<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>former President Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/former-president/feed/" rel="self" type="application/rss+xml" />
	<link>https://www.justkannada.in/tag/former-president/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 12 Aug 2026 06:26:32 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>former President Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/former-president/</link>
	<width>32</width>
	<height>32</height>
</image> 
	<item>
		<title>ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಆತ್ಮಕಥೆ ಬಿಡುಗಡೆ ಮಾಡಿದ ಪ್ರಧಾನಿ ಮೋದಿ</title>
		<link>https://www.justkannada.in/%e0%b2%ae%e0%b2%be%e0%b2%9c%e0%b2%bf-%e0%b2%b0%e0%b2%be%e0%b2%b7%e0%b3%8d%e0%b2%9f%e0%b3%8d%e0%b2%b0%e0%b2%aa%e0%b2%a4%e0%b2%bf-%e0%b2%b0%e0%b2%be%e0%b2%ae%e0%b3%8d%e0%b2%a8%e0%b2%be%e0%b2%a5/</link>
		
		<dc:creator><![CDATA[prashanth]]></dc:creator>
		<pubDate>Wed, 12 Aug 2026 06:26:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[autobiography]]></category>
		<category><![CDATA[former President]]></category>
		<category><![CDATA[PM Modi]]></category>
		<category><![CDATA[Ramnath Kovind]]></category>
		<category><![CDATA[released]]></category>
		<guid isPermaLink="false">https://www.justkannada.in/?p=158810</guid>

					<description><![CDATA[<p>ನವದೆಹಲಿ, ಆಗಸ್ಟ್,12,2026 (www.justkannada.in):  ದೇಶದ 14ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ರಾಮ್‌ ನಾಥ್ ಕೋವಿಂದ್ ಅವರ ಜೀವನಾಧಾರಿತ ಆತ್ಮಕಥೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು  ಬಿಡುಗಡೆ ಮಾಡಿದರು. ರಮನಾಥ್ ಕೋವಿಂದ್ ಅವರು 2017 ರಿಂದ 2022 ರವರೆಗೆ ಭಾರತದ 14ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ರಾಮ್‌ನಾಥ್ ಕೋವಿಂದ್ ಅವರ ಆತ್ಮಕಥೆ ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ,  ಕಾನ್‌ಪುರ ದೇಹತ್‌ ನ ಸಾಧಾರಣ ಕುಟುಂಬದಿಂದ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಏರಿದ ರಾಮ್‌ನಾಥ್ ಕೋವಿಂದ್ ಅವರ [&#8230;]</p>
<p>The post <a href="https://www.justkannada.in/%e0%b2%ae%e0%b2%be%e0%b2%9c%e0%b2%bf-%e0%b2%b0%e0%b2%be%e0%b2%b7%e0%b3%8d%e0%b2%9f%e0%b3%8d%e0%b2%b0%e0%b2%aa%e0%b2%a4%e0%b2%bf-%e0%b2%b0%e0%b2%be%e0%b2%ae%e0%b3%8d%e0%b2%a8%e0%b2%be%e0%b2%a5/">ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಆತ್ಮಕಥೆ ಬಿಡುಗಡೆ ಮಾಡಿದ ಪ್ರಧಾನಿ ಮೋದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ, ಆಗಸ್ಟ್,12,2026 (<a href="http://www.justkannada.in">www.justkannada.in</a>):</strong>  ದೇಶದ 14ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ರಾಮ್‌ ನಾಥ್ ಕೋವಿಂದ್ ಅವರ ಜೀವನಾಧಾರಿತ ಆತ್ಮಕಥೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು  ಬಿಡುಗಡೆ ಮಾಡಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ರಮನಾಥ್ ಕೋವಿಂದ್ ಅವರು 2017 ರಿಂದ 2022 ರವರೆಗೆ ಭಾರತದ 14ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ರಾಮ್‌ನಾಥ್ ಕೋವಿಂದ್ ಅವರ ಆತ್ಮಕಥೆ ಬಿಡುಗಡೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ,  ಕಾನ್‌ಪುರ ದೇಹತ್‌ ನ ಸಾಧಾರಣ ಕುಟುಂಬದಿಂದ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಏರಿದ ರಾಮ್‌ನಾಥ್ ಕೋವಿಂದ್ ಅವರ ಜೀವನ ಯಾನವು ಭಾರತದ ಯುವಜನತೆಗೆ ದೊಡ್ಡ ಪ್ರೇರಣೆಯಾಗಿದೆ.  