<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>GIM Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/gim/feed/" rel="self" type="application/rss+xml" />
	<link>https://www.justkannada.in/tag/gim/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 12 Feb 2025 08:02:47 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>GIM Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/gim/</link>
	<width>32</width>
	<height>32</height>
</image> 
	<item>
		<title>&#8216;ಸೆಮಿಕಂಡಕ್ಟರ್ ಲಾಭ ನಮ್ಮದಾಗಲು ಗುಣಮಟ್ಟದ ಶಿಕ್ಷಣ, ಸಂಶೋಧನೆಯೇ ಆಧಾರ’</title>
		<link>https://www.justkannada.in/semiconductorgim/</link>
		
		<dc:creator><![CDATA[mahesh]]></dc:creator>
		<pubDate>Wed, 12 Feb 2025 08:02:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[SCIENCE & TECHNOLOGY]]></category>
		<category><![CDATA[Sponsored Content]]></category>
		<category><![CDATA[GIM]]></category>
		<category><![CDATA[profits]]></category>
		<category><![CDATA[Quality Education]]></category>
		<category><![CDATA[Research]]></category>
		<category><![CDATA[semiconductor]]></category>
		<guid isPermaLink="false">https://www.justkannada.in/?p=136255</guid>

					<description><![CDATA[<p>&#160; ಬೆಂಗಳೂರು, ಫೆ.೧೨, ೨೦೨೫: `ನಾವು ಸೆಮಿಕಂಡಕ್ಟರ್ ಕ್ಷೇತ್ರದ ಸಹಿತ ಎಲ್ಲಾ ಕೈಗಾರಿಕಾ ವಲಯಗಳಿಗೆ ಸಂಬಂಧಿಸಿದಂತೆ  ಬರೀ ಬಂಡವಾಳ ಆಕರ್ಷಿಸುವ ಬಗ್ಗೆ ಮಾತನಾಡುತ್ತಿರುತ್ತೇವೆ. ಆದರೆ, ವಾಸ್ತವವಾಗಿ ನಾವು ಪ್ರತಿಭೆ ಮತ್ತು ಸಾಮರ್ಥ್ಯ ಎರಡನ್ನೂ ಸೃಷ್ಟಿಸುವ ಜರೂರಿದೆ. ಇದು ಸಾಧ್ಯವಾದರೆ, ಬಂಡವಾಳದ ಹರಿವು ತನ್ನಿಂತಾನೇ ಆಗುತ್ತದೆ.’ ಇದು ಜಾಗತಿಕ ಹೂಡಿಕದಾರರ ಸಮಾವೇಶದಲ್ಲಿ ಬುಧವಾರ ನಡೆದ `ಸೆಮಿಕಂಡಕ್ಟರ್ ಕ್ರಾಂತಿಯಲ್ಲಿ ಭಾರತದ ನಾಯಕತ್ವದ ಸರದಿ’ ಕುರಿತು ನಡೆದ ಗೋಷ್ಠಿಯಲ್ಲಿ ಮಾತನಾಡಿದ ಉದ್ಯಮ ಪರಿಣತರಾದ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸಿಇಒ ಸಂತೋಷಕುಮಾರ್, ಎನ್ಎಕ್ಸ್ ಪಿ [&#8230;]</p>
