<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>death-due-to Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/death-due-to/feed/" rel="self" type="application/rss+xml" />
	<link>https://www.justkannada.in/tag/death-due-to/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 10 May 2022 16:50:03 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>death-due-to Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/death-due-to/</link>
	<width>32</width>
	<height>32</height>
</image> 
	<item>
		<title>MYSORE NEWS : ನಿರೀಕ್ಷಣ ಜಾಮೀನು ಅರ್ಜಿ ವಜಾ. ಸಂಕಷ್ಟದಲ್ಲಿ ಬಿಜೆಪಿ ಮುಖಂಡ ಅಪ್ಪಣ್ಣ..!</title>
		<link>https://www.justkannada.in/mysore-businessman-death-due-to-bjp-leader-appanna-bail-rejected/</link>
		
		<dc:creator><![CDATA[JK Desk]]></dc:creator>
		<pubDate>Tue, 10 May 2022 16:47:55 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Appanna]]></category>
		<category><![CDATA[bail-rejected]]></category>
		<category><![CDATA[BJP leader]]></category>
		<category><![CDATA[death-due-to]]></category>
		<category><![CDATA[mysore-businessman]]></category>
		<guid isPermaLink="false">https://www.justkannada.in/?p=89494</guid>

					<description><![CDATA[<p>&#160; ಮೈಸೂರು, ಮೇ 10, 2022 : (www.justkannada.in news) : ಉದ್ಯಮಿ ಶರತ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ಮೊಲದ ಆರೋಪಿ ಪ್ರವೀಣ್ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿ ವಜಾ. ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ದೇವರಾಜ್ ಅವರು, ಪ್ರಕರಣದ ಮೊದಲ ಆರೋಪಿ ಪ್ರವೀಣ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಈ ಹಿನ್ನೆಲೆಯಲ್ಲಿ ಇದೀಗ ಪ್ರಕರಣದ ಎರಡನೇ ಆರೋಪಿಯಾಗಿರುವ ಬಿಜೆಪಿ ಮುಖಂಡ ಅಪ್ಪಣ್ಣಗೆ ಸಂಕಷ್ಟ ಎದುರಾಗಿದೆ. ಘಟನೆ ಹಿನ್ನೆಲೆ : ಬಿಜೆಪಿ ಮುಖಂಡ ಅಪ್ಪಣ್ಣ [&#8230;]</p>
<p>The post <a href="https://www.justkannada.in/mysore-businessman-death-due-to-bjp-leader-appanna-bail-rejected/">MYSORE NEWS : ನಿರೀಕ್ಷಣ ಜಾಮೀನು ಅರ್ಜಿ ವಜಾ. ಸಂಕಷ್ಟದಲ್ಲಿ ಬಿಜೆಪಿ ಮುಖಂಡ ಅಪ್ಪಣ್ಣ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಮೇ 10, 2022 : (www.justkannada.in news) : ಉದ್ಯಮಿ ಶರತ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ಮೊಲದ ಆರೋಪಿ ಪ್ರವೀಣ್ ಸಲ್ಲಿಸಿದ್ದ ನಿರೀಕ್ಷಣ ಜಾಮೀನು ಅರ್ಜಿ ವಜಾ.</p>
<p>ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ದೇವರಾಜ್ ಅವರು, ಪ್ರಕರಣದ ಮೊದಲ ಆರೋಪಿ ಪ್ರವೀಣ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಈ ಹಿನ್ನೆಲೆಯಲ್ಲಿ ಇದೀಗ ಪ್ರಕರಣದ ಎರಡನೇ ಆರೋಪಿಯಾಗಿರುವ ಬಿಜೆಪಿ ಮುಖಂಡ ಅಪ್ಪಣ್ಣಗೆ ಸಂಕಷ್ಟ ಎದುರಾಗಿದೆ.</p>