ಕೋವಿಂದ್ ಜಿ ಅವರ ಜೀವನವನ್ನು ಒಮ್ಮೆ ಗಮನಿಸಿ. ಅವರು ಕಾನ್‌ಪುರ ದೇಹತ್‌ನ ತೀರಾ ಸಾಧಾರಣ ಕುಟುಂಬದಲ್ಲಿ ಜನಿಸಿದರು. ಅತ್ಯಂತ ಚಿಕ್ಕ ವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡರು. ಇಂತಹ ಆಘಾತಕಾರಿ ಘಟನೆಯಿಂದ ಯಾರು ಬೇಕಾದರೂ ಕುಗ್ಗಿಹೋಗಬಹುದು. ಆದರೆ, ಕೋವಿಂದ್ ಅವರು ಈ ನೋವಿನಿಂದಲೇ ಇನ್ನಷ್ಟು ಬಲಶಾಲಿಯಾಗಿ ಬೆಳೆದರು ಎಂದು ನುಡಿದರು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>“ಭಾರತದಂತಹ ಬೃಹತ್ ದೇಶದ ರಾಷ್ಟ್ರಪತಿಯಂತಹ ಅತ್ಯುನ್ನತ ಹುದ್ದೆಯಲ್ಲಿದ್ದರೂ, ಕೋವಿಂದ್ ಜಿ ಎಂದಿಗೂ ತಮ್ಮ ಮೂಲವನ್ನು ಮರೆಯಲಿಲ್ಲ, ಅತ್ಯಂತ ವಿನಮ್ರವಾಗಿ ಉಳಿದುಕೊಂಡರು ಎಂದು ಪ್ರಧಾನಿ ಮೋದಿ ಬಣ್ಣಿಸಿದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words:  PM Modi, released , autobiography, former President, Ramnath Kovind</p>
<p>The post <a href="https://www.justkannada.in/%e0%b2%ae%e0%b2%be%e0%b2%9c%e0%b2%bf-%e0%b2%b0%e0%b2%be%e0%b2%b7%e0%b3%8d%e0%b2%9f%e0%b3%8d%e0%b2%b0%e0%b2%aa%e0%b2%a4%e0%b2%bf-%e0%b2%b0%e0%b2%be%e0%b2%ae%e0%b3%8d%e0%b2%a8%e0%b2%be%e0%b2%a5/">ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಆತ್ಮಕಥೆ ಬಿಡುಗಡೆ ಮಾಡಿದ ಪ್ರಧಾನಿ ಮೋದಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆ: ಮುಡಾ ಮಾಜಿ ಅಧ್ಯಕ್ಷನ ವಿರುದ್ದ ಗಂಭೀರ ಆರೋಪ</title>
		<link>https://www.justkannada.in/muda-scam-account-848-sites-single-day-former-president/</link>
		
		<dc:creator><![CDATA[prashanth]]></dc:creator>
		<pubDate>Mon, 09 Sep 2024 05:39:17 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[848 sites]]></category>
		<category><![CDATA[account]]></category>
		<category><![CDATA[former President]]></category>
		<category><![CDATA[Muda scam]]></category>
		<category><![CDATA[single day]]></category>
		<guid isPermaLink="false">https://www.justkannada.in/?p=128971</guid>

					<description><![CDATA[<p>ಮೈಸೂರು,ಸೆಪ್ಟಂಬರ್,9,2024 (www.justkannada.in):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬಗೆದಷ್ಟು  ಬ್ರಹ್ಮಾಂಡ ಭ್ರಷ್ಟಾಚಾರದ  ಬಯಲಾಗುತ್ತಿದ್ದು, ಮುಡಾ ಮಾಜಿ ಆಯುಕ್ತರ ಬಳಿಕ ಇದೀಗ ಮುಡಾ ಮಾಜಿ ಅಧ್ಯಕ್ಷರ ಸರದಿ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಕಾನೂನು ಬಾಹಿರವಾಗಿ 14 ನಿವೇಶನ ಪಡೆದಿದ್ದಾರೆ ಎನ್ನಲಾದ ವಿಚಾರ ಇದೀಗ ಕೋರ್ಟ್ ಅಂಗಳದಲ್ಲಿದೆ. ಹೀಗಿರುವಾಗಲೇ ಮುಡಾ ಮಾಜಿ ಅಧ್ಯಕ್ಷನೇ ಕಾನೂನು ಬಾಹಿರವಾಗಿ ಒಂದೇ ದಿನ  ಬರೋಬ್ಬರಿ 848 ನಿವೇಶನಗಳನ್ನ ಖಾತೆ ಮಾಡಿಸಿಕೊಂಡಿರೋ ಆರೋಪ ಕೇಳಿಬಂದಿದೆ. ಹೌದು ಈ ಆರೋಪ ಕೇಳಿ ಬಂದಿರುವುದು ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ [&#8230;]</p>
