ಹರಿಸಲೇಬೇಕಾಗುತ್ತದೆ. ಅದನ್ನು ಹಿಡಿದಿಡಲು ಸಾಧ್ಯವಿಲ್ಲ. ನೀರು ಬಿಡಬಾರದು ಎಂದು ಹೋರಾಟ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆಶಿವಕುಮಾರ್,  “ಕಬಿನಿ ಜಲಾಶಯದ ನೀರಿನ ಸಂಗ್ರಹಣೆ ಬಗ್ಗೆ ಅಧಿಕಾರಿಗಳು ಪ್ರತಿ ಗಂಟೆಯೂ ಮಾಹಿತಿ ನೀಡುತ್ತಿದ್ದಾರೆ. ಒಳಹರಿವು 40 ಸಾವಿರ ಕ್ಯೂಸೆಕ್ಸ್ ಮುಟ್ಟಿದೆ. ಪ್ರಕೃತಿ ಯಾರ ಸ್ವತ್ತೂ ಅಲ್ಲ. ಪ್ರಕೃತಿಯ ಅಣತಿಯಂತೆ ನಾವು ಬದುಕುತ್ತಿದ್ದೇವೆ. ನಾವು ನೀರು ಬಿಡುಗಡೆ ಮಾಡಲ್ಲ ಎಂದು ತೀರ್ಮಾನ ಮಾಡಿದರೂ, ಜಲಾಶಯ ತುಂಬಿದಾಗ ನೀರನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ. ಹೋರಾಟಗಾರರು ನೀರು ಬಿಡುವ ಕಡೆ ಹೋಗಬಾರದು. ನೀರಿನ ರಭಸಕ್ಕೆ ನೀವು ಕೊಚ್ಚಿ ಹೋಗಬಹುದು.‌ ಯಾರೂ ನೀರಿಗೆ ಅಡ್ಡ ಮಲಗಲು ಹೋಗಬೇಡಿ” ಎಂದು ಮನವಿ ಮಾಡಿದರು.</p>
<p>&#8220;ನಮ್ಮ ಸ್ನೇಹಿತರು ತಮಿಳುನಾಡಿಗೆ ನೀರು ಹರಿಸಬಾರದಾಗಿ ಹೋರಾಟ, ಬಂದ್ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಒಂದು ಹೋರಾಟಕ್ಕೆ ಹಿನ್ನೆಲೆ ಇರಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಹೋರಾಟಕ್ಕೂ ಗೌರವವಿದೆ. ಆದರೆ ಈಗ ಪ್ರತಿಭಟನೆ ಬೇಡ. ಕಾನೂನು ಚೌಕಟ್ಟಿಗೆ ಏನೂ ತೊಂದರೆಯಾಗಬಾರದು, ಜನಜೀವನಕ್ಕೆ ತೊಂದರೆಯಾಗಬಾರದು. ಈ ರಾಜ್ಯದಲ್ಲಿ ಎಲ್ಲಾ ಜನರು ಬದುಕುತ್ತಿದ್ದಾರೆ. ಎಲ್ಲರನ್ನೂ ಸಂತೋಷದಿಂದ ಸ್ವೀಕಾರ ಮಾಡಿದ್ದೇವೆ. ತಮಿಳುನಾಡು ಸೇರಿದಂತೆ ನಾವೆಲ್ಲರೂ ಒಂದೇ ದೇಶದ ಪ್ರಜೆಗಳು&#8221; ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>&#8220;ಬಂಗಾರಪ್ಪ, ಎಸ್ ಎಂ ಕೃಷ್ಣ, ಸಿದ್ದರಾಮಯ್ಯ, ದೇವೇಗೌಡರ ಕಾಲದಲ್ಲೂ ಸಂಕಷ್ಟ ಎದುರಾದಾಗ ಅಂದಿನ ಸಂದರ್ಭಕ್ಕೆ ತಕ್ಕಂತೆ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ನಾವು ಮಾಡಿದ್ದು ಸರಿ, ಅವರುಗಳು ಮಾಡಿದ್ದು ತಪ್ಪು ಎಂದು ನಾವು ಹೇಳುವುದಿಲ್ಲ‌. ತಮಿಳುನಾಡಿಗೆ 177 ಟಿಎಂಸಿ ನೀರನ್ನು ಹರಿಸಬೇಕು ಎಂದು ಆದೇಶವಿದೆ. ಇದಕ್ಕೆ ಸುಪ್ರೀಂಕೋರ್ಟ್ ಕೂಡ ಬಲ ನೀಡಿದೆ. ನಾವು ನ್ಯಾಯಾಲಯದ ಆದೇಶಕ್ಕೆ ಗೌರವ ನೀಡಬೇಕು. ಜೊತೆಗೆ ನಮ್ಮ ರೈತರನ್ನೂ ಕಾಪಾಡಬೇಕು. ನಮ್ಮ ರೈತರ ಹಿತವನ್ನು ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ‌. ಈ ಆದೇಶ ಎರಡೂ ರಾಜ್ಯಕ್ಕೆ ವರ&#8221; ಎಂದು ಅಭಿಪ್ರಾಯಪಟ್ಟರು.<img loading="lazy" decoding="async" class="aligncenter size-full wp-image-158069" src="https://www.justkannada.in/wp-content/uploads/2026/08/dks-chamundi-hilss.jpg" alt="" width="500" height="206" srcset="https://www.justkannada.in/wp-content/uploads/2026/08/dks-chamundi-hilss.jpg 500w, https://www.justkannada.in/wp-content/uploads/2026/08/dks-chamundi-hilss-300x124.jpg 300w, https://www.justkannada.in/wp-content/uploads/2026/08/dks-chamundi-hilss-150x62.jpg 150w" sizes="auto, (max-width: 500px) 100vw, 500px" /></p>
<p>&#8220;ಎರಡೂ ರಾಜ್ಯಗಳನ್ನೂ ಕಾಪಾಡುವ ತೀರ್ಪನ್ನು ಈ ಹಿಂದೆ ನೀಡಲಾಗಿದೆ. ಮಾಧ್ಯಮವೊಂದರಲ್ಲಿ ಸಮತೋಲಿತ ಅಣೆಕಟ್ಟು ನಿರ್ಮಾಣ ಮಾಡುವುದರಿಂದ ಏನೆಲ್ಲಾ ಅನುಕೂಲವಾಗಲಿದೆ ಎಂದು ಚೆನ್ನಾಗಿ ವಿಶ್ಲೇಷಣೆ ಮಾಡಲಾಗಿದೆ. ಕಾವೇರಿ ನೀರಿನ ವಿಚಾರವಾಗಿ ದೆಹಲಿಯಲ್ಲಿ ಪ್ರಹ್ಲಾದ್ ಜೋಶಿ ಅವರು, ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ಅನೇಕರು ಅವರ ಕೈಲಾದ ಪ್ರಯತ್ನ ಮಾಡಿದ್ದಾರೆ.  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದವರಿಗೂ ಯಾವ್ಯಾವ ಜಲಾಶಯಗಳಲ್ಲಿ ಎಷ್ಟೆಷ್ಟು ನೀರಿದೆ ಎನ್ನುವ ಮಾಹಿತಿ ಕೂಡ ಇದೆ. ಬೇರೆ ಸಂದರ್ಭಗಳಿಗೆ ಹೋಲಿಸಿದರೆ ಅರ್ಧ ನೀರನ್ನೂ ಬಿಡುಗಡೆ ಮಾಡಿಲ್ಲ ಎಂದು ನಮ್ಮ ಮನವಿ ತಿರಸ್ಕರಿಸಿದ್ದಾರೆ&#8221; ಎಂದು ಹೇಳಿದರು.</p>
<p><strong>ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ</strong></p>
<p>&#8220;ಬಿಜೆಪಿಯವರ ಕಾವೇರಿ ವಿಚಾರವಾಗಿ ರಾಜಕೀಯ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಅವರ ಹೇಳಿಕೆಯನ್ನೂ ಸಹ ನಾನು ಗಮನಿಸಿದ್ದೇನೆ. ತಮಿಳುನಾಡಿನ ಸಂಸದರು, ವಿವಿಧ ಪಕ್ಷಗಳ ನಾಯಕರು ಅವರ ರಾಜಕೀಯ ಅಸ್ತಿತ್ವಕ್ಕೆ ಹೋರಾಟ ಮಾಡುತ್ತಿದ್ದಾರೆ. ಅವರಿಗೂ ಎಲ್ಲಾ ಅರಿವಿದೆ. ಈ ಹಿಂದೆ ನಿಮ್ಮ ಸುಪರ್ಧಿಯಲ್ಲಿ ಅಣೆಕಟ್ಟು ಕಟ್ಟಿಕೊಳ್ಳಬಹುದು ಎಂದು ಹೇಳಿದ್ದರು. ಇದಕ್ಕೆ ದಾಖಲೆಗಳೂ ಸಹ ಇವೆ” ಎಂದರು.</p>
<p><strong>ಮೇಕೆದಾಟು ವಿಚಾರ ಸುಪ್ರೀಂನಲ್ಲಿ ಜಯ</strong></p>
<p>&#8220;ಮೇಕೆದಾಟು ವಿಚಾರದಲ್ಲಿ ನಮಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ದ ಜಯ ಸಿಕ್ಕಿದೆ. ಸಂಸತ್ ನಲ್ಲಿಯೂ ಸಹ ಅವರ ಜಾಗದಲ್ಲಿ ಅಣೆಕಟ್ಟು ಕಟ್ಟಿಕೊಳ್ಳಲು ಕಾನೂನು ಏನು ಹೇಳುತ್ತದೆ ಎಂದು ತುಂಬಾ ಚೆನ್ನಾಗಿ ಉತ್ತರ ನೀಡಲಾಗಿದೆ&#8221; ಎಂದರು.</p>
<p>&#8220;ತುಂಗಭದ್ರಾ ವಿಚಾರದಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರ ನೇತೃತ್ವದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಸಭೆ ನಡೆಸಿ ಸಮತೋಲಿತ ಅಣೆಕಟ್ಟು ನಿರ್ಮಾಣ ಮಾಡಲು ತೀರ್ಮಾನ ಮಾಡಲಾಗಿದೆ. ಅವರು ಸಹ ಸಮಿತಿ ರಚನೆ ಮಾಡುವುದಾಗಿ ತಿಳಿಸಿದ್ದಾರೆ. ನಾನು ಮುಖ್ಯಮಂತ್ರಿ ಆದ ಮೇಲೆ ನಡೆದ ಐತಿಹಾಸಿಕ ತೀರ್ಮಾನ. ಐತಿಹಾಸಿಕ ಹೆಜ್ಜೆ&#8221; ಎಂದರು.</p>
<p>&#8220;ತಮಿಳುನಾಡು ಸಿಎಂ ಆಗಸ್ಟ್ 3 ರಂದು ರಾಜ್ಯಕ್ಕೆ ಭೇಟಿ ನೀಡುವುದಾಗಿ ಹೇಳಿದ್ದರು. ಆದರೆ ಇಲ್ಲಿ ಪರಿಸ್ಥಿತಿ ಸರಿಯಿಲ್ಲ. ಏಕೆಂದರೆ ಯಾವುದೇ ಮಾತುಕತೆಗಳು ಶಾಂತಿ, ಸೌಹಾರ್ದಯುತವಾಗಿ ನಡೆಯಬೇಕು. ನಮ್ಮ ಪರಿಸ್ಥಿತಿ, ಅವರ ಪರಿಸ್ಥಿತಿ ಇಬ್ಬರಿಗೂ ಅರಿವಿದೆ. ಸಮಸ್ಯೆ ಮಾತುಕಥೆಯಲ್ಲಿ ಬಗೆಹರಿಯುವುದಾದರೆ ಬಗೆಹರಿಯಲಿ. ಅವರ ಹಕ್ಕನ್ನು ಅವರು ಪಡೆಯಲಿ. ನಾವು ಅದಕ್ಕೆ ಎಂದಿಗೂ ಅಡ್ಡಿ ಮಾಡುವುದಿಲ್ಲ. ನ್ಯಾಯಾಲಯ ನೀಡಿದ ನಮ್ಮ ಹಕ್ಕನ್ನು ನಾವು ಪಡೆಯೋಣ. ಇದಕ್ಕೆ ಎಲ್ಲರೂ ಸಹಕಾರ ನೀಡುತ್ತಾರೆ ಎಂದು ಭಾವಿಸೋಣ. ವಿಜಯ್ ಅವರ ಭೇಟಿಗೆ ಎಲ್ಲಾ ಪರಿಸ್ಥಿತಿ ತಿಳಿಯಾದ ನಂತರ ದಿನಾಂಕ ನಿಗದಿ ಮಾಡಲಾಗುವುದು&#8221; ಎಂದರು.</p>
<p>ತಮಿಳುನಾಡಿಗೆ ನೀರು ಹರಿಸಲಾಗುವುದೇ ಎಂದು ಕೇಳಿದಾಗ, &#8220;ಸರ್ವಪಕ್ಷ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳು, ನಾಯಕರು, ಕಾನೂನು ತಜ್ಞರ ಮಾತನ್ನು ಆಲಿಸಲಾಗುವುದು. ಒಂದು ಕಡೆ ಯಡಿಯೂರಪ್ಪ ಅವರು, ವಿಜಯೇಂದ್ರ ಅವರು ನಗುತ್ತಿದ್ದಾರೆ. ಇನ್ನೊಂದು ಕಡೆ ಸಂಸದರು, ಮಂತ್ರಿಗಳು ಕರ್ನಾಟಕಕ್ಕೆ ಸಂಸತ್ತಿನಲ್ಲಿ ಸಹಾಯ ಮಾಡುತ್ತಿದ್ದಾರೆ&#8221; ಎಂದರು.</p>
<p>ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆಗಿದ್ದು ಒಳ್ಳೆಯದು ಎಂಬುದೇ ನಿಮ್ಮ ಅಭಿಪ್ರಾಯ ಎಂದು ಕೇಳಿದಾಗ, &#8220;ಕಳೆದ ವರ್ಷ ಎಷ್ಟು ನೀರು ಬಿಡಲಾಗಿತ್ತು, ಈ ವರ್ಷ ಎಷ್ಟು ನೀರು ಬಿಡಲಾಗಿದೆ ಎಂದು ಮಾಧ್ಯಮಗಳೇ ಗಮನಿಸಿ ತೀರ್ಮಾನ ಮಾಡಿ. ಬೋರ್ಡ್ ಇಲ್ಲದೇ ಇದ್ದಾಗ 16. ಟಿಎಂಸಿ ನೀರು ಬಿಡಬೇಕು ಎಂದೆಲ್ಲಾ ತೀರ್ಮಾನ ಮಾಡಲಾಗಿದೆ ಎನ್ನುವ ದಾಖಲೆಗಳಿವೆ. ಪ್ರಸ್ತುತ ತಮಿಳುನಾಡು 9 ಸಾವಿರ ಕ್ಯೂಸೆಕ್ಸ್ ಗೆ ಬೇಡಿಕೆ ಇಟ್ಟಿತ್ತು. ಆದರೆ 3,500 ಕ್ಯೂಸೆಕ್ ನೀರು ಹರಿಸಲು ಆದೇಶ ನೀಡಿದ್ದಾರೆ” ಎಂದು ತಿಳಿಸಿದರು.</p>
<p>ಕಬಿನಿಗೆ ಬಾಗಿನ ಅರ್ಪಿಸುವಿರಾ ಎಂದು ಕೇಳಿದಾಗ, &#8220;ಈಗ ಬೇಡ ತಡೆಯಿರಿ. ಏನೂ ಇಲ್ಲದೇ ಈಗಾಗಲೇ ನಮ್ಮ ವಿರುದ್ಧ ದಾಳಿ ಮಾಡುತ್ತಿದ್ದಾರೆ” ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>&#8220;ಶುಭಮುಹೂರ್ತ, ಶುಭ ಘಳಿಗೆಯಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಆದ ಮೇಲೆ ಮೈಸೂರಿಗೆ ಬಂದಿದ್ದೇನೆ. ಚಾಮುಂಡಿ ತಾಯಿಗೆ ನಮಿಸಲಿದ್ದೇನೆ. ಮೈಸೂರಿನ ನೆಲದಿಂದ ಸ್ವಾಮಿ ವಿವೇಕಾನಂದ ಅವರು ಅಂದು ದೊಡ್ಡ ಸಂದೇಶ ನೀಡಿದ್ದಾರೆ. ಅಂದಿನ ಕಾಲದಲ್ಲೇ ನಮ್ಮ ಮೈಸೂರು ಮಹಾರಾಜರು ಶೈಕ್ಷಣಿಕ, ಸಾಂಸ್ಕೃತಿಕ ಕೊಡುಗೆಯನ್ನು ಈ ರಾಜ್ಯಕ್ಕೆ ನೀಡಿದ್ದಾರೆ. ಅವರು ರಾಜ್ಯದ ಅಭಿವೃದ್ಧಿಗೆ ನೀಡಿದ ಉತ್ತೇಜನ ಯಾರೂ ಸಹ ಮರೆಯಲು ಸಾಧ್ಯವಿಲ್ಲ. ಇತಿಹಾಸ ಮರೆತವನು, ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಬಾಬಾ ಸಾಹೇಬರು ಹೇಳಿದ್ದಾರೆ&#8221; ಎಂದರು.</p>
<p>Key words: Kabini, reservoir, filling up, water, Release, CM, DK Shivakumar</p>
<p>The post <a href="https://www.justkannada.in/cm-dk-shivakumar-33/">ಕಬಿನಿ ತುಂಬುತ್ತಿದೆ, ಜಲಾಶಯ ತುಂಬಿದಾಗ ನೀರನ್ನು ಹರಿಸಲೇಬೇಕು- ಸಿಎಂ ಡಿ.ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರ್ಕಾರ, ಸೊಸೈಟಿಗಳಿಂದ ಪಡೆದ ನಿವೇಶನದಲ್ಲಿ ಐದು ವರ್ಷದೊಳಗೆ ಮನೆ ಕಟ್ಟದಿದ್ರೆ ವಾಪಸ್ ಪಡೆಯುತ್ತೇವೆ- ಸಿಎಂ ಡಿ.ಕೆ ಶಿವಕುಮಾರ್</title>
		<link>https://www.justkannada.in/cm-d-k-shivakumar-18/</link>
		