<p><img fetchpriority="high" decoding="async" class="aligncenter size-full wp-image-77559" src="https://www.justkannada.in/wp-content/uploads/2021/10/mysoreDistCourt.gif" alt="" width="350" height="250" /></p>
<p>ಘಟನೆ ಹಿನ್ನೆಲೆ :</p>
<p>ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಡೆತ್‌ನೋಟ್‌ನಲ್ಲಿ ಅಣ್ಣಪ್ಪನ ಹೆಸರು ಬರೆದು ಮೈಸೂರಿನ ಗಣೇಶ ನಗರದ ನಿವಾಸಿ, ಉದ್ಯಮಿ ಶರತ್‌ ಏಪ್ರಿಲ್ 18 ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಘಟನೆಗೆ ಸಂಬಂಧಿಸಿದಂತೆ ಮೈಸೂರಿನ ಎನ್.ಆರ್ ಪೊಲೀಸ್ ಠಾಣೆಯಲ್ಲಿ ಅಪ್ಪಣ್ಣ ಹಾಗೂ ಪ್ರವೀಣ್ ಎಂಬುವರ ಮೇಲೆ ಎಫ್‌ಐಆರ್ ದಾಖಲಾಗಿದೆ.</p>
<p>ಜಂಗಲ್‌ ಲಾಡ್ಜಸ್‌ ಮತ್ತು ರೆಸಾರ್ಟ್‌ನ ಅಧ್ಯಕ್ಷರಾಗಿರುವ ಅಪ್ಪಣ್ಣ, ಉದ್ಯಮಿ ಶರತ್‌ ಅವರಿಂದ 8 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಆದರೆ ಸಾಲವನ್ನು ವಾಪಸ್‌ ಕೊಟ್ಟಿರಲಿಲ್ಲ. ಪ್ರವೀಣ್‌ ಎಂಬಾತ ಕೂಡ ಇವರಿಗೆ ಪಾಲುದಾರಿಕೆಯಲ್ಲಿ ವಂಚನೆ ಮಾಡಿದ್ದ. ಒಂದೆಡೆ ಪಾಲುದಾರಿಕೆಯಲ್ಲಿ ವಂಚನೆ, ಮತ್ತೊಂದೆಡೆ ಸಾಲ ಪಡೆದ ಅಪ್ಪಣ್ಣನಿಂದಲೂ ವಂಚನೆ ಆರೋಪ ಕೇಳಿ ಬಂದಿತ್ತು . ಇದರಿಂದ ಬೇಸತ್ತು ಶರತ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.</p>
<p>ಪ್ರವೀಣ್ ನಡೆಸುತ್ತಿದ್ದ ಸ್ವದೇಶಿ ಎಂಬ ಸೋಲಾರ್ ಮತ್ತು ಯುಪಿಎಸ್ ಹಾಗೂ ಮನೆಯ ಇಂಟಿರಿಯರ್ಸ್ ಕಂಪನಿಯಲ್ಲಿ ಶರತ್‌ ಪಾಲುದಾರನಾಗಿದ್ದ. ಪ್ರವೀಣ್‌ ಶೇಕಡಾ 50% ರಷ್ಟು ಪಾಲುದಾರಿಕೆ ಮಾಡಿಕೊಂಡಿದ್ದ. ನಂತರ ಉದ್ಯಮದಲ್ಲಿ ಪಾರ್ಟನ್‌ಶಿಪ್‌ನಿಂದ ಶರತ್‌ನನ್ನ ತೆಗೆದು ಹಾಕಿ, 50 % ಹಣ ವಾಪಸ್ ನೀಡದೇ ವಂಚಿಸಿದ್ದ.</p>
<p><img decoding="async" class="aligncenter size-full wp-image-89495" src="https://www.justkannada.in/wp-content/uploads/2022/05/appanna-bjp.jpg" alt="" width="600" height="400" srcset="https://www.justkannada.in/wp-content/uploads/2022/05/appanna-bjp.jpg 600w, https://www.justkannada.in/wp-content/uploads/2022/05/appanna-bjp-300x200.jpg 300w" sizes="(max-width: 600px) 100vw, 600px" /></p>
<p>ಇದರಿಂದ ನೊಂದಿದ್ದ ಶರತ್‌ ಆಗಾಗ ಪತ್ನಿ ಕೃಪಾಲಿನಿ ಬಳಿ ನೋವನ್ನ ಹೇಳಿಕೊಳ್ಳುತ್ತಿದ್ದರು. ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ನಲ್ಲಿ ಪ್ರವೀಣ್ ಹಾಗೂ ಅಪ್ಪಣ್ಣ ಹೆಸರನ್ನು ಅವರು ಉಲ್ಲೇಖಿಸಿದ್ದು, ಇವರಿಬ್ಬರ ಮೇಲೂ ಕಾನೂನು ಕ್ರಮ ಜರುಗಿಸುವಂತೆ ಡೆತ್‌ನೋಟ್‌ನಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಎನ್.ಆರ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಶರತ್ ಪತ್ನಿ ಕೃಪಾಲಿನಿ ದೂರು ದಾಖಲಿಸಿದ್ದಾರೆ.</p>
<p>&nbsp;</p>
<p>key words : mysore-businessman-death-due-to-bjp-leader-appanna-bail-rejected</p>
<p>The post <a href="https://www.justkannada.in/mysore-businessman-death-due-to-bjp-leader-appanna-bail-rejected/">MYSORE NEWS : ನಿರೀಕ್ಷಣ ಜಾಮೀನು ಅರ್ಜಿ ವಜಾ. ಸಂಕಷ್ಟದಲ್ಲಿ ಬಿಜೆಪಿ ಮುಖಂಡ ಅಪ್ಪಣ್ಣ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