<p>The post <a href="https://www.justkannada.in/muda-scam-account-848-sites-single-day-former-president/">ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆ: ಮುಡಾ ಮಾಜಿ ಅಧ್ಯಕ್ಷನ ವಿರುದ್ದ ಗಂಭೀರ ಆರೋಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,9,2024 (<a href="http://www.justkannada.in">www.justkannada.in</a>):</strong>  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬಗೆದಷ್ಟು  ಬ್ರಹ್ಮಾಂಡ ಭ್ರಷ್ಟಾಚಾರದ  ಬಯಲಾಗುತ್ತಿದ್ದು, ಮುಡಾ ಮಾಜಿ ಆಯುಕ್ತರ ಬಳಿಕ ಇದೀಗ ಮುಡಾ ಮಾಜಿ ಅಧ್ಯಕ್ಷರ ಸರದಿ ಶುರುವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಿಎಂ ಸಿದ್ದರಾಮಯ್ಯ ಕಾನೂನು ಬಾಹಿರವಾಗಿ 14 ನಿವೇಶನ ಪಡೆದಿದ್ದಾರೆ ಎನ್ನಲಾದ ವಿಚಾರ ಇದೀಗ ಕೋರ್ಟ್ ಅಂಗಳದಲ್ಲಿದೆ. ಹೀಗಿರುವಾಗಲೇ ಮುಡಾ ಮಾಜಿ ಅಧ್ಯಕ್ಷನೇ ಕಾನೂನು ಬಾಹಿರವಾಗಿ ಒಂದೇ ದಿನ  ಬರೋಬ್ಬರಿ 848 ನಿವೇಶನಗಳನ್ನ ಖಾತೆ ಮಾಡಿಸಿಕೊಂಡಿರೋ ಆರೋಪ ಕೇಳಿಬಂದಿದೆ.</p>
<p>ಹೌದು ಈ ಆರೋಪ ಕೇಳಿ ಬಂದಿರುವುದು ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್ ಮೇಲೆ. ಆಯುಕ್ತರ ಸರದಿ ಬಳಿಕ ಇದೀಗ ಮುಡಾ ಮಾಜಿ‌ ಅಧ್ಯಕ್ಷನೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿರೋದು ಬೆಳಕಿಗೆ ಬಂದಿದೆ.  ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆ ಮಾಡಿಸಿಕೊಂಡ ಆರೋಪ ಮುಡಾ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್ ಅವರ ಮೇಲೆ ಕೇಳಿ ಬಂದಿದೆ.</p>
<p>ಈ ಬಗ್ಗೆ 22-2-2022 ರಂದೇ ಸರ್ಕಾರದ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗೆ ಮುಡಾ ಆಯುಕ್ತ ಡಿ.ಬಿ. ನಟೇಶ್ ಪತ್ರ ಬರೆದಿದ್ದು ಇದೀಗ ಬೆಳಕಿಗೆ ಬಂದಿದೆ. ಮೈಸೂರು ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಹೆಚ್.ವಿ.ರಾಜೀವ್ ಅವರೇ ಅಧ್ಯಕ್ಷರಾಗಿದ್ದು, ಮೈಸೂರು ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘದಿಂದ ಕೇರ್ಗಳ್ಳಿ, ನಗರ್ತಳ್ಳಿ ಮತ್ತು ಬಲ್ಲಹಳ್ಳಿ ಗ್ರಾಮದ ಒಟ್ಟು 252  ಎಕರೆ 10 ಗುಂಟೆ ಪ್ರದೇಶದಲ್ಲಿ ಬಡವಾಣೆ ನಿರ್ಮಾಣ ಮಾಡಲಾಗಿತ್ತು.  ಬಡಾವಣೆ ಕೂಡ ನಗರಾಭಿವೃದ್ಧಿ ಪ್ರಾಧಿಕಾರದ 2018ರ ಆದೇಶದ ವಿರುದ್ಧವಾಗಿ ನಿರ್ಮಾಣವಾಗಿತ್ತು ಎನ್ನಲಾಗಿದೆ. ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ  ಮುಡಾ ಅಧ್ಯಕ್ಷರಾಗಿದ್ದ ಎಚ್.ವಿ ರಾಜೀವ್ ಅವರೇ ಅಧ್ಯಕ್ಷರಾಗಿದ್ದರು. 252 ಎಕರೆ ಜಾಗದ ಕೆಲವು ಸರ್ವೆ ನಂಬರ್ ಗಳ ವ್ಯಾಜ್ಯ ನ್ಯಾಯಾಲಯದಲ್ಲಿದ್ದರೂ ಕೂಡ ಸದರಿ ಬಡವಾಣೆಗಳ ನಿವೇಶನ ಹಕ್ಕುಗಳನ್ನ ವರ್ಗಾವಣೆ ಮಾಡಬಾರದೆಂದು‌ ಆದೇಶವಿದೆ.<img loading="lazy" decoding="async" class="aligncenter size-full wp-image-128973" src="https://www.justkannada.in/wp-content/uploads/2024/09/natesh.jpg" alt="" width="500" height="352" srcset="https://www.justkannada.in/wp-content/uploads/2024/09/natesh.jpg 500w, https://www.justkannada.in/wp-content/uploads/2024/09/natesh-300x211.jpg 300w, https://www.justkannada.in/wp-content/uploads/2024/09/natesh-150x106.jpg 150w, https://www.justkannada.in/wp-content/uploads/2024/09/natesh-100x70.jpg 100w" sizes="auto, (max-width: 500px) 100vw, 500px" /></p>
<p>ಹೀಗಿದ್ದರೂ ಕೂಡ 848 ನಿವೇಶನಗಳನ್ನ ಒಂದೇ ದಿನದಲ್ಲಿ‌ ಮುಡಾದಿಂದ ಬಿಡುಗಡೆಗೊಳಿಸಿ ಖಾತೆ ಮಾಡಿಸಿಕೊಂಡಿರುವ ಆರೋಪ ಎಚ್.ವಿ ರಾಜೀವ್ ಅವರ ಮೇಲೆ ಕೇಳಿ ಬಂದಿದೆ. ಅದಷ್ಟೇ ಅಲ್ಲದೆ ಆಯುಕ್ತರ ಅನುಮೊದನೆ ಇಲ್ಲದಿದ್ದರು ನಿವೇಶನಗಳನ್ನ ರಾಜೀವ್ ಬಿಡುಗಡೆ ಗೊಳಿಸಿದ್ದಾರೆ.‌</p>