		<dc:creator><![CDATA[prashanth]]></dc:creator>
		<pubDate>Sat, 01 Aug 2026 10:04:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM]]></category>
		<category><![CDATA[D K Shivakumar]]></category>
		<category><![CDATA[government]]></category>
		<category><![CDATA[houses]]></category>
		<category><![CDATA[land]]></category>
		<category><![CDATA[Societies]]></category>
		<guid isPermaLink="false">https://www.justkannada.in/?p=158072</guid>

					<description><![CDATA[<p>ಬೆಂಗಳೂರು, ಆಗಸ್ಟ್,1,2026 (www.justkannada.in): “ಬಿಡಿಎ ಆಗಲಿ, ಕಾರ್ಪೊರೇಷನ್ ನಿವೇಶನವಾಗಲಿ ಅದರ ಮಾಲೀಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೀಗಾಗಿ ನಿವೇಶನ ಪಡೆದ 5 ವರ್ಷದೊಳಗೆ ಅಲ್ಲಿ ಮನೆ ನಿರ್ಮಾಣ ಮಾಡಬೇಕು. ಕಟ್ಟದಿದ್ದರೆ, ಅದಕ್ಕೆ ದುಪ್ಪಟ್ಟು ತೆರಿಗೆ ಅಥವಾ ನಿವೇಶನ ಹಿಂಪಡೆಯಲಾಗುವುದು. ಮನೆ ಕಟ್ಟದೇ ಖಾಲಿ ಇಟ್ಟುಕೊಂಡರೆ ಅಲ್ಲಿ ಕಸದ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಈ ತೀರ್ಮಾನ ಮಾಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಹೆಬ್ಬಾಳ ಜಂಕ್ಷನ್‌ ಬಳಿ &#8220;ತ್ಯಾಜ್ಯದಿಂದ ಸ್ವಾತಂತ್ರ್ಯ&#8221; ಅಭಿಯಾನಕ್ಕೆ ಚಾಲನೆ ನೀಡಿ ಸಿಎಂ [&#8230;]</p>
<p>The post <a href="https://www.justkannada.in/cm-d-k-shivakumar-18/">ಸರ್ಕಾರ, ಸೊಸೈಟಿಗಳಿಂದ ಪಡೆದ ನಿವೇಶನದಲ್ಲಿ ಐದು ವರ್ಷದೊಳಗೆ ಮನೆ ಕಟ್ಟದಿದ್ರೆ ವಾಪಸ್ ಪಡೆಯುತ್ತೇವೆ- ಸಿಎಂ ಡಿ.ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಆಗಸ್ಟ್,1,2026 (<a href="http://www.justkannada.in">www.justkannada.in</a>):</strong> “ಬಿಡಿಎ ಆಗಲಿ, ಕಾರ್ಪೊರೇಷನ್ ನಿವೇಶನವಾಗಲಿ ಅದರ ಮಾಲೀಕರು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಹೀಗಾಗಿ ನಿವೇಶನ ಪಡೆದ 5 ವರ್ಷದೊಳಗೆ ಅಲ್ಲಿ ಮನೆ ನಿರ್ಮಾಣ ಮಾಡಬೇಕು. ಕಟ್ಟದಿದ್ದರೆ, ಅದಕ್ಕೆ ದುಪ್ಪಟ್ಟು ತೆರಿಗೆ ಅಥವಾ ನಿವೇಶನ ಹಿಂಪಡೆಯಲಾಗುವುದು. ಮನೆ ಕಟ್ಟದೇ ಖಾಲಿ ಇಟ್ಟುಕೊಂಡರೆ ಅಲ್ಲಿ ಕಸದ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಈ ತೀರ್ಮಾನ ಮಾಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೆಬ್ಬಾಳ ಜಂಕ್ಷನ್‌ ಬಳಿ &#8220;ತ್ಯಾಜ್ಯದಿಂದ ಸ್ವಾತಂತ್ರ್ಯ&#8221; ಅಭಿಯಾನಕ್ಕೆ ಚಾಲನೆ ನೀಡಿ ಸಿಎಂ ಡಿಕೆ ಶಿವಕುಮಾರ್‌ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.</p>
<p>ಮನೆ ಕಟ್ಟದಿದ್ದರೆ ನಿವೇಶನ ವಾಪಸ್ ತೆಗೆದುಕೊಳ್ಳುತ್ತೀರಾ ಎಂದು ಕೇಳಿದಾಗ, “ಬೇರೆ ವಿಧಿಯಿಲ್ಲ, ನಾವು ಇದನ್ನು ಮಾಡಲೇಬೇಕಾಗುತ್ತದೆ. ನಾವು ನಿವೇಶನ ನೀಡುವುದು ಮನೆ ಕಟ್ಟಿಕೊಳ್ಳಲು. ಕೆಲವರು 20, 30, 40 ವರ್ಷವಾದರೂ ಮನೆ ಕಟ್ಟಿಲ್ಲ. ಅವರು ಕಟ್ಟಿರುವ ಹಣವನ್ನು ಬಡ್ಡಿ ಸಮೇತ ವಾಪಸ್ ನೀಡಿ ನಿವೇಶನ ಹಿಂಪಡೆಯಲಾಗುವುದು. ಸಿಐಟಿಬಿ, ಬಿಡಿಎ, ಸೊಸೈಟಿಗಳಿಂದ ನಿವೇಶನ ಪಡೆದ ಮೇಲೆ ಮನೆ ಕಟ್ಟಬೇಕಾಗಿರುವುದು ಅವರ ಕರ್ತವ್ಯ. ನಿವೇಶನಕ್ಕೆ ಕಾಪೌಂಡ್ ಕೂಡ ಹಾಕದೇ, ಕಸ ಹಾಕಲು ಅವಕಾಶ ಕೊಟ್ಟರೆ ಹೇಗೆ? ಅವರ ಜಾಗದಲ್ಲಿ ಅವರು ಕಸ ಹಾಕದೇ ಇದ್ದರೂ, ಅವರ ಜಾಗವನ್ನು ಅವರು ರಕ್ಷಣೆ ಮಾಡಿಕೊಳ್ಳಬೇಕು” ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>“ಮಹಾತ್ಮಾ ಗಾಂಧೀಜಿ ಅವರು ಸ್ವಚ್ಛತೆಯೇ ದೇವರು ಎಂದು ನಮಗೆ ಮಾರ್ಗದರ್ಶನ ನೀಡಿದ್ದಾರೆ. ರಾಜೀವ್ ಗಾಂಧಿ ಅವರು ನಿಮ್ಮ ಮನೆ ಮುಂದೆ ಸ್ನಚ್ಛತೆ ಕಾಪಾಡಿದರೆ, ಬೀದಿ ಸ್ವಚ್ಛವಾಗುತ್ತದೆ. ಬೀದಿ ಸ್ವಚ್ಛವಾದರೆ ಊರು ಸ್ವಚ್ಛವಾಗುತ್ತದೆ, ಊರು ಸ್ವಚ್ಛವಾದರೆ ನಾಡು ಸ್ವಚ್ಛವಾಗುತ್ತದೆ ಎಂದು ಹೇಳಿದ್ದಾರೆ. ಬೆಂಗಳೂರಿನ ಸ್ವಚ್ಛತೆ ನಮ್ಮ ಕರ್ತವ್ಯ. ನಿಮ್ಮ ಬೆಂಗಳೂರನ್ನು ಕಾಪಾಡಿಕೊಳ್ಳುವುದು ನಿಮ್ಮ ಕರ್ತವ್ಯ” ಎಂದರು.</p>
<p><strong>ಎಲ್ಲೆಂದರಲ್ಲಿ ಕಸ ಸುರಿಯುವ ವಾಹನ ಮುಲಾಜಿಲ್ಲದೆ ಮುಟ್ಟುಗೋಲು ಹಾಕಿಕೊಳ್ಳಿ</strong></p>
<p>“ಬೆಂಗಳೂರು ಸರ್ಕಾರದ ಆಸ್ತಿಯಲ್ಲ, ಬೆಂಗಳೂರು ನಿಮ್ಮ ಆಸ್ತಿ. ಇದನ್ನು ಕಾಪಾಡಲು ಅಭಿಯಾನ ಆರಂಭಿಸಿದ್ದೇವೆ. ಘನತ್ಯಾಜ್ಯವನ್ನು ಎಲ್ಲೆಂದರಲ್ಲಿ ಕಸ ಸುರಿಯುವ ವಾಹನಗಳಿಗೆ ನೋಟೀಸ್ ಕೊಡಲಾಗಿತ್ತು. ಕ್ಯಾಮೆರಾ ಕಣ್ಗಾವಲು ಇಡಲಾಗಿತ್ತು. ಈಗ ಮತ್ತೆ ಯಥಾಸ್ಥಿತಿಯಲ್ಲಿ ಕಸ ಸುರಿಯುತ್ತಿದ್ದಾರೆ. ಅನುಮತಿ ಇಲ್ಲದೇ ಕಸ ಸುರಿಯುವವರ ವಾಹನವನ್ನು ಮುಲಾಜಿಲ್ಲದೇ ಮುಟ್ಟುಗೋಲು ಹಾಕಿಕೊಳ್ಳಿ ಎಂದು ನಾನು ಪೊಲೀಸರಿಗೆ ನಿರ್ದೇಶನ ನೀಡುತ್ತಿದ್ದೇನೆ. ಜನರಲ್ಲಿ ನಾವು ನಾಗರಿಕ ಪ್ರಜ್ಞೆ ತರಬೇಕಾಗಿದೆ” ಎಂದು ಅಭಿಪ್ರಾಯಪಟ್ಟರು.</p>
<p>“ಹಸಿರಿನ ವಿಚಾರವಾಗಿ ನನ್ನಲ್ಲಿ ವಿಭಿನ್ನ ಆಲೋಚನೆ ಇದೆ. ಅದನ್ನು ಈಗ ನಾನು ಪ್ರಸ್ತಾಪ ಮಾಡುವುದಿಲ್ಲ, 100 ದಿನಗಳ ಕಾರ್ಯಕ್ರಮದ ವೇಳೆ ಪ್ರಕಟ ಮಾಡುತ್ತೇವೆ. ಬೆಂಗಳೂರು ಸ್ವಚ್ಛತೆ ಬಗ್ಗೆ ಟೀಕೆ ಟಿಪ್ಪಣಿ ಬರುತ್ತಿವೆ. ನಾವು ಮಾಡುವ ಕೆಲಸ ಶಾಶ್ವತವಾಗಿ ಉಳಿಯುತ್ತದೆ, ಟೀಕೆಗಳು ಸಾಯುತ್ತವೆ. ಶಿವಾಜಿನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ದಾಳಿ ಮಾಡಲಾಗಿದೆ. ಯಾರಾದರೂ ಇದನ್ನು ಅಧಿಕಾರಿಗಳ ಮೇಲೆ ದಾಳಿ ಎಂದು ಭಾವಿಸಿದ್ದರೆ ಅದು ಭ್ರಮೆ. ಇದು ಸರ್ಕಾರ, ಸಚಿವರು ಹಾಗೂ ಶಾಸಕರ ಮೇಲಿನ ದಾಳಿ ಎಂದೇ ಭಾವಿಸುತ್ತೇವೆ. ನಾವು ಎಲ್ಲಾ ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ಪಡೆದು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ” ಎಂದು ಹೇಳಿದರು.<img loading="lazy" decoding="async" class="aligncenter size-full wp-image-158073" src="https://www.justkannada.in/wp-content/uploads/2026/08/dk-shivakumar.jpg" alt="" width="500" height="750" srcset="https://www.justkannada.in/wp-content/uploads/2026/08/dk-shivakumar.jpg 500w, https://www.justkannada.in/wp-content/uploads/2026/08/dk-shivakumar-200x300.jpg 200w, https://www.justkannada.in/wp-content/uploads/2026/08/dk-shivakumar-280x420.jpg 280w, https://www.justkannada.in/wp-content/uploads/2026/08/dk-shivakumar-150x225.jpg 150w, https://www.justkannada.in/wp-content/uploads/2026/08/dk-shivakumar-300x450.jpg 300w" sizes="auto, (max-width: 500px) 100vw, 500px" /></p>
<p>“ಬೀದಿವ್ಯಾಪಾರದವರಿಗೆ ಬೇರೆ ಜಾಗಗಳಲ್ಲಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲಾಗುವುದು. ಬೀದಿ ವ್ಯಾಪಾರಿಗಳು ಪಾದಚಾರಿಗಳು ಹಾಗೂ ವಾಹನ ಸಂಚಾರಕ್ಕೆ ತೊಂದರೆ ಮಾಡಲು ಸಾಧ್ಯವಿಲ್ಲ. ಇಂದಿನಿಂದ ಆರಂಭವಾಗುತ್ತಿರುವ ಈ ಅಭಿಯಾನ ಬೆಂಗಳೂರಿಗೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾದರಿ ಕಾರ್ಯಕ್ರಮವಾಗಿದೆ. ಎಲ್ಲಾ ಶಾಸಕರು ತಮ್ಮ ಕ್ಷೇತ್ರದಲ್ಲಿ ಈ ಅಭಿಯಾನ ಕೈಗೆತ್ತಿಕೊಳ್ಳಬೇಕು. ಇದು ನಿಮ್ಮ ಬೆಂಗಳೂರು, ಇಡೀ ದೇಶ ನಿಮ್ಮನ್ನು ಗಮನಿಸುತ್ತಿದೆ. ಅನೇಕ ರಾಷ್ಟ್ರೀಯ ನಾಯಕರು ಅನೇಕ ಮಾರ್ಗದರ್ಶನ ನೀಡಿದ್ದು, ಅದನ್ನು ಮುಂದುವರಿಸಿಕೊಂಡು ಹೋಗೋಣ” ಎಂದರು.</p>
<p><strong>ಎನ್  ಜಿಒ, ಸಂಘ ಸಂಸ್ಥೆಗಳು ನಾಲ್ಕೈದು ರಸ್ತೆ ಜವಾಬ್ದಾರಿ ಪಡೆದು ಸ್ವಚ್ಛತೆ ಕಾಪಾಡಬಹುದು</strong></p>
<p>“ದೇಶದ ಎಲ್ಲಾ ನಗರಗಳಲ್ಲೂ ಈ ಕಸ ಹಾಕುವ ಸಮಸ್ಯೆ ಇದೆ. ಬೆಂಗಳೂರಿನಲ್ಲಿ ಕಸದ ವಿಚಾರವಾಗಿ ಕಾರ್ಯಕ್ರಮ ಮಾಡಿ ಅನೇಕ ವರ್ಷಗಳಾಗಿವೆ. ಮುಂದಿನ ದಿನಗಳಲ್ಲಿ ಇದಕ್ಕೆ ಹೊಸ ರೂಪ ನೀಡುತ್ತಿದ್ದೇವೆ. ಎನ್ ಜಿಒಗಳು, ಸಂಘ ಸಂಸ್ಥೆಗಳು ಒಂದೊಂದು ಪ್ರದೇಶದ ಜವಾಬ್ದಾರಿ ಹೊತ್ತುಕೊಂಡರೆ ನಾನು ಸ್ವಾಗತಿಸುತ್ತೇನೆ. ನಾಲ್ಕು ರಸ್ತೆ ಜವಾಬ್ದಾರಿ ತೆಗೆದುಕೊಂಡು ಬಂದರೆ ಸಾಕು. ಈ ಅಭಿಯಾನಕ್ಕೆ ನಾಗರಿಕರ ಸಹಕಾರ ಬೇಕು” ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p><strong>ಕಾವೇರಿಯ ಒಂದು ಅಣೆಕಟ್ಟು ತುಂಬುತ್ತಿದ್ದು, ನೀರು ಹಿಡಿದಿಡಲು ಸಾಧ್ಯವಿಲ್ಲ</strong></p>
<p>ಕಾವೇರಿ ವಿಚಾರವಾಗಿ ಬಿಜೆಪಿ ನಾಯಕರ ಟೀಕೆ, ಆರೋಪದ ಬಗ್ಗೆ ಕೇಳಿದಾಗ, “ಬಿಜೆಪಿ ನಾಯಕರು ಆರೋಪ ಮಾಡುತ್ತಾರೆ. ನಾವು ಇನ್ನೂ ನೀರು ಹರಿಸಿಲ್ಲ, ಅವರೇ ಸರ್ವಪಕ್ಷ ಸಭೆ ಕರೆಯುವ ಸಲಹೆ ನೀಡಿದ್ದಾರೆ. ಆದರೆ ಇಂದು ಸಂಜೆ ವೇಳೆಗೆ ಒಂದು ಅಣೆಕಟ್ಟು ಭರ್ತಿಯಾಗಲಿದೆ. ಆ ಅಣೆಕಟ್ಟು ತುಂಬಿದ ಬಳಿಕವೂ ನೀರನ್ನು ಹಿಡಿದಿಡಲು ಆಗುವುದಿಲ್ಲ. ಅತ್ತ ತಮಿಳುನಾಡಿನವರು ಸುಪ್ರೀಂ ಕೋರ್ಟಿಗೆ ಹೋಗಲು ಸಿದ್ಥತೆ ಮಾಡಿಕೊಳ್ಳಲಾಗುತ್ತಿದೆ ಎಂದು ಎಂದು ಈಗಾಗಲೇ ಹೇಳಿಕೆಗಳು ಬಂದಿವೆ. 36-39 ಕ್ಯೂಸೆಕ್ ನೀರು ಒಳಹರಿವು ಇದ್ದು, ನಮಗೆ ನೀರು ಹರಿಸಲು ಹೇಳಿರುವುದು 3,500 ಕ್ಯೂಸೆಕ್ ನೀರು. ವಿರೋಧ ಪಕ್ಷದವರು ಹಾಗೂ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ ನಾವು ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.</p>
<p>Key words:  houses, land, government, societies, CM, D.K. Shivakumar</p>
<p>The post <a href="https://www.justkannada.in/cm-d-k-shivakumar-18/">ಸರ್ಕಾರ, ಸೊಸೈಟಿಗಳಿಂದ ಪಡೆದ ನಿವೇಶನದಲ್ಲಿ ಐದು ವರ್ಷದೊಳಗೆ ಮನೆ ಕಟ್ಟದಿದ್ರೆ ವಾಪಸ್ ಪಡೆಯುತ್ತೇವೆ- ಸಿಎಂ ಡಿ.ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/cm-dk-shivakumar-chamundi-hills/</link>
		
		<dc:creator><![CDATA[prashanth]]></dc:creator>
		<pubDate>Sat, 01 Aug 2026 09:36:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamundi Hills]]></category>
		<category><![CDATA[CM]]></category>
		<category><![CDATA[DK Shivakumar]]></category>
		<category><![CDATA[visited]]></category>
		<guid isPermaLink="false">https://www.justkannada.in/?p=158068</guid>

					<description><![CDATA[<p>ಮೈಸೂರು,ಆಗಸ್ಟ್,1,2026 (www.justkannada.in):  ಸಿಎಂ ಆದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿರುವ ಡಿ.ಕೆ ಶಿವಕುಮಾರ್ ಅವರು ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದರು. ಇದಕ್ಕೂ ಮುನ್ನ ಡಿ.ಕೆ. ಶಿವಕುಮಾರ್  ಭರ್ಜರಿ ರೋಡ್‌ಶೋ ನಡೆಸಿದರು. ಕಾರಂಜಿ ಕೆರೆಯಿಂದ ಆರಂಭಗೊಂಡ ಈ ಬೃಹತ್ ರೋಡ್‌ಶೋ ಕುರುಬರಹಳ್ಳಿ ಸರ್ಕಲ್‌ವರೆಗೂ ವಿಸ್ತರಿಸಿತ್ತು. ನಂತರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ಸಿಎಂ ಡಿಕೆ ಶಿವಕುಮಾರ್ ಅವರಿಗೆ  ಸಂಸದ ಸುನೀಲ್ ಬೋಸ್, ಶಾಸಕರಾದ ತನ್ವೀರ್ [&#8230;]</p>
<p>The post <a href="https://www.justkannada.in/cm-dk-shivakumar-chamundi-hills/">ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,1,2026 (<a href="http://www.justkannada.in">www.justkannada.in</a>): </strong> ಸಿಎಂ ಆದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿರುವ ಡಿ.ಕೆ ಶಿವಕುಮಾರ್ ಅವರು ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇದಕ್ಕೂ ಮುನ್ನ ಡಿ.ಕೆ. ಶಿವಕುಮಾರ್  ಭರ್ಜರಿ ರೋಡ್‌ಶೋ ನಡೆಸಿದರು. ಕಾರಂಜಿ ಕೆರೆಯಿಂದ ಆರಂಭಗೊಂಡ ಈ ಬೃಹತ್ ರೋಡ್‌ಶೋ ಕುರುಬರಹಳ್ಳಿ ಸರ್ಕಲ್‌ವರೆಗೂ ವಿಸ್ತರಿಸಿತ್ತು. ನಂತರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.<img loading="lazy" decoding="async" class="aligncenter size-full wp-image-158070" src="https://www.justkannada.in/wp-content/uploads/2026/08/dks-chamundi-hilss.jpg1_.jpg" alt="" width="500" height="281" srcset="https://www.justkannada.in/wp-content/uploads/2026/08/dks-chamundi-hilss.jpg1_.jpg 500w, https://www.justkannada.in/wp-content/uploads/2026/08/dks-chamundi-hilss.jpg1_-300x169.jpg 300w, https://www.justkannada.in/wp-content/uploads/2026/08/dks-chamundi-hilss.jpg1_-150x84.jpg 150w" sizes="auto, (max-width: 500px) 100vw, 500px" /></p>
<p>ಸಿಎಂ ಡಿಕೆ ಶಿವಕುಮಾರ್ ಅವರಿಗೆ  ಸಂಸದ ಸುನೀಲ್ ಬೋಸ್, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಅನಿಲ್ ಚಿಕ್ಕಮದು, ರವಿಶಂಕರ್ ಸಾಥ್  ನೀಡಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: CM, DK Shivakumar,  visited, Chamundi Hills</p>
<p>The post <a href="https://www.justkannada.in/cm-dk-shivakumar-chamundi-hills/">ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾವೇರಿ ವಿಚಾರ: ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡಲ್ಲ- ಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/mysore-cm-dk-shivakumar/</link>
		