<p>The post <a href="https://www.justkannada.in/semiconductorgim/">&#8216;ಸೆಮಿಕಂಡಕ್ಟರ್ ಲಾಭ ನಮ್ಮದಾಗಲು ಗುಣಮಟ್ಟದ ಶಿಕ್ಷಣ, ಸಂಶೋಧನೆಯೇ ಆಧಾರ’</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p><img fetchpriority="high" decoding="async" class="alignnone size-full wp-image-129610" src="https://www.justkannada.in/wp-content/uploads/2024/09/TOP-BANNER-01.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-01.png 730w, https://www.justkannada.in/wp-content/uploads/2024/09/TOP-BANNER-01-600x74.png 600w, https://www.justkannada.in/wp-content/uploads/2024/09/TOP-BANNER-01-300x37.png 300w, https://www.justkannada.in/wp-content/uploads/2024/09/TOP-BANNER-01-150x18.png 150w, https://www.justkannada.in/wp-content/uploads/2024/09/TOP-BANNER-01-696x86.png 696w" sizes="(max-width: 730px) 100vw, 730px" /></p>
<p>ಬೆಂಗಳೂರು, ಫೆ.೧೨, ೨೦೨೫: `ನಾವು ಸೆಮಿಕಂಡಕ್ಟರ್ ಕ್ಷೇತ್ರದ ಸಹಿತ ಎಲ್ಲಾ ಕೈಗಾರಿಕಾ ವಲಯಗಳಿಗೆ ಸಂಬಂಧಿಸಿದಂತೆ  ಬರೀ ಬಂಡವಾಳ ಆಕರ್ಷಿಸುವ ಬಗ್ಗೆ ಮಾತನಾಡುತ್ತಿರುತ್ತೇವೆ. ಆದರೆ, ವಾಸ್ತವವಾಗಿ ನಾವು ಪ್ರತಿಭೆ ಮತ್ತು ಸಾಮರ್ಥ್ಯ ಎರಡನ್ನೂ ಸೃಷ್ಟಿಸುವ ಜರೂರಿದೆ. ಇದು ಸಾಧ್ಯವಾದರೆ, ಬಂಡವಾಳದ ಹರಿವು ತನ್ನಿಂತಾನೇ ಆಗುತ್ತದೆ.’</p>
<p>ಇದು ಜಾಗತಿಕ ಹೂಡಿಕದಾರರ ಸಮಾವೇಶದಲ್ಲಿ ಬುಧವಾರ ನಡೆದ `ಸೆಮಿಕಂಡಕ್ಟರ್ ಕ್ರಾಂತಿಯಲ್ಲಿ ಭಾರತದ ನಾಯಕತ್ವದ ಸರದಿ’ ಕುರಿತು ನಡೆದ ಗೋಷ್ಠಿಯಲ್ಲಿ ಮಾತನಾಡಿದ ಉದ್ಯಮ ಪರಿಣತರಾದ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸಿಇಒ ಸಂತೋಷಕುಮಾರ್, ಎನ್ಎಕ್ಸ್ ಪಿ ಸೆಮಿಕಂಡಕ್ಟರ್ಸ್ ಉಪಾಧ್ಯಕ್ಷ ಹಿತೇಂದ್ರ ಗಾರ್ಗ್ ಮತ್ತು ಗ್ಲೋಬಲ್ ಫ್ಯಾಬ್ ಎಂಜಿನಿಯರಿಂಗ್ ಸೊಲ್ಯೂಷನ್ಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಜಿತೇಂದ್ರ ಛಡ್ಡಾ ಒಕ್ಕೊರಲಿನಿಂದ ವ್ಯಕ್ತಪಡಿಸಿದ ಕಳಕಳಿಯಾಗಿತ್ತು.</p>
<p>ಮೊದಲಿಗೆ ಮಾತನಾಡಿದ ಸಂತೋಷಕುಮಾರ್, `ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಮುಂದಿನ ಹತ್ತು ವರ್ಷಗಳು ಭಾರತದ್ದಾಗಿವೆ. ಈ ಅವಧಿಯಲ್ಲಿ ಈ ಕ್ಷೇತ್ರದ ಈಗಿನ 40 ಬಿಲಿಯನ್ ಡಾಲರ್ ವಹಿವಾಟು 400 ಬಿಲಿಯನ್ ಡಾಲರ್ ಮೀರಲಿದೆ. ಆದರೆ, ನಮ್ಮ ಶಿಕ್ಷಣ ರಂಗದಲ್ಲಿ ಗುಣಮಟ್ಟದ ಬೋಧಕರು, ಸಂಶೋಧನೆ ಮತ್ತು ಪ್ರಾಯೋಗಿಕ ಕಲಿಕೆ ಮೂರರ ಕಡೆಗೂ ಆದ್ಯ ಗಮನ ಕೊಡಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಸರಕಾರವು ರಾಷ್ಟ್ರೀಯ ಸಮಸ್ಯೆಗಳನ್ನು ಮುಂದಿಟ್ಟು, ಅವುಗಳಿಗೆ ದಕ್ಷ ಪರಿಹಾರ ಕಂಡುಹಿಡಿಯುವಂತಹ ಸಂಶೋಧನಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಬೇಕಾದ ಜರೂರಿದೆ’ ಎಂದು ವಾಸ್ತವ ಪರಿಸ್ಥಿತಿಯತ್ತ ಗಮನ ಸೆಳೆದರು.</p>