<p>ಈ ಬಗ್ಗೆ ಸರ್ಕಾರಕ್ಕೆ 16-02-2022 ಹಾಗೂ 22-02-2022 ರಂದು ಎರಡೆರಡು ಬಾರಿ ಅಂದಿನ ಮುಡಾ ಆಯುಕ್ತ ನಟೇಶ್  ಪತ್ರ ಬರೆದರೂ ಕೂಡ ತಮ್ಮ ಕೊಠಡಿಯಲ್ಲಿಯೇ ಕಡತಗಳನ್ನು ಇಟ್ಟುಕೊಂಡಿದ್ದರು ಅನ್ನೋದು ಬೆಳಕಿಗೆ ಬಂದಿದೆ. ಆಯುಕ್ತ ಡಿ.ಬಿ.‌ನಟೇಶ್ ಮಾಹಿತಿ ಹಕ್ಕಿನ ಅಡಿಯಲ್ಲಿ ಹಲವರು ಅರ್ಜಿ ಸಲ್ಲಿಸಿದ್ದಾರೆ ಹೀಗಾಗಿ ಕಡತಗಳನ್ನು ಕೊಡಿ ಎಂದು ಕೇಳಿಕೊಂಡರೂ ಕಡತ ನೀಡಿಲ್ಲ.‌</p>
<p>ಇನ್ನೂ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಗರಾಭಿವೃದ್ಧಿ ಸಚಿವ ಭೈರತಿ  ಸುರೇಶ್,  ಮುಡಾ ಮಾಜಿ ಅಧ್ಯಕ್ಷ 848 ನಿವೇಶನ ಪಡೆದ ವಿಚಾರ ನನಗೆ ಗೊತ್ತಿಲ್ಲ, ರಾಜೀವ ನಿವೇಶನ ತಗೊಂಡಿದ್ದಾರಾ ಅದು ಗೊತ್ತಿಲ್ಲ, ಪಿ.ಎನ್ ದೇಸಾಯಿ ತನಿಖೆ ನಡೆಸುತ್ತಿದ್ದಾರೆ ಹೀಗಾಗಿ ಮುಡಾದ ಯಾವ ವಿಚಾರದಲ್ಲಿ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದಿದ್ದಾರೆ.</p>
<p>ಒಟ್ಟಿನಲ್ಲಿ, ಸಿಎಂ ಸಿದ್ದರಾಮಯ್ಯ ಅವರ 14 ನಿವೇಶನ ಕೇಸ್ ಕೋರ್ಟ್ ಅಂಗಳದಲ್ಲಿ ಇರೋವಾಗಲೇ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಮೇಲೆ ಕೇಳಿ ಬಂದಿರೋ ಆರೋಪಕ್ಕೆ ತನಿಖೆ ನಡೆಸುವ ಮೂಲಕ ಸತ್ಯಾಸತ್ಯತೆ ಹೊರಬರಬೇಕಿದೆ.</p>
<p>Key words: muda scam,  Account, 848 sites, single day, former president</p>
<p>The post <a href="https://www.justkannada.in/muda-scam-account-848-sites-single-day-former-president/">ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆ: ಮುಡಾ ಮಾಜಿ ಅಧ್ಯಕ್ಷನ ವಿರುದ್ದ ಗಂಭೀರ ಆರೋಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ದಸರಾ ಸಾಂಪ್ರದಾಯಿಕವಾಗಷ್ಟೇ ಆಚರಿಸಿ-ಸಿಎಂಗೆ ಪತ್ರ ಬರೆದು ಸುಧಾಕರ್  ಎಸ್  ಶೆಟ್ಟಿ ಮನವಿ&#8230;</title>
		<link>https://www.justkannada.in/mysore-dasara-2020-traditional-dasara-fkcci-former-president-sudhakar-s-shetty/</link>
		
		<dc:creator><![CDATA[JK Desk]]></dc:creator>
		<pubDate>Sun, 11 Oct 2020 08:44:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[FKCCI]]></category>
		<category><![CDATA[former President]]></category>
		<category><![CDATA[mysore dasara-2020-traditional dasara]]></category>
		<category><![CDATA[Sudhakar S Shetty]]></category>
		<guid isPermaLink="false">https://www.justkannada.in/?p=41112</guid>

					<description><![CDATA[<p>ಮೈಸೂರು,ಅಕ್ಟೋಬರ್,11,2020(www.justkannada.in):   ರಾಜ್ಯದಲ್ಲಿ ಕೊರೋನಾ ಹರಡುತ್ತಿರುವ ಹಿನ್ನೆಲೆ ಈ ಬಾರಿ ಮೈಸೂರು ದಸರಾ ಮಹೋತ್ಸವವನ್ನ ಸಾಂಪ್ರದಾಯಿಕವಾಗಷ್ಟೇ ಆಚರಿಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI)  ಮಾಜಿ ಅಧ್ಯಕ್ಷ ಸುಧಾಕರ್  ಎಸ್  ಶೆಟ್ಟಿ ಮನವಿ ಮಾಡಿದ್ದಾರೆ. ಈ ಕುರಿತು ಸಿಎಂಗೆ ಪತ್ರ ಬರೆದಿರುವ ಎಫ್ ಕೆಸಿಸಿಐ ಮಾಜಿ ಅಧ್ಯಕ್ಷ ಸುಧಾಕರ್  ಎಸ್  ಶೆಟ್ಟಿ,  ಮೈಸೂರು  ನಗರವು ಪ್ರವಾಸಿ  ಕೇಂದ್ರವಾಗಿದ್ದು  ಪ್ರತಿ ವರ್ಷವೂ ಸುಮಾರು 60 ಲಕ್ಷ ಪ್ರವಾಸಿಗರು  ಮೈಸೂರಿಗೆ ಬಂದು ಮೈಸೂರಿನ  ಪ್ರವಾಸಿ ತಾಣಗಳಿಗೆ  ಭೇಟಿ ನೀಡುತ್ತಿದ್ದರು.ಅದರಲ್ಲೂ ದಸರಾ [&#8230;]</p>