		<dc:creator><![CDATA[prashanth]]></dc:creator>
		<pubDate>Sat, 01 Aug 2026 07:46:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Cauvery dispute]]></category>
		<category><![CDATA[CM]]></category>
		<category><![CDATA[DK Shivakumar]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=158060</guid>

					<description><![CDATA[<p>ಮೈಸೂರು,ಆಗಸ್ಟ್,1,2026 (www.justkannada.in):  ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ನುಡಿದರು. ಸಿಎಂ ಆದ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಸಿಎಂ ಡಿಕೆ ಶಿವಕುಮಾರ್ ರೋಡ್ ಶೋ ನಡೆಸಿದರು. ಕಾರಂಜಿಕೆರೆಯಿಂದ ರೋಡ್ ಶೋ ಆರಂಭವಾಗಿದ್ದು ಈ ವೇಳೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ  ಅನ್ಯಾಯ ಆಗುವುದಿಲ್ಲ  ರಾಜ್ಯಕ್ಕೆ ಅನ್ಯಾಯ ಆಗಬಾರದು ಅಂತಾ ಸರ್ವಪಕ್ಷ ಸಭೆ ಕರೆದಿದ್ದೇನೆ.  [&#8230;]</p>
<p>The post <a href="https://www.justkannada.in/mysore-cm-dk-shivakumar/">ಕಾವೇರಿ ವಿಚಾರ: ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡಲ್ಲ- ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,1,2026 (<a href="http://www.justkannada.in">www.justkannada.in</a>): </strong> ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ನುಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಿಎಂ ಆದ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಸಿಎಂ ಡಿಕೆ ಶಿವಕುಮಾರ್ ರೋಡ್ ಶೋ ನಡೆಸಿದರು. ಕಾರಂಜಿಕೆರೆಯಿಂದ ರೋಡ್ ಶೋ ಆರಂಭವಾಗಿದ್ದು ಈ ವೇಳೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ  ಅನ್ಯಾಯ ಆಗುವುದಿಲ್ಲ  ರಾಜ್ಯಕ್ಕೆ ಅನ್ಯಾಯ ಆಗಬಾರದು ಅಂತಾ ಸರ್ವಪಕ್ಷ ಸಭೆ ಕರೆದಿದ್ದೇನೆ.  ಎಲ್ಲಾ ಪಕ್ಷಗಳ ಜೊತೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತೇವೆ  ಎಂದರು.<img loading="lazy" decoding="async" class="aligncenter size-full wp-image-89812" src="https://www.justkannada.in/wp-content/uploads/2022/05/krs.jpg" alt="" width="500" height="280" srcset="https://www.justkannada.in/wp-content/uploads/2022/05/krs.jpg 500w, https://www.justkannada.in/wp-content/uploads/2022/05/krs-300x168.jpg 300w" sizes="auto, (max-width: 500px) 100vw, 500px" /></p>
<p>ತಮಿಳುನಾಡು ಸಿಎಂ ವಿಜಯ್ ರಾಜ್ಯಕ್ಕೆ ಬರುವ ವಿಚಾರ, ಪರಿಸ್ಥಿತಿ ಸರಿ ಇಲ್ಲದ ಕಾರಣ ಸಿಎಂ ವಿಜಯ್ ಬರುತ್ತಿಲ್ಲ. ಶಾಂತ ವಾತಾವರಣದಲ್ಲಿ ಚರ್ಚೆಯಾದರೇ ಫಲ ಕೊಡುತ್ತದೆ. ಪರಿಸ್ಥಿತಿ ಶಾಂತವಾದ ಮೇಲೆ ಸಿಎಂ ವಿಜಯ್ ಬರುತ್ತಾರೆ ಎಂದರು. <img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Cauvery Dispute, CM, DK Shivakumar, Mysore</p>
<p>The post <a href="https://www.justkannada.in/mysore-cm-dk-shivakumar/">ಕಾವೇರಿ ವಿಚಾರ: ರಾಜ್ಯಕ್ಕೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡಲ್ಲ- ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾವೇರಿ ವಿವಾದ: ಸುಪ್ರೀಂ ಮೊರೆ ಹೋಗಲು ತಮಿಳುನಾಡು ಸಿದ್ದತೆ ನಡೆಸಿದೆ- ಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/cm-dk-shivakumar-32/</link>
		
		<dc:creator><![CDATA[prashanth]]></dc:creator>
		<pubDate>Sat, 01 Aug 2026 05:40:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Cauvery dispute]]></category>
		<category><![CDATA[CM]]></category>
		<category><![CDATA[DK Shivakumar]]></category>
		<category><![CDATA[ready]]></category>
		<category><![CDATA[Supreme Court]]></category>
		<category><![CDATA[Tamil Nadu]]></category>
		<guid isPermaLink="false">https://www.justkannada.in/?p=158052</guid>

					<description><![CDATA[<p>ಬೆಂಗಳೂರು,ಆಗಸ್ಟ್,1,2026 (www.justkannada.in):  15 ದಿನಗಳವರೆಗೆ ಪ್ರತಿದಿನ 3500 ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶಕ್ಕೆ  ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಆಗಸ್ಟ್ 13ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಮಧ್ಯೆ ಕಾವೇರಿ ನೀರು ಬಿಡದ ಹಿನ್ನೆಲೆಯಲ್ಲಿ ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಿದ್ದತೆ ನಡೆಸುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ತಮಿಳುನಾಡಿಗೆ ಇನ್ನೂ ನೀರು ಬಿಟ್ಟಿಲ್ಲ. ಡ್ಯಾಂ [&#8230;]</p>
<p>The post <a href="https://www.justkannada.in/cm-dk-shivakumar-32/">ಕಾವೇರಿ ವಿವಾದ: ಸುಪ್ರೀಂ ಮೊರೆ ಹೋಗಲು ತಮಿಳುನಾಡು ಸಿದ್ದತೆ ನಡೆಸಿದೆ- ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,1,2026 (<a href="http://www.justkannada.in">www.justkannada.in</a>):</strong>  15 ದಿನಗಳವರೆಗೆ ಪ್ರತಿದಿನ 3500 ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡಿರುವ ಆದೇಶಕ್ಕೆ  ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಆಗಸ್ಟ್ 13ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. <img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಮಧ್ಯೆ ಕಾವೇರಿ ನೀರು ಬಿಡದ ಹಿನ್ನೆಲೆಯಲ್ಲಿ ತಮಿಳುನಾಡು ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಿದ್ದತೆ ನಡೆಸುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-93069" src="https://www.justkannada.in/wp-content/uploads/2022/07/krs-1.jpg" alt="" width="500" height="370" srcset="https://www.justkannada.in/wp-content/uploads/2022/07/krs-1.jpg 500w, https://www.justkannada.in/wp-content/uploads/2022/07/krs-1-300x222.jpg 300w" sizes="auto, (max-width: 500px) 100vw, 500px" /></p>
<p>ಈ ಕುರಿತು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ತಮಿಳುನಾಡಿಗೆ ಇನ್ನೂ ನೀರು ಬಿಟ್ಟಿಲ್ಲ. ಡ್ಯಾಂ ತುಂಬುವ ಸ್ಥಿತಿಯಲ್ಲಿ ಇದೆ.  ಹೀಗಾಗಿ ನೀರು ಬಿಡಬೇಕಾಗುತ್ತೆ. ಬಿಜೆಪಿಯವರು ಆರೋಪ ಮಾಡುತ್ತಾ ಇರುತ್ತಾರೆ. ಸರ್ವಪಕ್ಷ ಸಭೆ ಕರೆಯಲು ಬಿಜೆಪಿಯವರೇ ಸಲಹೆ ಕೊಟ್ಟಿದ್ದು.  ತಮಿಳುನಾಡು ಸುಪ್ರೀಂಕೋರ್ಟ್  ಮೊರೆ ಹೋಗಲು ಸಿದ್ದತೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಮಾಹಿತಿ ಇದೆ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Cauvery dispute, Tamil Nadu, ready, Supreme Court, CM, DK Shivakumar</p>
<p>The post <a href="https://www.justkannada.in/cm-dk-shivakumar-32/">ಕಾವೇರಿ ವಿವಾದ: ಸುಪ್ರೀಂ ಮೊರೆ ಹೋಗಲು ತಮಿಳುನಾಡು ಸಿದ್ದತೆ ನಡೆಸಿದೆ- ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾವೇರಿ ನೀರಿನ ವಿಚಾರ; ಕಾನೂನು ತಜ್ಞರು, ವಿರೋಧ ಪಕ್ಷಗಳ ಸಲಹೆ ಬಳಿಕ ಮುಂದಿನ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್</title>
		<link>https://www.justkannada.in/cauvery-water-cm-d-k-shivakumar/</link>
		
		<dc:creator><![CDATA[prashanth]]></dc:creator>
		<pubDate>Fri, 31 Jul 2026 12:18:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Cauvery water]]></category>
		<category><![CDATA[CM]]></category>
		<category><![CDATA[D K Shivakumar]]></category>
		<category><![CDATA[issue]]></category>
		<guid isPermaLink="false">https://www.justkannada.in/?p=158040</guid>