<p><img decoding="async" class="alignnone size-full wp-image-129621" src="https://www.justkannada.in/wp-content/uploads/2024/09/TOP-BANNER-04.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-04.png 730w, https://www.justkannada.in/wp-content/uploads/2024/09/TOP-BANNER-04-600x74.png 600w, https://www.justkannada.in/wp-content/uploads/2024/09/TOP-BANNER-04-300x37.png 300w, https://www.justkannada.in/wp-content/uploads/2024/09/TOP-BANNER-04-150x18.png 150w, https://www.justkannada.in/wp-content/uploads/2024/09/TOP-BANNER-04-696x86.png 696w" sizes="(max-width: 730px) 100vw, 730px" /></p>
<p>ದೇಶವನ್ನು ಇನ್ನು ಕೆಲವೇ ವರ್ಷಗಳಲ್ಲಿ 5 ಟ್ರಿಲಿಯನ್ ಡಾಲರ್ ಮೌಲ್ಯದ ಆರ್ಥಿಕತೆಯಾಗಿ ಬೆಳೆಸುವ ಗುರಿ ನಮ್ಮ ಮುಂದಿದೆ. ಇದರಲ್ಲಿ 3 ಟ್ರಿಲಿಯನ್ ಡಾಲರ್ ಇಎಸ್ಡಿಎಂ ವಲಯದ ಕೊಡುಗೆಯೇ ಆಗಿರಲಿದೆ. ಆದರೆ, ಅವಕಾಶಗಳು ಕೇವಲ ಭಾರತಕ್ಕೆ ಮಾತ್ರ ಇರುವುದಿಲ್ಲ. ಬದಲಿಗೆ ಅವು ಎಲ್ಲ ದೇಶಗಳಿಗೂ ಲಭ್ಯವಿರುತ್ತವೆ. ಅವು ನಮ್ಮದಾಗಬೇಕೆಂದರೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯ ಕಡೆಗೆ ಗಮನ ಕೊಡಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.</p>
<p>ಜಿತೇಂದ್ರ ಛಡ್ಡಾ ಮಾತನಾಡಿ, ಸೆಮಿಕಂಡಕ್ಟರ್ ಕ್ಷೇತ್ರದ ಚಿಪ್ ವಿನ್ಯಾಸದಲ್ಲಿ ಭಾರತದ ಪಾಲು ಶೇಕಡ 25ರಷ್ಟಿದೆ. ಆದರೆ, ಉತ್ಪಾದನೆಯಲ್ಲಿ ನಾವು ಹಿಂದಿದ್ದೇವೆ. ಇನ್ನು 5-10 ವರ್ಷಗಳಲ್ಲಿ ಕೃತಕ ಬುದ್ಧಿಮತ್ತೆ ಎಲ್ಲ ಕ್ಷೇತ್ರಗಳನ್ನೂ ಆವರಿಸಿಕೊಳ್ಳಲಿದೆ. ಆಗ 15-20 ಮಿಲಿಯನ್ ಡಾಲರ್ ಹೂಡಿಕೆಯಲ್ಲಿ `ಪರ್ಸನಲ್ ಡಿಸೈನ್’ ಪರಿಣತಿಯು ಮುನ್ನೆಲೆಗೆ ಬರಲಿದೆ. ಜಗತ್ತಿನ ದೊಡ್ಡದೊಡ್ಡ ಆರ್ಥಿಕತೆಗಳೆಲ್ಲವೂ ಸೆಮಿಕಂಡಕ್ಟರ್ ಕ್ಷೇತ್ರವನ್ನೇ ನೆಚ್ಚಿಕೊಂಡಿವೆ. ಈಗ ತೈವಾನ್ ಮತ್ತು ಜಪಾನಿನಲ್ಲಿ ಸೆಮಿಕಂಡಕ್ಟರ್ ಚಿಪ್ ಉತ್ಪಾದನೆ ಸಮೃದ್ಧವಾಗಿದೆ. ನಮ್ಮಲ್ಲಿನ್ನೂ ಸೆಮಿಕಂಡಕ್ಟರ್ ವಲಯಕ್ಕೆ ಇಂಬು ಕೊಡುವಂತಹ ಕಾರ್ಯ ಪರಿಸರ ಪೂರ್ಣ ಪ್ರಮಾಣದಲ್ಲಿ ಸೃಷ್ಟಿಯಾಗಿಲ್ಲ ಎಂದು ಅಭಿಪ್ರಾಯಪಟ್ಟರು.</p>
<p>ಹಿತೇಶ್ ಗಾರ್ಗ್ ಮಾತನಾಡಿ, `20 ವರ್ಷಗಳ ಹಿಂದೆ ನಮ್ಮಲ್ಲಿ ಎನ್.ಎಫ್.ಸಿ.(ನಿಯರ್ ಫೀಲ್ಡ್ ಕಮ್ಯುನಿಕೇಶನ್) ತಂತ್ರಜ್ಞಾನ ಬಂದಾಗ ಅದಕ್ಕೆ ಬಳಕೆದಾರರೇ ಇರಲಿಲ್ಲ. ಇದಕ್ಕಾಗಿ ನಾವು ಹತ್ತು ವರ್ಷ ಕಾಯಬೇಕಾಯಿತು. ಆದರೆ ಈಗ ಬೆಂಗಳೂರಿನಲ್ಲೇ ನ್ಯಾನೊ ಮೀಟರ್ ಲೆಕ್ಕದಲ್ಲಿ ಚಿಪ್ ವಿನ್ಯಾಸಗಳು ಸಿದ್ಧವಾಗುತ್ತಿವೆ. ಇದೇ ತಂತ್ರಜ್ಞಾನದ ಶಕ್ತಿ. ಕರ್ನಾಟಕದ ವಿಶ್ವವಿದ್ಯಾಲಯಗಳು, ಕಾಲೇಜು ಮತ್ತು ನವೋದ್ಯಮಗಳಲ್ಲಿ ಸೆಮಿಕಂಡಕ್ಟರ್ ಕ್ಷೇತ್ರದ ಬೆಳವಣಿಗೆಗೆ ಅಪಾರ ಅವಕಾಶಗಳಿವೆ ಎಂದು ನುಡಿದರು.</p>