<p>The post <a href="https://www.justkannada.in/mysore-dasara-2020-traditional-dasara-fkcci-former-president-sudhakar-s-shetty/">ಮೈಸೂರು ದಸರಾ ಸಾಂಪ್ರದಾಯಿಕವಾಗಷ್ಟೇ ಆಚರಿಸಿ-ಸಿಎಂಗೆ ಪತ್ರ ಬರೆದು ಸುಧಾಕರ್  ಎಸ್  ಶೆಟ್ಟಿ ಮನವಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,11,2020(<a href="https://www.justkannada.in">www.justkannada.in</a>): </strong>  ರಾಜ್ಯದಲ್ಲಿ ಕೊರೋನಾ ಹರಡುತ್ತಿರುವ ಹಿನ್ನೆಲೆ ಈ ಬಾರಿ ಮೈಸೂರು ದಸರಾ ಮಹೋತ್ಸವವನ್ನ ಸಾಂಪ್ರದಾಯಿಕವಾಗಷ್ಟೇ ಆಚರಿಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI)  ಮಾಜಿ ಅಧ್ಯಕ್ಷ ಸುಧಾಕರ್  ಎಸ್  ಶೆಟ್ಟಿ ಮನವಿ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಈ ಕುರಿತು ಸಿಎಂಗೆ ಪತ್ರ ಬರೆದಿರುವ ಎಫ್ ಕೆಸಿಸಿಐ ಮಾಜಿ ಅಧ್ಯಕ್ಷ ಸುಧಾಕರ್  ಎಸ್  ಶೆಟ್ಟಿ,  ಮೈಸೂರು  ನಗರವು ಪ್ರವಾಸಿ  ಕೇಂದ್ರವಾಗಿದ್ದು  ಪ್ರತಿ ವರ್ಷವೂ ಸುಮಾರು 60 ಲಕ್ಷ ಪ್ರವಾಸಿಗರು  ಮೈಸೂರಿಗೆ ಬಂದು ಮೈಸೂರಿನ  ಪ್ರವಾಸಿ ತಾಣಗಳಿಗೆ  ಭೇಟಿ ನೀಡುತ್ತಿದ್ದರು.ಅದರಲ್ಲೂ ದಸರಾ ಹಬ್ಬವು ಹೊರದೇಶದ ಪ್ರವಾಸಿಗರು ಹಾಗೂ ಮೈಸರಿನ ಸುತ್ತಮುತ್ತಲಿನ ಗ್ರಾಮದ ಜಿಲ್ಲೆಗಳ ಜನರನ್ನು ಆಕರ್ಷಿಸುವ ನಾಡಹಬ್ಬ.ದುರದೃಷ್ಟವಶಾತ್ ಕರೋನವೈರಸ್ ಪ್ರಪಂಚದಾದ್ಯಂತ ಬರಸಿಡಿಲಿನಂತೆ ಬಡಿದು ಪ್ರಪಂಚ ಮತ್ತು ಭಾರತ ದೇಶದ ಜನರನ್ನು ಅಲ್ಲೋಲ ಕಲ್ಲೋಲವಾಗಿಸಿದೆ.</p>
<p>ಇಂದು ಮೈಸೂರು ನಗರವು ಕರ್ನಾಟಕದಲ್ಲಿ ಅತಿ ಹೆಚ್ಚಿನ ಕರೋನವೈರಸ್ ರೋಗಿಗಳನ್ನು ಹೊಂದಿರುವ ಎರಡನೇ ನಗರವಾಗಿದೆ. ಪ್ರತಿನಿತ್ಯವೂ  ಸರಾಸರಿ 300 ರಿಂದ 1500 ರವರೆಗೆ ಕರೋನವೈರಸ್ ಸಾಮಾನ್ಯ ಜನಗಳ ಜೀವವನ್ನು ಪ್ರವೇಶಿತ್ತಿದೆ.ಅದರಲ್ಲೂ ದಸರಾ ಹಬ್ಬವೇನಾದರೂ ನಡೆದರೆ ಸಾಮಾಜಿಕ ಅಂತರವಾಗಲಿ, ಮಾಸ್ಕ್ ಧರಿಸುವುದುದನ್ನಾಗಲಿ, ಸ್ವಚ್ಛತೆನ್ನಾಗಲಿ ಕಾಪಾಡಿಕೊಳ್ಳುವುದು ಖಂಡಿತ ದುಸ್ತರ .ಈ ಸಮಯದಲ್ಲಿ ದಸರಾ ಎನ್ನುವುದು  ಕರೋನಾ ಹರಡುವ ಹಬ್ಬವಾಗದಂತೆ ಹಾಗೂ ಮೈಸೂರು ಜಿಲ್ಲೆಯ ಜನರನ್ನು ಮಹಾಮಾರಿಯಿಂದ ಕಾಪಾಡುವಲ್ಲಿ ಸರ್ಕಾರವು ಈ ವರ್ಷ ಮೈಸೂರು ದಸರಾ ಹಬ್ಬವನ್ನು ಆಚರಿಸದೇ ಇರುವುದು ಸೂಕ್ತ ಎಂದು ಸುಧಾಕರ್  ಎಸ್  ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-medium wp-image-41113" src="https://www.justkannada.in/wp-content/uploads/2020/10/dasara-300x225.png" alt="mysore-dasara-2020-traditional-dasara-fkcci-former-president-sudhakar-s-shetty" width="300" height="225" /></p>
<p>ಶಾಸ್ತ್ರ ಸಂಪ್ರದಾಯಗಳಂತೆ ದಸರಾ ಹಬ್ಬವು ಕೇವಲ ಅರಮನೆಯ ಆವರಣದೊಳಗೆ  ನಡೆಯಲಿ ಯಾರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸದೇ ಇದ್ದರೆ ಜನರ ಆರೋಗ್ಯಕ್ಕೆ ಸರ್ಕಾರವು ನೀಡುವ ಬಹುದೊಡ್ಡ ಕೊಡುಗೆ ಯಾಗುವುದು. ಈ ಎಲ್ಲಾ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ದಸರಾ ಮಹೋತ್ಸವವನ್ನು ಸಾಂಪ್ರದಾಯಿಕವಾಗಷ್ಟೇ ಆಚರಿಸಬೇಕು ಎಂದು ಸುಧಾಕರ್  ಎಸ್  ಶೆಟ್ಟಿ ಮನವಿ ಮಾಡಿದ್ದಾರೆ.</p>
<p>Key words: mysore dasara-2020-traditional dasara- FKCCI<strong>&#8211; </strong>former president<strong>&#8211;</strong>Sudhakar S Shetty</p>
<p>The post <a href="https://www.justkannada.in/mysore-dasara-2020-traditional-dasara-fkcci-former-president-sudhakar-s-shetty/">ಮೈಸೂರು ದಸರಾ ಸಾಂಪ್ರದಾಯಿಕವಾಗಷ್ಟೇ ಆಚರಿಸಿ-ಸಿಎಂಗೆ ಪತ್ರ ಬರೆದು ಸುಧಾಕರ್  ಎಸ್  ಶೆಟ್ಟಿ ಮನವಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಮತ್ತಷ್ಟು ಕ್ಷೀಣ..</title>
		<link>https://www.justkannada.in/former-president-pranab-mukherjee-health-condition/</link>
		
		<dc:creator><![CDATA[JK Desk]]></dc:creator>
		<pubDate>Mon, 24 Aug 2020 04:58:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Condition]]></category>
		<category><![CDATA[former President]]></category>
		<category><![CDATA[Health]]></category>
		<category><![CDATA[Pranab Mukherjee]]></category>