					<description><![CDATA[<p>ಬೆಂಗಳೂರು, ಜುಲೈ,31,2026 (www.justkannada.in): ಕಾವೇರಿ ನೀರಿನ ವಿಚಾರವಾಗಿ ಕಾನೂನು ತಜ್ಞರ ಸಲಹೆ ಹಾಗೂ ವಿರೋಧ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ಪಡೆದ ಬಳಿಕ ಮುಂದಿನ ತೀರ್ಮಾನ ಮಾಡಲಾಗುವುದು” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿದರು. “ಕಾವೇರಿ ನೀರಿನ ವಿಚಾರದಲ್ಲಿ ನಿತ್ಯ 3500 ಕ್ಯೂಸೆಕ್ ನೀರುನ್ನು ತಮಿಳುನಾಡಿಗೆ ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿದೆ. ಈ ಹಿಂದೆ ಇಂತಹ ಸಂಕಷ್ಟ [&#8230;]</p>
<p>The post <a href="https://www.justkannada.in/cauvery-water-cm-d-k-shivakumar/">ಕಾವೇರಿ ನೀರಿನ ವಿಚಾರ; ಕಾನೂನು ತಜ್ಞರು, ವಿರೋಧ ಪಕ್ಷಗಳ ಸಲಹೆ ಬಳಿಕ ಮುಂದಿನ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ,31,2026 (<a href="http://www.justkannada.in">www.justkannada.in</a>):</strong> ಕಾವೇರಿ ನೀರಿನ ವಿಚಾರವಾಗಿ ಕಾನೂನು ತಜ್ಞರ ಸಲಹೆ ಹಾಗೂ ವಿರೋಧ ಪಕ್ಷಗಳ ನಾಯಕರನ್ನು ವಿಶ್ವಾಸಕ್ಕೆ ಪಡೆದ ಬಳಿಕ ಮುಂದಿನ ತೀರ್ಮಾನ ಮಾಡಲಾಗುವುದು” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿದರು.</p>
<p>“ಕಾವೇರಿ ನೀರಿನ ವಿಚಾರದಲ್ಲಿ ನಿತ್ಯ 3500 ಕ್ಯೂಸೆಕ್ ನೀರುನ್ನು ತಮಿಳುನಾಡಿಗೆ ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿದೆ. ಈ ಹಿಂದೆ ಇಂತಹ ಸಂಕಷ್ಟ ಕಾಲದಲ್ಲಿ ಅನೇಕ ತೀರ್ಮಾನ ಬಂದಿವೆ. 2016, 2017, 2018, 2023ರಲ್ಲಿ ಇಂತಹ ಆದೇಶ ಬಂದಿವೆ. ಕಳೆದ 3 ವರ್ಷಗಳಲ್ಲಿ ಮಳೆ ಬಹಳ ಸಂತುಷ್ಟಿಯಾಗಿ ಬಂದಿದೆ. ಕಳೆದ ವರ್ಷ ಜೂನ್ ತಿಂಗಳಲ್ಲೇ ಕೆಆರ್ ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದೆವು. ಕಳೆದ ವರ್ಷ ಉತ್ತಮ ಮಳೆ ಬೆಳೆ ಆಗಿತ್ತು. ಕಳೆದ ವರ್ಷ 177 ಟಿಎಂಸಿ ಬದಲಾಗಿ 400ಕ್ಕೂ ಹೆಚ್ಚು ಟಿಎಂಸಿ ನೀರು ಹರಿಸಲಾಗಿತ್ತು. ಅನೇಕ ಪ್ರಮಾಣದ ನೀರು ಸಮುದ್ರವನ್ನು ಸೇರಿದೆ” ಎಂದು ತಿಳಿಸಿದರು.</p>
<p>“ಬಿಳಿಗುಂಡ್ಲುವಿಗೆ 3,500 ಕ್ಯೂಸೆಕ್ ನೀರನ್ನು ಹರಿಸಲು ನೀಡಿರುವ ಆದೇಶದ ವಿರುದ್ಧ ನಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮುಂದೆ ಮೇಲ್ಮನವಿ ಸಲ್ಲಿಸಿದ್ದೆವು. ನಮ್ಮ ವಿರೋಧ ಪಕ್ಷಗಳ ಸ್ನೇಹಿತರು, ಅಧಿಕಾರಿಗಳು ಹೋಗಿಲ್ಲ ಎಂದು ಆರೋಪ ಮಾಡಿದರು. ನಾನು ಅವರಿಗೆ ಉತ್ತರ ಕೊಡುವ ಅಗತ್ಯವಿಲ್ಲ. ಆದರೆ ರಾಜ್ಯದ ಜನರಿಗೆ ಮಾಹಿತಿ ನೀಡುವುದು ನನ್ನ ಜವಾಬ್ದಾರಿಯಾಗಿದೆ.  ನಿನ್ನೆ ಸಿಡಬ್ಲ್ಯೂಎಂಎ ಮುಂದೆ ಮೇಲ್ಮನವಿ ಸಲ್ಲಿಸಿದ್ದೆವು. ಬಸವರಾಜ ಬೊಮ್ಮಾಯಿ ಅವರ ಬಳಿ ಇದ್ದ ಸಲಹೆಗಾರರನ್ನೇ ನಾವು ಮುಂದುವರಿಸಿದ್ದೇವೆ. ಅವರು ಸಭೆಯಲ್ಲಿ ಭಾಗವಹಿಸಿದ್ದರು” ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>“ನೀರು ಹರಿಸುವ ನೀರಿನ ಪ್ರಮಾಣ ಕಡಿಮೆ ಮಾಡಿ, ನೀರು ಬಿಡುವ ತೀರ್ಮಾನವನ್ನು ಮುಂದಕ್ಕೆ ಹಾಕಿ, ನಮಗೆ ಕಾಲಾವಕಾಶ ನೀಡಿ ಎಂದು ನಾವು ಮನವಿ ಮಾಡಿದ್ದೆವು. ಆದರೆ ತಮಿಳುನಾಡಿನವರು ನಿಮಗೆ ಹೆಚ್ಚಿನ ನೀರು ಬರುತ್ತಿದೆ. ನೀವು ಹೆಚ್ಚಿನ ನೀರು ಬಿಡಬೇಕು ಎಂದು ವಾದ ಮಂಡಿಸಿದರು. ನಮ್ಮ ಅಧಿಕಾರಿಗಳು ನಮಗೆ ಸಮಾಧಾನ ತರುವಂತೆ ಸಿಡಬ್ಲ್ಯೂಎಂಎ ಮುಂದೆ ವಾದ ಮಂಡಿಸಿದರು. ನಮ್ಮ ಅಡ್ವೋಕೇಟ್ ಜನರಲ್, ಎಸಿಎಸ್ ಅವರು ವಾದ ಮಂಡಿಸಿದ್ದಾರೆ. ಆದರೆ ಪ್ರಾಧಿಕಾರ, ನಿಮಗೆ ಒಳಹರಿವು ಇದ್ದು, ನಿಮಗೆ ಬಿಡಲು ಹೇಳಿರುವ ನೀರು ಕಡಿಮೆ ಪ್ರಮಾಣದ್ದಾಗಿದೆ ಎಂದು ಹೇಳಿದ್ದಾರೆ” ಎಂದರು.</p>
<p><strong>ರಾಜ್ಯದಲ್ಲಿ ಒಳಹರಿವು ಚೇತರಿಕೆ, ಸಮಾಧಾನಕರ ವಿಚಾರ</strong></p>
<p>“ಕಾವೇರಿ ಪ್ರಾಧಿಕಾರದವರಿಗೆ, ತಮಿಳುನಾಡಿನವರಿಗೆ, ಮಾಧ್ಯಮವರರು ಸೇರಿದಂತೆ ಎಲ್ಲರಿಗೂ ಪ್ರತಿ ಅಣೆಕಟ್ಟಿನ ಒಳಹರಿವಿನ ಮಾಹಿತಿ ಇದ್ದು, ಹಾರಂಗಿ ಜಲಾಶಯ 95%, ಕಬಿನಿ 83%, ಕೆಆರ್ಎಸ್ 36%, ಹೇಮಾವತಿಯಲ್ಲಿ 67% ನೀರು ಶೇಖರಣೆಯಾಗಿದೆ. ಈ ಮಾಹಿತಿಯನ್ನು ಯಾರಿಂದಲೂ ಮುಚ್ಚಿಡಲು ಸಾಧ್ಯವಿಲ್ಲ. ಪ್ರತಿನಿತ್ಯ 3,500 ಕ್ಯೂಸೆಕ್ ನಂತೆ 15 ದಿನಕ್ಕೆ 4.5 ಟಿಎಂಸಿ ನೀರು ಹರಿಸಲು ಆದೇಶ ನೀಡಲಾಗಿದೆ. ರಾಜ್ಯದಲ್ಲಿ ಒಳಹರಿವು ಚೇತರಿಕೆ ಕಂಡಿರುವುದು ಸಮಾಧಾನಕರ ವಿಚಾರ. ನಮ್ಮ ಅಣೆಕಟ್ಟುಗಳ ಒಳಹರಿವು 25 ಸಾವಿರ ಕ್ಯೂಸೆಕ್ ನಷ್ಟಿದ್ದು, ಅದರಲ್ಲಿ 3,500 ಕ್ಯೂಸೆಕ್ ನೀರು ಬಿಡಲು ಸೂಚಿಸಿದ್ದಾರೆ. ಈ ಮಾಹಿತಿಗಳನ್ನು ಸಮಿತಿ ಹಾಗೂ ಪ್ರಾಧಿಕಾರ ಎರಡೂ ತನ್ನ ಆದೇಶದಲ್ಲಿ ಸೂಚಿಸಿವೆ. ಆದರೂ ನಮ್ಮ ರಾಜ್ಯದ ರೈತರ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯ. ನಾವು ನಮ್ಮ ರಾಜ್ಯದ ರೈತರ ರಕ್ಷಣೆ ಮಾಡುತ್ತೇವೆ. ನಾವು ಶಾಸಕರನ್ನು ಕರೆದು ಕುಡಿಯುವ ನೀರು ಹಾಗೂ ಕೆರೆಗಳನ್ನು ತುಂಬಿಸುವ ರಕ್ಷಣೆ ನೀಡಿದ್ದೇವೆ. ಬಂಗಾರಪ್ಪನವರ ಕಾಲದಿಂದ ಇಲ್ಲಿಯವರೆಗೂ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗೆಲ್ಲ ನಾವು ರಾಜ್ಯದ ಹಿತಕ್ಕೆ ಅಗತ್ಯ ರಕ್ಷಣೆ ನೀಡಲು ಬದ್ಧತೆ ತೋರಿದ್ದೇವೆ. ಈಗಲೂ ನಾವು ನಮ್ಮ ಕರ್ತವ್ಯಕ್ಕೆ ಬದ್ಧರಾಗಿದ್ದೇವೆ” ಎಂದರು.<img loading="lazy" decoding="async" class="aligncenter size-full wp-image-89812" src="https://www.justkannada.in/wp-content/uploads/2022/05/krs.jpg" alt="" width="500" height="280" srcset="https://www.justkannada.in/wp-content/uploads/2022/05/krs.jpg 500w, https://www.justkannada.in/wp-content/uploads/2022/05/krs-300x168.jpg 300w" sizes="auto, (max-width: 500px) 100vw, 500px" /></p>
<p><strong>ಕೇಂದ್ರ ಸಚಿವರು ಹಾಗೂ ಸಂಸದರಿಂದ ಉತ್ತಮ ಸಹಕಾರ:</strong></p>
<p>“ವಿರೋಧ ಪಕ್ಷದ ನಾಯಕರು ಮಾಧ್ಯಮಗಳ ಮೂಲಕ ಅನೇಕ ಮಾರ್ಗದರ್ಶನ ನೀಡಿದ್ದಾರೆ. ನಾವು ಮೇಲ್ಮನವಿ ಸಲ್ಲಿಸುವ ಮುನ್ನ ಕೇಂದ್ರ ಸಂಸದರು ಹಾಗೂ ಕೇಂದ್ರ ಸಚಿವರ ಸರ್ವಪಕ್ಷ ಸಭೆ ಮಾಡಿದ್ದೆ. ಎಲ್ಲಾ ಪಕ್ಷದ ಸಂಸದರು ಬಹಳ ಗೌರವದಿಂದ ರಾಜ್ಯದ ನೆಲ, ಜಲ ವಿಚಾರದಲ್ಲಿ ಸಭೆಯಲ್ಲಿ ಭಾಗವಹಿಸಿ ಚರ್ಚೆ ಮಾಡಿದ್ದಾರೆ. 3 ಕೇಂದ್ರ ಸಚಿವರು ಸೇರಿದಂತೆ 36 ಸಂಸದರು ಭಾಗವಹಿಸಿದ್ದರು. ನಾನು ಪ್ರಹ್ಲಾದ್ ಜೋಷಿ ಹಾಗೂ ಸಂಸದರ ಜತೆ ಚರ್ಚೆ ಮಾಡಿದ್ದೆ. ನಮ್ಮ ಮೇಲ್ಮನವಿ ಅರ್ಜಿಯನ್ನು ನಾವು ಜೋಷಿ ಅವರು, ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ಕಳುಹಿಸಿಕೊಟ್ಟಿದ್ದೆ. ಅವರು ಕೂಡ ತಮ್ಮ ಪ್ರಯತ್ನ ಮಾಡಿದ್ದಾರೆ. ಅವರು ಕೇಂದ್ರ ಸಚಿವರ ಮೇಲೆ ಒತ್ತಡ ಹಾಕಿದ್ದಾರೆ” ಎಂದರು.</p>
<p>“ತಮಿಳುನಾಡಿನವರು 9.94 ಟಿಎಂಸಿ ನೀರನ್ನು ಹರಿಸಬೇಕು ಎಂದು ವಾದ ಮಂಡಿಸಿದ್ದರು. ಆದರೆ ಸಮಿತಿಯು ಅದರಲ್ಲಿ ಅರ್ಧದಷ್ಟು ಪ್ರಮಾಣದ ನೀರು ಹರಿವಿಗೆ ಸೂಚಿಸಿದ್ದಾರೆ. ಕಳೆದ 2-3 ದಿನಗಳಿಂದ ನಮ್ಮಲ್ಲಿ ಒಳಹರಿವು ಹೆಚ್ಚಾಗಿದೆ. ಈ ವಿಚಾರವಾಗಿ ಚರ್ಚೆ ಮಾಡಲು ಎಲ್ಲಾ ಮಾಜಿ ಮುಖ್ಯಮಂತ್ರಿಗಳು ಹಾಗೂ ಕಾವೇರಿ ಭಾಗದ ಎಲ್ಲಾ ಪಕ್ಷಗಳ ಶಾಸಕರು, ಸಂಸತ್ ಸದಸ್ಯರಿಗೆ ಭಾನುವಾರ ಸರ್ವಪಕ್ಷ ಸಭೆ ಕರೆಯಲಾಗಿದೆ. ಕಾನೂನು ತಂಡದ ಜೊತೆಗೆ ನಾನು, ಪರಮೇಶ್ವರ್, ರಾಮಲಿಂಗಾ ರೆಡ್ಡಿ ಅವರು ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ಸರ್ವಪಕ್ಷ ಸಭೆಯಲ್ಲಿ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಅಭಿಪ್ರಾಯ ಮಂಡಿಸಿ, ನಂತರ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಬಿಜೆಪಿಯ ಸಂಸದರು, ಕೇಂದ್ರ ಸಚಿವರು ನಮಗೆ ಸಹಕಾರ ನೀಡಿದ್ದಾರೆ. ಇಲ್ಲಿ ಕೆಲವರು ವಿರೋಧ ಮಾಡಿರಬಹುದು, ನಾನು ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ. ರಾಜ್ಯದ ಹಿತವನ್ನು ಅವರು ಕಾಪಾಡುತ್ತಾರೆ ಎಂದು ಭಾವಿಸಿದ್ದೇನೆ ಎಂದರು.<img loading="lazy" decoding="async" class="aligncenter size-full wp-image-156593" src="https://www.justkannada.in/wp-content/uploads/2026/06/dks-7.jpg" alt="" width="500" height="340" srcset="https://www.justkannada.in/wp-content/uploads/2026/06/dks-7.jpg 500w, https://www.justkannada.in/wp-content/uploads/2026/06/dks-7-300x204.jpg 300w, https://www.justkannada.in/wp-content/uploads/2026/06/dks-7-150x102.jpg 150w" sizes="auto, (max-width: 500px) 100vw, 500px" /></p>
<p><strong>100 ವರ್ಷಗಳಲ್ಲಿ ಈ ವರ್ಷವೇ ತಮಿಳುನಾಡಿಗೆ ಅತಿ ಕಡಿಮೆ ನೀರು (ಜುಲೈ ಅಂತ್ಯದ ವೇಳೆಗೆ) ಬಿಟ್ಟಿದ್ದೇವೆ</strong></p>
<p>“ನಾನು ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು, ರಾಜ್ಯದ ಹಿತಕ್ಕೆ ಅವರ ಸಲಹೆ ಪಡೆಯುತ್ತೇವೆ. ಸರ್ವಪಕ್ಷ ಸಭೆಯಲ್ಲಿ ಅವರು ಬರಲಿ, ಅವರ ಸಲಹೆ ನೀಡಲಿ. ರಾಜ್ಯದ ಹಿತಕ್ಕೆ ನಾವು ಬದ್ಧರಾಗೋಣ. ಜುಲೈ ಅಂತ್ಯದವರೆಗೆ ನಾವು ತಮಿಳುನಾಡಿಗೆ 0.6 ಟಿಎಂಸಿ ನೀರನ್ನು ಮಾತ್ರ ತಮಿಳುನಾಡಿಗೆ ಹರಿಸಿದ್ದು, ಕಳೆದ 100 ವರ್ಷಗಳಲ್ಲಿ ತಮಿಳುನಾಡಿಗೆ ಹರಿಸಲಾಗಿರುವ ಅತ್ಯಂತ ಕಡಿಮೆ ಪ್ರಮಾಣದ ನೀರಾಗಿದೆ. ಇದುವರೆಗೂ ಹರಿದಿರುವ ನೀರು ಅಣೆಕಟ್ಟುಗಳಿಂದ ಬಿಟ್ಟಿರುವ ನೀರಲ್ಲ, ಬೆಂಗಳೂರು ಸುತ್ತಮುತ್ತ ಬಿದ್ದ ಮಳೆ ನೀರು ಹರಿದು ಹೋಗಿರುವ ನೀರಿನ ಪ್ರಮಾಣ. ಇಷ್ಟಾದರೂ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಮಧ್ಯೆ ಆಗಸ್ಟ್ 13ರಂದು ಬಂದ್ ಗೆ ಕರೆ ನೀಡುವ ಬಗ್ಗೆ ಚರ್ಚೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನಾವೇ ನಿಮ್ಮ ಪರವಾಗಿದ್ದು, ಬಂದ್ ಮಾಡುವ ಅಗತ್ಯವಿಲ್ಲ. ಇದರಿಂದ ಯಾವುದೇ ಪರಿಹಾರ ಸಿಗುವುದಿಲ್ಲ” ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>ರಾಜ್ಯದ ಹಿತ ಕಾಯಲು ನಾವು ಬದ್ಧ, ಬಂದ್ ಮಾಡುವುದರಿಂದ ಪರಿಹಾರ ಸಿಗಲ್ಲ</strong></p>
<p>“ಬಂದ್, ಪ್ರತಿಭಟನೆಗಳಿಂದ ಜನರಿಗೆ ತೊಂದರೆ ಆಗಬಾರದು ಎಂದು ನ್ಯಾಯಾಲಯದ ತೀರ್ಮಾನಗಳಿದ್ದು, ಈ ಬಂದ್ ಮಾಡಬಾರದ ಎಂದು ಸರ್ಕಾರದ ಪರವಾಗಿ ನಮ್ರತೆಯಿಂದ ಮನವಿ ಮಾಡಿಕೊಳ್ಳುತ್ತೇನೆ. ರಾಜ್ಯದ ಹಿತದ ವಿರುದ್ಧವಾಗಿ ನಾವು ಕೆಲಸ ಮಾಡುವುದಿಲ್ಲ. ವಿರೋಧ ಪಕ್ಷದ ನಾಯಕರು ರಾಜ್ಯದಲ್ಲಿ ಆಡಳಿತ ಮಾಡಿದ್ದಾರೆ. ನಿಮ್ಮ ಕಾಲದಲ್ಲಿ ನೀವು ಅನೇಕ ತೀರ್ಮಾನ ಮಾಡಿದ್ದೀರಿ. ನಾಗೇಗೌಡರು, ಜೆ ಹೆಚ್ ಪಟೇಲರು ನೀರಾವರಿ ಮಂತ್ರಿಯಾಗಿದ್ದಾಗ, ದೇವೇಗೌಡರು ಪ್ರಧಾನಿಯಾಗಿದ್ದಾಗ ಅನೇಕ ತೀರ್ಮಾನ ಮಾಡಲಾಗಿತ್ತು, ಅದರ ಬಗ್ಗೆ ಚರ್ಚೆ ಮಾಡುವುದಿಲ್ಲ, ಅದರ ಅಗತ್ಯವೂ ಇಲ್ಲ” ಎಂದು ತಿಳಿಸಿದರು.</p>
<p><strong>ಪರಿಸ್ಥಿತಿ ತಿಳಿಯಾದ ಬಳಿಕ ತಮಿಳುನಾಡು ಸಿಎಂ ವಿಜಯ್ ಅವರ ಜೊತೆ ಸಭೆ</strong></p>
<p>“ಆಗಸ್ಟ್ 3ರಂದು ತಮಿಳನಾಡು ಸಿಎಂ ಬರುವ ತೀರ್ಮಾನವಾಗಿತ್ತು. ಈ ಹಿಂದೆ ನಾನೇ ತಮಿಳುನಾಡಿಗೆ ಹೋಗಲು ಮನವಿ ಮಾಡಿದ್ದೆ ಆದರೆ ಡಿಎಂಕೆ ಸರ್ಕಾರ ಅನುಮತಿ ನೀಡಿರಲಿಲ್ಲ, ನಂತರ ಚುನಾವಣೆ ಬಂದು ಸರ್ಕಾರ ಬದಲಾಗಿದೆ. ಈಗ ವಿಜಯ್ ಅವರು ತಮ್ಮ ತಂಡದೊಂದಿಗೆ ಕರ್ನಾಟಕ್ಕೆ ಬರುವುದಾಗಿ ತಿಳಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪ್ರತಿಭಟನೆ ಮಾಡುವ ಬೆಳವಣಿಗೆ ನಮಗೆ ಸಮಾಧಾನ ತರುತ್ತಿಲ್ಲ. ಈ ವಿಚಾರವನ್ನು ಸೌಹಾರ್ದತೆ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಸಮಸ್ಯೆ ಬಗೆಹರಿದರೆ ಅವರಿಗೂ ಹಿತ, ನಮಗೂ ಹಿತ. ಈಗ ಪರಿಸ್ಥಿತಿ ಉತ್ತಮವಾಗಿಲ್ಲ, ಹೀಗಾಗಿ ನಮ್ಮ ಸಭೆಯನ್ನು ಕೆಲ ದಿನಗಳ ಕಾಲ ಮುಂದೂಡೋಣ ಎಂದು ನಾನು ತಮಿಳುನಾಡು ಮುಖ್ಯಮಂತ್ರಿಗಳಿಗೆ ಮನವಿ ಮಾಡಲು ಚರ್ಚೆ ಮಾಡುತ್ತೇನೆ. ಹೊರಗಿನಿಂದ ಅತಿಥಿಗಳು ಬರುವಾಗ ನಾವು ಸೌಹಾರ್ದತೆ ಹಾಗೂ ಗೌರವಪೂರ್ವಕವಾಗಿ ಆತಿಥ್ಯವಹಿಸಬೇಕು. ಹೀಗಾಗಿ ಆಗಸ್ಟ್ 3ರ ಬದಲು ಬೇರೆ ದಿನಾಂಕ ನಿಗದಿ ಮಾಡಿ ಮನವಿ ಮಾಡುತ್ತೇನೆ. ಅವರು ಅವರ ರಾಜ್ಯದ ಹಿತ ಕಾಪಾಡುವ ಉದ್ದೇಶವಿದ್ದರೆ, ನಮಗೆ ನಮ್ಮ ರಾಜ್ಯದ ಹಿತ ಕಾಪಾಡುವ ಉದ್ದೇಶವಿದೆ. ಸೌಹಾರ್ದತೆಯಿಂದ ಇದನ್ನು ಬಗೆಹರಿಸಿಕೊಳ್ಳಲು ಸಾಧ್ಯವೇ ಎಂದು ಚರ್ಚೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-154473" src="https://www.justkannada.in/wp-content/uploads/2026/05/vijay1.jpg" alt="" width="500" height="300" srcset="https://www.justkannada.in/wp-content/uploads/2026/05/vijay1.jpg 500w, https://www.justkannada.in/wp-content/uploads/2026/05/vijay1-300x180.jpg 300w, https://www.justkannada.in/wp-content/uploads/2026/05/vijay1-150x90.jpg 150w" sizes="auto, (max-width: 500px) 100vw, 500px" /></p>