		<guid isPermaLink="false">https://www.justkannada.in/?p=35636</guid>

					<description><![CDATA[<p>ನವದೆಹಲಿ,ಆ,24,2020(www.justkannada.in): ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎಂದು ಆರ್ ಅಂಡ್ ಆರ್ ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ. ಆಸ್ಪತ್ರೆಯ ಆಡಳಿತ ಮಂಡಳಿಯು ಪ್ರಣಬ್ ಮುಖರ್ಜಿ ಅವರ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು,  ಕೊರೋನಾ ಸೋಂಕಿಗೆ ತುತ್ತಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕೆಲವು ದಿನಗಳ ಹಿಂದೆ ಮೆದುಳು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದರಿಂದ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, [&#8230;]</p>
<p>The post <a href="https://www.justkannada.in/former-president-pranab-mukherjee-health-condition/">ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಮತ್ತಷ್ಟು ಕ್ಷೀಣ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ನವದೆಹಲಿ,ಆ,24,2020(<a href="https://www.justkannada.in">www.justkannada.in</a>): ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎಂದು ಆರ್ ಅಂಡ್ ಆರ್ ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಆಸ್ಪತ್ರೆಯ ಆಡಳಿತ ಮಂಡಳಿಯು ಪ್ರಣಬ್ ಮುಖರ್ಜಿ ಅವರ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು,  ಕೊರೋನಾ ಸೋಂಕಿಗೆ ತುತ್ತಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕೆಲವು ದಿನಗಳ ಹಿಂದೆ ಮೆದುಳು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದರಿಂದ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಇದೀಗ ಮುಖರ್ಜಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎಂದು ಮಾಹಿತಿ ನೀಡಿದೆ.<img loading="lazy" decoding="async" class="aligncenter size-medium wp-image-35637" src="https://www.justkannada.in/wp-content/uploads/2020/08/asd-300x185.png" alt=" Former President -Pranab Mukherjee- health- condition" width="300" height="185" /></p>
<p>&#8216;ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸುಧಾರಣೆಯಾಗಿಲ್ಲ&#8217;. ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡ ನಂತರ ಅವರು ದೀರ್ಘ ಕೋಮಾ ಸ್ಥಿತಿಯಲ್ಲಿದ್ದಾರೆ&#8217; ಎಂದು  ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿದೆ.</p>
<p>Key words: Former President -Pranab Mukherjee- health- condition</p>
<p>The post <a href="https://www.justkannada.in/former-president-pranab-mukherjee-health-condition/">ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಮತ್ತಷ್ಟು ಕ್ಷೀಣ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊಳವೆ ಬಾವಿ ವಿಚಾರಕ್ಕೆ ಮಾಜಿ ಗ್ರಾ.ಪಂ ಅಧ್ಯಕ್ಷ ಮತ್ತು ಸಹೋದರನಿಂದ ದಲಿತರ ಮೇಲೆ ಹಲ್ಲೆ&#8230;.</title>
		<link>https://www.justkannada.in/tumakur-dalit-attack-gram-panchayath-former-president/</link>
		
		<dc:creator><![CDATA[JK Desk]]></dc:creator>
		<pubDate>Mon, 15 Jun 2020 07:07:10 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[attack]]></category>