<p>“ನಾನು ಅಧಿಕಾರ ವಹಿಸಿಕೊಂಡ ಬಳಿಕ ಕೇಂದ್ರ ಜಲಶಕ್ತಿ ಸಚಿವರಾದ ಸಿ ಆರ್ ಪಾಟೀಲ್ ಅವರ ನೇತೃತ್ವದಲ್ಲಿ ನಾನು, ತೆಲಂಗಾಣ ಸಿಎಂ ಹಾಗೂ ಆಂಧ್ರಪ್ರದೇಶ ಸಿಎಂ ಒಟ್ಟಿಗೆ ಸಭೆ ಮಾಡಿ ಒಂದು ಒಮ್ಮತದ ತೀರ್ಮಾನಕ್ಕೆ ಬಂದಿದ್ದೇವೆ. ಆಂಧ್ರ ಸಿಎಂ ದೇಶದ ಹಿರಿಯ ರಾಜಕಾರಣಿ, ಅವರಿಗೆ ಸಾಕಷ್ಟು ಅನುಭವವಿದೆ. ಅವರೊಂದಿಗೆ ತುಂಗಭದ್ರಾ ಅಣೆಕಟ್ಟಿನ ಹೂಳು ತುಂಬಿರುವುದರಿಂದ ಕರ್ನಾಟಕಕ್ಕೆ ಆಗುತ್ತಿರುವ 33 ಟಿಎಂಸಿ ನೀರಿನ ನಷ್ಟವನ್ನು ತಡೆಯಲು ಸಮತೋಲಿತ ಅಣೆಕಟ್ಟು ನಿರ್ಮಾಣ ಸೇರಿದಂತೆ ಅನೇಕ ಪರ್ಯಾಯ ಆಯ್ಕೆ, ನದಿ ಜೋಡಣೆ ವಿಚಾರದಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದೆ” ಎಂದರು.</p>
<p>“ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಕೈಗೆತ್ತಕೊಂಡು 90-10 ಅನುಪಾತದಲ್ಲಿ ಕೇಂದ್ರ ಸರ್ಕಾರ ಹಣವನ್ನು ಭರಿಸಲಿದೆ. ಹೀಗಾಗಿ ಸಿ ಆರ್ ಪಾಟೀಲ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದೇ ರೀತಿ ತಮಿಳುನಾಡು ಸಿಎಂ ಕರ್ನಾಟಕಕ್ಕೆ ಆಗಮಿಸಿ ಚರ್ಚೆ ಮಾಡಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳು, ಬಿಜೆಪಿ ಸ್ನೇಹಿತರು, ರೈತ ಸಂಘಟನೆಗಳು ಹೋರಾಟ ಮಾಡುತ್ತಿವೆ. ಅವರು ಹೋರಾಟ ಮಾಡುವುದನ್ನು ತಪ್ಪು ಎಂದು ಹೇಳುವುದಿಲ್ಲ. ನಮ್ಮ ಸರ್ಕಾರ ಪ್ರತಿ ಸಂದರ್ಭದಲ್ಲಿ ರಾಜ್ಯದ ಹಿತ ಕಾಪಾಡಿಕೊಂಡು ಬಂದಿದೆ. ಯಾವ ಸಂದರ್ಭದಲ್ಲೂ ರೈತರನ್ನು ಕೈ ಬಿಟ್ಟಿಲ್ಲ. ಇಂದು ಬೆಳಗ್ಗೆ ಬಿಜೆಪಿ ನಾಯಕರು ಹೋರಾಟ ಮಾಡಿದ್ದಾರೆ. ಅವರ ಪಕ್ಷದ ಕೇಂದ್ರದ ಮಂತ್ರಿಗಳು ಹಾಗೂ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ. ಸರ್ವಪಕ್ಷ ಸಭೆ ಕರೆಯಲಾಗಿದೆ. ಎಲ್ಲರ ಜೊತೆ ಚರ್ಚೆ ಮಾಡದೇ ನಾನು ಅಂತಿಮ ತೀರ್ಮಾನ ಮಾಡುವುದಿಲ್ಲ. ಹೀಗಿರುವಾಗ ಬಿಜೆಪಿ ನಾಯಕರು ಇಂದು ಹೋರಾಟ ಮಾಡುವ ಅಗತ್ಯವಿರಲಿಲ್ಲ”</p>
<p><strong>ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನ</strong></p>
<p>“ಮೇಕೆದಾಟು ಯೋಜನೆ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಪ್ರಯೋಜನವಾಗಲಿದೆ. ನಾವು ಕೇವಲ 400 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಹಾಗೂ ಕುಡಿಯುವ ನೀರಿನ ಪೂರೈಕೆಗೆ ಬಳಕೆಯಾಗಲಿದೆ. ಈ 66 ಟಿಎಂಸಿ ನೀರನ್ನು ಯಾವುದೇ ಕಾರಣಕ್ಕೂ ನೀರಾವರಿ ಉದ್ದೇಶಕ್ಕೆ ಬಳಸಿಕೊಳ್ಳುವುದಿಲ್ಲ. ಇಂತಹ ಕಠಿಣ ಸಂದರ್ಭದಲ್ಲಿ ನೀರು ಹರಿಸುವ ಆದೇಶ ಬಂದಾಗ ಅದನ್ನು ಪಾಲನೆ ಮಾಡಲು ನೆರವಾಗುತ್ತದೆ. ಇತ್ತೀಚೆಗೆ ಬಂದ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ, ತಮಿಳುನಾಡಿಗೆ 177 ಟಿಎಂಸಿ ನೀರು ಹರಿಸಬೇಕು ಎಂದು ನಮಗೂ ನಿರ್ದೇಶನ ನೀಡಿದೆ. ಅದನ್ನು ಪಾಲಿಸುವಲ್ಲಿ ನಮ್ಮ ಅಭ್ಯಂಥರವಿಲ್ಲ. ನಿಮ್ಮ ಜಾಗದಲ್ಲಿ ನೀವು ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಕೇಂದ್ರ ಸಚಿವರು ರಾಜ್ಯಸಭೆಯಲ್ಲಿ ಈ ಬಗ್ಗೆ ಉತ್ತರ ನೀಡಿದ್ದಾರೆ. ಈ ಮಧ್ಯೆ ತಮಿಳುನಾಡು ವಿಧಾನಸಭೆಯಲ್ಲಿ ಅವರು ನಿರ್ಣಯ ಮಂಡಿಸಿದ್ದಾರೆ. ಅದು ಅವರ ರಾಜಕಾರಣ, ಅದನ್ನು ನಾನು ಪ್ರಶ್ನೆ ಮಾಡುವುದಿಲ್ಲ. ನಾವು ನಮ್ಮ ರಾಜ್ಯದ ಹಿತಕ್ಕೆ ಕಾನೂನು ಚೌಕಟ್ಟಿನಲ್ಲಿ ಬಗೆಹರಿಸುತ್ತೇವೆ. ಮೇಕೆದಾಟು ಯೋಜನೆ ಡಿಪಿಆರ್ ತಿರಸ್ಕಾರಗೊಂಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಅದು ತಿರಸ್ಕಾರವಲ್ಲ, ಅವರು ಕೆಲವು ವಿಚಾರವಾಗಿ ಸ್ಪಷ್ಟನೆ ಕೇಳಿದ್ದು, ಅವುಗಳನ್ನು ಸಧ್ಯದಲ್ಲೇ ನೀಡುತ್ತೇವೆ” ಎಂದು ವಿವರಿಸಿದರು.</p>
<p><strong>ಪ್ರಶ್ನೋತ್ತರ:</strong></p>
<p>ತಮಿಳುನಾಡಿಗೆ ಕೂಡಲೇ ನೀರು ಹರಿಸುತ್ತೀರಾ ಎಂದು ಕೇಳಿದಾಗ, “ನಮ್ಮ ಮೇಲ್ಮನವಿ ತಿರಸ್ಕಾರಗೊಂಡಿದೆ. ಮುಂದೆ ಏನು ಮಾಡಬೇಕು ಎಂದು ಸರ್ವಪಕ್ಷ ಸಭೆ ಕರೆಯಲಾಗಿದೆ. ಸಭೆ ಬಳಿಕ ತೀರ್ಮಾನ ಮಾಡಲಾಗುವುದು” ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.</p>
<p>ತಮಿಳುನಾಡಿನವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರೆ ಎಂದು ಕೇಳಿದಾಗ, “ಈಗ ನಾವು ಅದರ ಬಗ್ಗೆ ಯಾಕೆ ಯೋಚನೆ ಮಾಡಬೇಕು” ಎಂದು  ತಿಳಿಸಿದರು.</p>
<p>ನಮ್ಮ ರಾಜ್ಯದಿಂದ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಾಗುವುದೇ ಎಂದು ಕೇಳಿದಾಗ, “ದೆಹಲಿ ಕಾನೂನು ತಜ್ಞರ ಸಲಹೆ, ಸರ್ವಪಕ್ಷ ಸಭೆಯಲ್ಲಿ ಮಾಜಿ ಸಿಎಂಗಳು ಹಾಗೂ ವಿರೋಧ ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ಪಡೆಯದೇ ಯಾವುದೇ ತೀರ್ಮಾನ ಮಾಡುವುದಿಲ್ಲ” ಎಂದು ತಿಳಿಸಿದರು.</p>
<p>ಎರಡು ರಾಜ್ಯಗಳ ಸಿಎಂಗಳ ಭೇಟಿ ಪ್ರಸ್ತಾಪ ನಮ್ಮ ರಾಜ್ಯದಿಂದ ಹೋಗಿದ್ದಾ ಅಥವಾ ತಮಿಳುನಾಡಿನಿಂದ ಬಂದಿದ್ದಾ ಎಂದು ಕೇಳಿದಾಗ, “ತಮಿಳುನಾಡಿನ ಮುಖ್ಯಮಂತ್ರಿಗಳ ಕಚೇರಿಯಿಂದ ನಮ್ಮ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬಂದಿದ್ದು, ಅವರ ಮುಖ್ಯಮಂತ್ರಿಗಳು ಕರ್ನಾಟಕಕ್ಕೆ ಭೇಟಿ ನೀಡಿ ಅನೇಕ ವಿಚಾರವಾಗಿ ಚರ್ಚೆ ಮಾಡಲು ಬಯಸಿದ್ದಾರೆ ಎಂದು ತಿಳಿಸಲಾಗಿತ್ತು. ನಾವು ಅದಕ್ಕೆ ಸಮ್ಮತಿ ನೀಡಿ ಆಗಸ್ಟ್ 3ರಂದು ಸಭೆಗೆ ತೀರ್ಮಾನ ಮಾಡಿದ್ದೆವು. ಆದರೆ ಈಗ ಸಭೆಗೆ ವಾತಾವರಣ ಸರಿಯಾಗಿಲ್ಲ ಎಂದು ಮುಂದೂಡಲು ಚಿಂತಿಸುತ್ತಿದ್ದೇವೆ. ಎರಡೂ ರಾಜ್ಯದಲ್ಲಿರುವ ರೈತರು ನಮ್ಮ ದೇಶದವರೇ, ನಾವು ಒಟ್ಟಾಗಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು” ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.</p>
<p>ಕುಡಿಯುವ ನೀರಿಗೆ ಸಮಸ್ಯೆಯಾಗುವುದಿಲ್ಲವೇ ಎಂದು ಕೇಳಿದಾಗ, “ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಇದಕ್ಕೆ 40 ಟಿಎಂಸಿ ನೀರಿನ ಅಗತ್ಯವಿದ್ದು, 36 ಟಿಎಂಸಿ ಕುಡಿಯಲು ಹಾಗೂ 4 ಟಿಎಂಸಿ ನೀರು ಆವಿಯಾಗುವ ಸಾಧ್ಯತೆ ಇರುತ್ತದೆ. ಉಳಿದಂತ ಹೆಚ್ಚುವರಿ ನೀರನ್ನು ಸಂಕಷ್ಟದ ಪರಿಸ್ಥಿತಿಯಲ್ಲಿ ನೀರುಹಂಚಿಕೆ ಸೂತ್ರದ ಆಧಾರದ ಮೇಲೆ ಹಂಚಿಕೆ ಮಾಡಲಾಗುವುದು” ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಕಾನೂನು ತಜ್ಞರು ಎಲ್ಲಿ ಎಡವಿದ್ದಾರೆ ಎಂದು ಕೇಳಿದಾಗ, “ನಮ್ಮ ಕಾನೂನು ತಜ್ಞರ ತಂಡ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ” ಎಂದು ತಿಳಿಸಿದರು.</p>
<p>Key words: Cauvery water, issue, CM, D.K. Shivakumar</p>
<p>The post <a href="https://www.justkannada.in/cauvery-water-cm-d-k-shivakumar/">ಕಾವೇರಿ ನೀರಿನ ವಿಚಾರ; ಕಾನೂನು ತಜ್ಞರು, ವಿರೋಧ ಪಕ್ಷಗಳ ಸಲಹೆ ಬಳಿಕ ಮುಂದಿನ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾವೇರಿ ನೀರು ವಿವಾದ ವಿಚಾರ: ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ.ಕೆ ಶಿವಕುಮಾರ್</title>
		<link>https://www.justkannada.in/cauvery-dispute-d-k-shivakumar/</link>
		
		<dc:creator><![CDATA[prashanth]]></dc:creator>
		<pubDate>Thu, 30 Jul 2026 11:47:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[all-party meeting.]]></category>
		<category><![CDATA[Cauvery dispute]]></category>
		<category><![CDATA[CM]]></category>
		<category><![CDATA[D K Shivakumar]]></category>
		<category><![CDATA[Sunday]]></category>
		<guid isPermaLink="false">https://www.justkannada.in/?p=157993</guid>

					<description><![CDATA[<p>ನವದೆಹಲಿ, ಜುಲೈ,30,2026 (www.justkannada.in):  ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ ಅವರು, ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಮೇಲ್ಮನವಿ ಸಲ್ಲಿಸಿದ್ದು, ಮುಂದೆ ಈ ವಿಚಾರವನ್ನು ಹೇಗೆ [&#8230;]</p>
<p>The post <a href="https://www.justkannada.in/cauvery-dispute-d-k-shivakumar/">ಕಾವೇರಿ ನೀರು ವಿವಾದ ವಿಚಾರ: ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ.ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ, ಜುಲೈ,30,2026 (<a href="http://www.justkannada.in">www.justkannada.in</a>): </strong> ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ ಅವರು, ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಮೇಲ್ಮನವಿ ಸಲ್ಲಿಸಿದ್ದು, ಮುಂದೆ ಈ ವಿಚಾರವನ್ನು ಹೇಗೆ ತೆಗೆದುಕೊಂಡು ಹೋಗಬೇಕು ಎಂದು ಸರ್ವಪಕ್ಷ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಈ ವಿಚಾರವಾಗಿ ಸಂಸದರು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸೋಮಣ್ಣ, ಜಗದೀಶ್ ಶೆಟ್ಟರ್, ಬೊಮ್ಮಾಯಿ ಅವರ ಜೊತೆ ಚರ್ಚೆ ಮಾಡಿದ್ದು, ಅವರು ರಾಜ್ಯದ ಹಿತಕ್ಕಾಗಿ ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-157758" src="https://www.justkannada.in/wp-content/uploads/2026/07/dks1-3.jpg" alt="" width="500" height="515" srcset="https://www.justkannada.in/wp-content/uploads/2026/07/dks1-3.jpg 500w, https://www.justkannada.in/wp-content/uploads/2026/07/dks1-3-291x300.jpg 291w, https://www.justkannada.in/wp-content/uploads/2026/07/dks1-3-408x420.jpg 408w, https://www.justkannada.in/wp-content/uploads/2026/07/dks1-3-150x155.jpg 150w, https://www.justkannada.in/wp-content/uploads/2026/07/dks1-3-300x309.jpg 300w" sizes="auto, (max-width: 500px) 100vw, 500px" /></p>
<p>ಕರ್ನಾಟಕ ಕಾಂಗ್ರೆಸ್ ನಾಯಕರ ಬದಲು ದೆಹಲಿ ಸರ್ಕಾರವನ್ನು ಭೇಟಿ ಮಾಡಿ ಎಂದು ತಮಿಳುನಾಡು ಸಿಎಂ ವಿಜಯ್ ಅವರಿಗೆ ಡಿಎಂಕೆ ನಾಯಕ ಅನ್ಬುಮಣಿ ಸಲಹೆ ನೀಡಿರುವ ಬಗ್ಗೆ ಕೇಳಿದಾಗ, “ಆ ವಿಚಾರವಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ನಮಗೆ ಪರಸ್ಪರ ಕಿತ್ತಾಟ ಮಾಡಲು ಇಷ್ಟವಿಲ್ಲ. ನೆಲದ ಕಾನೂನು ಇದೆ. ನಾವು ಪರಸ್ಪರ ಗೌರವಿಸಬೇಕು. ಇಡೀ ದೇಶ ಒಂದಾಗಿ ಕೆಲಸ ಮಾಡಬೇಕು ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ಸಚಿವ ಸಂಪುಟ ವಿಸ್ತರಣೆ ಕುರಿತು ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, “ಯಡಿಯೂರಪ್ಪನವರು ಕೂಡ ಸಚಿವ ಸಂಪುಟ ರಚನೆ ಮಾಡದೇ ಅಧಿಕಾರ ಮಾಡಿರಲಿಲ್ಲವೇ? ಆಗ ಅಪ್ಪ-ಮಗ ಅಧಿಕಾರವನ್ನು ಅನುಭವಿಸಲಿಲ್ಲವೇ?” ಎಂದು ಮರುಪ್ರಶ್ನಿಸಿದರು.</p>
<p>ENGLISH SUMMARY..</p>
<p>All-Party Meeting on Cauvery Issue on Sunday: CM D.K. Shivakumar</p>
<p>Did Yediyurappa Not Exercise Power Alone Without a Cabinet?</p>
<p>New Delhi, July 30:</p>
<p>Chief Minister D.K. Shivakumar said that an all-party meeting regarding the Cauvery water issue has been convened this coming Sunday (August 2) at the home office &#8216;Krishna&#8217;.</p>
<p>Responding to queries from media in Karnataka Bhavan here today, he said that, Former Chief Ministers of the state, MPs, and MLAs from the Cauvery basin region have been invited.</p>
<p>He stated, &#8220;Today, an appeal has been filed before the Cauvery Water Management Authority (CWMA), and we will discuss how to take this matter forward in the all-party meeting. We have discussed this issue with MPs and Union Ministers Pralhad Joshi, V. Somanna, Jagadish Shettar, and Basavaraj Bommai, and they are making utmost efforts for the welfare of the state.&#8221;</p>
<p>When asked about Tamil Nadu CM Vijay being advised to approach the Union government instead of Karnataka, he replied, &#8220;I will not comment on that matter. We have no interest in fighting with each other. There is a law of the land. We must respect one another. The entire country must work together.<br />
When asked about BJP leaders&#8217; criticism regarding the cabinet expansion, he counter-questioned, Didn&#8217;t Yediyurappa also run the administration without forming a cabinet? Didn&#8217;t the father-son duo enjoy power back then?&#8221;</p>
<p>Key words: Cauvery dispute, All-party meeting, Sunday, CM, D.K. Shivakumar</p>
<p>The post <a href="https://www.justkannada.in/cauvery-dispute-d-k-shivakumar/">ಕಾವೇರಿ ನೀರು ವಿವಾದ ವಿಚಾರ: ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ.ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಮಿಳುನಾಡು ಸಿಎಂ ಖುಷಿ ಪಡಿಸಲು ರೈತರಿಗೆ ಅನ್ಯಾಯ: ಏಕೆ ಇಂತಹ ಕಪಟ ನಾಟಕ-ಬಿವೈ ವಿಜಯೇಂದ್ರ ಕಿಡಿ</title>
		<link>https://www.justkannada.in/by-vijayendra-88/</link>
		