		<category><![CDATA[Dalit]]></category>
		<category><![CDATA[former President]]></category>
		<category><![CDATA[gram panchayath]]></category>
		<category><![CDATA[tumakur]]></category>
		<guid isPermaLink="false">https://www.justkannada.in/?p=29785</guid>

					<description><![CDATA[<p>ತುಮಕೂರು,ಜೂ,15,2020(www.justkannada.in): ಕೊಳವೆ ಬಾವಿ ವಿಚಾರಕ್ಕೆ  ಸಂಬಂಧಿಸಿದಂತೆ ದಲಿತರ ಮೇಲೆ ಹಲ್ಲೆ ನಡೆದಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿಯ ತಿಪ್ಪಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹನುಮಂತರಾಯಪ್ಪ ಎಂಬುವರ   ಮೇಲೆ ಮಾಜಿ ಗ್ರಾ.ಪಂ.ಅಧ್ಯಕ್ಷ ನರಸಿಂಹಮೂರ್ತಿ ಹಾಗೂ ಸಹೋದರ ಅಶ್ವಥ್ ಎಂಬುವವರಿಂದ ಹಲ್ಲೆ ನಡೆದಿದ್ದು ಹಲ್ಲೆಗೊಳಗಾದ ಹನುಮಂತರಾಯಪ್ಪ ಅವರ ಕೈ ಮುರಿದಿದೆ. ದಲಿತರಿಗೆ ಕೊಳವೆ ಬಾವಿಯಲ್ಲಿ ನೀರು ಸಿಕ್ಕಿದ್ದಕ್ಕೆ ಸವರ್ಣಿಯರು ಆಕ್ರೋಶ ವ್ಯಕ್ತಪಡಿಸಿದ್ದು ದಲಿತರು ಕೊರೆಸಿದ ಕೊಳವೆ ಬಾವಿಯಿಂದ ತಮ್ಮ ಬೋರ್ ನಲ್ಲಿ ನೀರು ಕಡಿಮೆಯಾಗುತ್ತದೆ [&#8230;]</p>
<p>The post <a href="https://www.justkannada.in/tumakur-dalit-attack-gram-panchayath-former-president/">ಕೊಳವೆ ಬಾವಿ ವಿಚಾರಕ್ಕೆ ಮಾಜಿ ಗ್ರಾ.ಪಂ ಅಧ್ಯಕ್ಷ ಮತ್ತು ಸಹೋದರನಿಂದ ದಲಿತರ ಮೇಲೆ ಹಲ್ಲೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ತುಮಕೂರು,ಜೂ,15,2020(<a href="https://www.justkannada.in">www.justkannada.in</a>): ಕೊಳವೆ ಬಾವಿ ವಿಚಾರಕ್ಕೆ  ಸಂಬಂಧಿಸಿದಂತೆ ದಲಿತರ ಮೇಲೆ ಹಲ್ಲೆ ನಡೆದಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.</p>
<p>ತುಮಕೂರು ಜಿಲ್ಲೆ ಮಧುಗಿರಿಯ ತಿಪ್ಪಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹನುಮಂತರಾಯಪ್ಪ ಎಂಬುವರ   ಮೇಲೆ ಮಾಜಿ ಗ್ರಾ.ಪಂ.ಅಧ್ಯಕ್ಷ ನರಸಿಂಹಮೂರ್ತಿ ಹಾಗೂ ಸಹೋದರ ಅಶ್ವಥ್ ಎಂಬುವವರಿಂದ ಹಲ್ಲೆ ನಡೆದಿದ್ದು ಹಲ್ಲೆಗೊಳಗಾದ ಹನುಮಂತರಾಯಪ್ಪ ಅವರ ಕೈ ಮುರಿದಿದೆ.</p>
<p>ದಲಿತರಿಗೆ ಕೊಳವೆ ಬಾವಿಯಲ್ಲಿ ನೀರು ಸಿಕ್ಕಿದ್ದಕ್ಕೆ ಸವರ್ಣಿಯರು ಆಕ್ರೋಶ ವ್ಯಕ್ತಪಡಿಸಿದ್ದು ದಲಿತರು ಕೊರೆಸಿದ ಕೊಳವೆ ಬಾವಿಯಿಂದ ತಮ್ಮ ಬೋರ್ ನಲ್ಲಿ ನೀರು ಕಡಿಮೆಯಾಗುತ್ತದೆ ಎಂದು ಆವೇಶಗೊಂಡು ತಡರಾತ್ರಿ ದಲಿತರ ಮೇಲೆ ಜಗಳ ನಡೆಸಿದ್ದಾರೆ ಎನ್ನಲಾಗಿದೆ. <img loading="lazy" decoding="async" class="aligncenter size-medium wp-image-29786" src="https://www.justkannada.in/wp-content/uploads/2020/06/attack-225x300.jpg" alt="tumakur-dalit-attack-gram-panchayath-former-president" width="225" height="300" /></p>
<p>ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಹನುಮಂತರಾಯಪ್ಪ ಎಂಬುವವರ ಮೇಲೆ ಮಾಜಿ ಗ್ರಾ.ಪಂ.ಅಧ್ಯಕ್ಷ ನರಸಿಂಹಮೂರ್ತಿ ಹಾಗೂ ಸಹೋದರ ಅಶ್ವಥ್  ರಾಡ್ ನಿಂದ ಹಲ್ಲೆ ನಡೆಸಿದ್ದಾರೆ.  ಇದರಿಂದಾಗಿ ಹನುಮಂತರಾಯಪ್ಪ ಅವರ ಕೈ ಮೂಳೆ ಹಾಗೂ ಕಾಲಿನ ತೊಡೆಗೆ ತೀವ್ರ ಗಾಯವಾಗಿದ್ದು ತೀವ್ರ ರಕ್ತಸ್ರಾವವಾದ ಕಾರಣ ರಾತ್ರಿಯೇ ತುಮಕೂರು ಜಿಲ್ಲಾಸ್ಪತ್ರೆಗೆ ವೃದ್ಧ ಹನುಮಂತಪ್ಪಅವರನ್ನ ರವಾನೆ ಮಾಡಲಾಗಿದೆ.</p>
<p>ಮಧುಗಿರಿಯಲ್ಲಿ ಇತ್ತೀಚೆಗೆ ದಲಿತರ ಮೇಲೆ ದೌರ್ಜನ್ಯ ಹೆಚ್ಚುತ್ತಿದ್ದು ಹೀಗಾಗಿ ಹಲ್ಲೆ ಮಾಡಿದವರನ್ನು ಬಂಧಿಸಬೇಕೆಂದು ದಲಿತ ಸಂಘಟನೆಗಳು ಒತ್ತಾಯ ಮಾಡಿವೆ. ಮಿಡಿಗೇಶಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.</p>
<p>Key words: tumakur- Dalit- attack –gram panchayath -former president</p>