		<dc:creator><![CDATA[prashanth]]></dc:creator>
		<pubDate>Wed, 29 Jul 2026 11:10:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BY Vijayendra]]></category>
		<category><![CDATA[CM]]></category>
		<category><![CDATA[DK Shivakumar]]></category>
		<category><![CDATA[Farmers]]></category>
		<category><![CDATA[Tamil Nadu]]></category>
		<category><![CDATA[water]]></category>
		<guid isPermaLink="false">https://www.justkannada.in/?p=157943</guid>

					<description><![CDATA[<p>ಶಿವಮೊಗ್ಗ,ಜುಲೈ,29,2026 (www.justkannada.in): ತಮಿಳುನಾಡು ಸಿಎಂ ಖುಷಿ ಪಡಿಸಲು ಕದ್ದುಮುಚ್ಚಿ ರಾತ್ರೋರಾತ್ರಿ ನೀರು ಬಿಡುವ ಕೆಲಸ ಆಗಿತ್ತು. ಈ ಮೂಲಕ  ರೈತರಿಗೆ ಅನ್ಯಾಯ ಮಾಡಿದರು. ಸಿಎಂ ಡಿಕೆ ಶಿವಕುಮಾರ್ ಅವರೇ ಏಕೆ ಇಂತಹ ಕಪಟ ನಾಟಕ ಮಾಡುತ್ತೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು. ಇಂದು ಮಾತನಾಡಿದ ಬಿವೈ ವಿಜಯೇಂದ್ರ, ನಿನ್ನೆ ಆದೇಶ ಕಾವೇರಿ ಕೊಳ್ಳದ ರೈತರಿಗೆ ಬರೆ ಎಳೆದಂತೆ ಆಗಿದೆ. ಸಿಎಂ ಕೆಲವು ದಿನದ ಹಿಂದೆ ಆ ಭಾಗದ ರೈತರಿಗೆ ಕರೆ ಕೊಟ್ಟಿದ್ದರು. ಬರ ಪರಿಸ್ಥಿತಿ [&#8230;]</p>
<p>The post <a href="https://www.justkannada.in/by-vijayendra-88/">ತಮಿಳುನಾಡು ಸಿಎಂ ಖುಷಿ ಪಡಿಸಲು ರೈತರಿಗೆ ಅನ್ಯಾಯ: ಏಕೆ ಇಂತಹ ಕಪಟ ನಾಟಕ-ಬಿವೈ ವಿಜಯೇಂದ್ರ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ಜುಲೈ,29,2026 (<a href="http://www.justkannada.in">www.justkannada.in</a>):</strong> ತಮಿಳುನಾಡು ಸಿಎಂ ಖುಷಿ ಪಡಿಸಲು ಕದ್ದುಮುಚ್ಚಿ ರಾತ್ರೋರಾತ್ರಿ ನೀರು ಬಿಡುವ ಕೆಲಸ ಆಗಿತ್ತು. ಈ ಮೂಲಕ  ರೈತರಿಗೆ ಅನ್ಯಾಯ ಮಾಡಿದರು. ಸಿಎಂ ಡಿಕೆ ಶಿವಕುಮಾರ್ ಅವರೇ ಏಕೆ ಇಂತಹ ಕಪಟ ನಾಟಕ ಮಾಡುತ್ತೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾತನಾಡಿದ ಬಿವೈ ವಿಜಯೇಂದ್ರ, ನಿನ್ನೆ ಆದೇಶ ಕಾವೇರಿ ಕೊಳ್ಳದ ರೈತರಿಗೆ ಬರೆ ಎಳೆದಂತೆ ಆಗಿದೆ. ಸಿಎಂ ಕೆಲವು ದಿನದ ಹಿಂದೆ ಆ ಭಾಗದ ರೈತರಿಗೆ ಕರೆ ಕೊಟ್ಟಿದ್ದರು. ಬರ ಪರಿಸ್ಥಿತಿ ಇದೆ. ಯಾರೂ ಬೆಳೆ ಬೆಳೆಯಬೇಡಿ ಎಂದಿದ್ದರು.  ಸಿಎಂ ಆಗಿ ರೈತರಿಗೆ ಧೈರ್ಯ ತುಂಬಬೇಕಿತ್ತು.  ಆದರೆ ಸಿಎಂ ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ. ಜೊತೆಗೆ ಕದ್ದುಮುಚ್ಚಿ ರಾತ್ರೋರಾತ್ರಿ ನೀರು ಬಿಡುವ ಕೆಲಸ ಆಗಿತ್ತು.  ತಮಿಳುನಾಡು ಸಿಎಂ ಖುಷಿ ಪಡಿಸಲು ರೈತರಿಗೆ ಅನ್ಯಾಯಮಾಡಿದರು. ಸಿಎಂ ಡಿಕೆ ಶಿವಕುಮಾರ್ ಅವರೇ ಏಕೆ ಇಂತಹ ಕಪಟ ನಾಟಕ ಮಾಡುತ್ತೀರಿ ಎಂದು ವಾಗ್ದಾಳಿ ನಡೆಸಿದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಕೆಆರ್ ಎಸ್ ನಲ್ಲಿ  17.39 ಟಿಎಂಸಿ ನೀರು ಸಂಗ್ರಹವಿದೆ. ಅದರಲ್ಲಿ 5 ಟಿಎಂಸಿ ಡೆಡ್ ಸ್ಟೋರೇಜ್ .  ಉಳಿದ 12 ರಿಂದ 13 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟರೇ ರೈತರ ಗತಿಯೇನು?  ಸಿಎಂ ಡಿಕೆ ಶಿವಕುಮಾರ್ ಏಕೆ ಕಾವೇರಿ ಕೊಳ್ಳದ ರೈತರ ಜೊತೆ ಚೆಲ್ಲಾಟ ಆಡುತ್ತಿದ್ದೀರಿ. ಈ ಚೆಲ್ಲಾಟ ಆಡೋದು ಬಿಟ್ಟು ಮರುಪರಿಶೀಲನಾ ಅರ್ಜಿ ಸಲ್ಲಿಸಲಿ. ಸಿಡಬ್ಲ್ಯು ಆರ್  ಸಿ ಮುಂದೆ ಸರಿಯಾದ ರೀತಿ ವಾದ ಮಂಡಿಸಬೇಕು ಎಂದು ಬಿವೈ ವಿಜಯೇಂದ್ರ ಸಲಹೆ ನೀಡಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Farmers, Tamil Nadu, Water, CM, DK Shivakumar, BY Vijayendra</p>
<p>The post <a href="https://www.justkannada.in/by-vijayendra-88/">ತಮಿಳುನಾಡು ಸಿಎಂ ಖುಷಿ ಪಡಿಸಲು ರೈತರಿಗೆ ಅನ್ಯಾಯ: ಏಕೆ ಇಂತಹ ಕಪಟ ನಾಟಕ-ಬಿವೈ ವಿಜಯೇಂದ್ರ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ- ಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/cm-dk-shivakumar-30/</link>
		
		<dc:creator><![CDATA[prashanth]]></dc:creator>
		<pubDate>Wed, 29 Jul 2026 09:52:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[appeal]]></category>
		<category><![CDATA[CM]]></category>
		<category><![CDATA[CWRC]]></category>
		<category><![CDATA[Decision]]></category>
		<category><![CDATA[DK Shivakumar]]></category>
		<category><![CDATA[Order]]></category>
		<guid isPermaLink="false">https://www.justkannada.in/?p=157939</guid>

					<description><![CDATA[<p>ನವದೆಹಲಿ,ಜುಲೈ,29,2026 (www.justkannada.in):  ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಇಂದು ಈ ಕುರಿತು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಜಲಸಂನ್ಮೂಲ ಸಚಿವರು, ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಸಿಡಬ್ಲ್ಯು ಆರ್ ಸಿ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ. ಮೇಲ್ಮನವಿ ಸಲ್ಲಿಸಲು ಕಾನೂನು ತಜ್ಞರು ಸಿದ್ದತೆ ನಡೆಸಿದ್ದಾರೆ ಎಂದರು. ರಾಜ್ಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ವಿಚಾರ ಕುರಿತು [&#8230;]</p>
<p>The post <a href="https://www.justkannada.in/cm-dk-shivakumar-30/">CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ- ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,29,2026 (<a href="http://www.justkannada.in">www.justkannada.in</a>):</strong>  ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಈ ಕುರಿತು ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಜಲಸಂನ್ಮೂಲ ಸಚಿವರು, ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಸಿಡಬ್ಲ್ಯು ಆರ್ ಸಿ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ. ಮೇಲ್ಮನವಿ ಸಲ್ಲಿಸಲು ಕಾನೂನು ತಜ್ಞರು ಸಿದ್ದತೆ ನಡೆಸಿದ್ದಾರೆ ಎಂದರು.<img loading="lazy" decoding="async" class="aligncenter size-full wp-image-155582" src="https://www.justkannada.in/wp-content/uploads/2026/06/cm-dk-shivakumar-dks.jpg" alt="" width="500" height="500" srcset="https://www.justkannada.in/wp-content/uploads/2026/06/cm-dk-shivakumar-dks.jpg 500w, https://www.justkannada.in/wp-content/uploads/2026/06/cm-dk-shivakumar-dks-300x300.jpg 300w, https://www.justkannada.in/wp-content/uploads/2026/06/cm-dk-shivakumar-dks-150x150.jpg 150w, https://www.justkannada.in/wp-content/uploads/2026/06/cm-dk-shivakumar-dks-420x420.jpg 420w, https://www.justkannada.in/wp-content/uploads/2026/06/cm-dk-shivakumar-dks-100x100.jpg 100w" sizes="auto, (max-width: 500px) 100vw, 500px" /></p>
<p>ರಾಜ್ಯಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಕಾವೇರಿ ಜಲಾಶಯ ನೋಡಲು  ತಮಿಳುನಾಡು ಸಿಎಂಗೆ ಮನವಿ ಮಾಡಿದ್ದೇವೆ. ವೈಮಾನಿಕ ಸಮೀಕ್ಷೆ ನಡೆಸಲು ಮನವಿ ಮಾಡಿದ್ದೇನೆ. ಅತಿಥಿಯನ್ನ ಗೌರವಪೂರ್ವಕವಾಗಿ ಬರಮಾಡಿಕೊಳ್ಳುತ್ತೇವೆ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Decision, appeal, against, CWRC, order, CM, DK Shivakumar</p>
<p>The post <a href="https://www.justkannada.in/cm-dk-shivakumar-30/">CWRC ಆದೇಶದ ವಿರುದ್ದ ಮೇಲ್ಮನವಿಗೆ ನಿರ್ಧಾರ- ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