<p>The post <a href="https://www.justkannada.in/tumakur-dalit-attack-gram-panchayath-former-president/">ಕೊಳವೆ ಬಾವಿ ವಿಚಾರಕ್ಕೆ ಮಾಜಿ ಗ್ರಾ.ಪಂ ಅಧ್ಯಕ್ಷ ಮತ್ತು ಸಹೋದರನಿಂದ ದಲಿತರ ಮೇಲೆ ಹಲ್ಲೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಗೆ ಗಲ್ಲುಶಿಕ್ಷೆ: ಪಾಕ್ ವಿಶೇಷ ಕೋರ್ಟ್ ತೀರ್ಪು&#8230;</title>
		<link>https://www.justkannada.in/pakistani-former-president-pervez-musharraf-sentenced-to-death/</link>
		
		<dc:creator><![CDATA[JK Desk]]></dc:creator>
		<pubDate>Tue, 17 Dec 2019 07:45:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[former President]]></category>
		<category><![CDATA[Pakistani]]></category>
		<category><![CDATA[Pervez Musharraf]]></category>
		<category><![CDATA[sentenced to death]]></category>
		<guid isPermaLink="false">https://www.justkannada.in/?p=18892</guid>

					<description><![CDATA[<p>ಲಾಹೋರ್,ಡಿ,17,2019(www.justkannada.in):  ದೇಶದ್ರೋಹ ಪ್ರಕರಣದಡಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಗೆ ಗಲ್ಲುಶಿಕ್ಷೆ ವಿಧಿಸಿ ಪಾಕಿಸ್ಥಾನ ವಿಶೇಷ ಕೋರ್ಟ್ ತೀರ್ಪು ನೀಡಿದೆ. 2007ರಲ್ಲಿ ಪಾಕ್ ಅಧ್ಯಕ್ಷರಾಗಿದ್ದ ಪರ್ವೇಜ್ ಮುಷರಫ್‌ ಅಂದು ಪಾಕ್ ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ನಂತರ ಬಂದ ನವಾಜ್‌ ಷರೀಫ್‌ ನೇತೃತ್ವದ ಸರ್ಕಾರ, ಮುಷರಫ್‌ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ 2013ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. ಈ ಸಂಬಂಧ ಇದೀಗ ಪಾಕಿಸ್ತಾನದ ಮಾಜಿ ಅಧ್ಯಕ್ಷ ಜ.ಪರ್ವೇಜ್ ಮುಷರಫ್ ಗೆ ಪಾಕ್ ವಿಶೇಷ ಕೋರ್ಟ್ [&#8230;]</p>
<p>The post <a href="https://www.justkannada.in/pakistani-former-president-pervez-musharraf-sentenced-to-death/">ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಗೆ ಗಲ್ಲುಶಿಕ್ಷೆ: ಪಾಕ್ ವಿಶೇಷ ಕೋರ್ಟ್ ತೀರ್ಪು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಲಾಹೋರ್,ಡಿ,17,2019(<a href="https://www.justkannada.in">www.justkannada.in</a>):  ದೇಶದ್ರೋಹ ಪ್ರಕರಣದಡಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಗೆ ಗಲ್ಲುಶಿಕ್ಷೆ ವಿಧಿಸಿ ಪಾಕಿಸ್ಥಾನ ವಿಶೇಷ ಕೋರ್ಟ್ ತೀರ್ಪು ನೀಡಿದೆ.</p>
<p>2007ರಲ್ಲಿ ಪಾಕ್ ಅಧ್ಯಕ್ಷರಾಗಿದ್ದ ಪರ್ವೇಜ್ ಮುಷರಫ್‌ ಅಂದು ಪಾಕ್ ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ನಂತರ ಬಂದ ನವಾಜ್‌ ಷರೀಫ್‌ ನೇತೃತ್ವದ ಸರ್ಕಾರ, ಮುಷರಫ್‌ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ 2013ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. ಈ ಸಂಬಂಧ ಇದೀಗ ಪಾಕಿಸ್ತಾನದ ಮಾಜಿ ಅಧ್ಯಕ್ಷ ಜ.ಪರ್ವೇಜ್ ಮುಷರಫ್ ಗೆ ಪಾಕ್ ವಿಶೇಷ ಕೋರ್ಟ್   ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.</p>
<p>2016ರರಲ್ಲೇ ಪರ್ವೇಜ್ ಮುಷರಫ್ ಪಾಕಿಸ್ತಾನ ಬಿಟ್ಟಿದ್ದು ಇದೀಗ ದುಬೈನಲ್ಲಿ ವಾಸವಿದ್ದಾರೆ ಎಂದು ಹೇಳಲಾಗುತ್ತಿದೆ.</p>
<p>Key words: Pakistani-former President- Pervez Musharraf -sentenced to death</p>
<p>The post <a href="https://www.justkannada.in/pakistani-former-president-pervez-musharraf-sentenced-to-death/">ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಗೆ ಗಲ್ಲುಶಿಕ್ಷೆ: ಪಾಕ್ ವಿಶೇಷ ಕೋರ್ಟ್ ತೀರ್ಪು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