<p><img decoding="async" class="alignnone size-full wp-image-136257" src="https://www.justkannada.in/wp-content/uploads/2025/02/semiconductors.jpg" alt="" width="500" height="281" srcset="https://www.justkannada.in/wp-content/uploads/2025/02/semiconductors.jpg 500w, https://www.justkannada.in/wp-content/uploads/2025/02/semiconductors-300x169.jpg 300w, https://www.justkannada.in/wp-content/uploads/2025/02/semiconductors-150x84.jpg 150w" sizes="(max-width: 500px) 100vw, 500px" /></p>
<p>ಭಾರತ ಮತ್ತು ಅದರಲ್ಲೂ ಕರ್ನಾಟಕ ಸಾಫ್ಟ್ವೇರ್ ಆಡುಂಬೊಲಗಳಾಗಿವೆ. ಬೆಂಗಳೂರಿನಲ್ಲಂತೂ ಎಲೆಕ್ಟ್ರಾನಿಕ್ಸ್ ವಲಯದಲ್ಲಿ ತುಂಬಾ ಸಂಶೋಧನೆಗಳು ನಡೆಯುತ್ತಿವೆ. ಆದರೆ ಇವುಗಳಿಗೆ ತಕ್ಕಂತಹ ಮಾರುಕಟ್ಟೆಯನ್ನು ಸೃಷ್ಟಿಸುವ ಅನ್ವಯಿಕತೆಯ ಕೊರತೆ ನಮ್ಮಲ್ಲಿ ಕಾಣುತ್ತಿದೆ. ಇದರ ಜೊತೆಗೆ ಹೆಚ್ಚುಹೆಚ್ಚು ಸಹಭಾಗಿತ್ವಕ್ಕೆ ಉತ್ತೇಜನ ಸಿಗುವಂತಾಗಬೇಕು. ಇದಿಲ್ಲದೆ ಹೋದರೆ, ಉದ್ಯಮದ ಬೆಳವಣಿಗೆ ಕುಂಟುತ್ತ ಸಾಗುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.</p>
<p>ಲ್ಯಾಮ್ ರೀಸರ್ಚ್ ಉನ್ನತಾಧಿಕಾರಿ ರಂಗೇಶ್ ಗೋಷ್ಠಿಯನ್ನು ನಿರ್ವಹಿಸಿದರು</p>
<p>key words: &#8216;Quality education, research, semiconductor, profits,GIM</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>SUMMARY:</strong></p>
<p>&#8216;Quality education, research are the basis for semiconductor profits&#8217;</p>
<p><img loading="lazy" decoding="async" class="alignnone size-full wp-image-136258" src="https://www.justkannada.in/wp-content/uploads/2025/02/semiconductors-new.jpg" alt="" width="500" height="364" srcset="https://www.justkannada.in/wp-content/uploads/2025/02/semiconductors-new.jpg 500w, https://www.justkannada.in/wp-content/uploads/2025/02/semiconductors-new-300x218.jpg 300w, https://www.justkannada.in/wp-content/uploads/2025/02/semiconductors-new-150x109.jpg 150w, https://www.justkannada.in/wp-content/uploads/2025/02/semiconductors-new-324x235.jpg 324w" sizes="auto, (max-width: 500px) 100vw, 500px" /></p>
<p>&#8220;We are only talking about attracting investment for all industrial sectors, including the semiconductor sector. But, in reality, we need to create both talent and potential. If this is possible, the flow of capital will happen automatically.&#8217;</p>
<p><img loading="lazy" decoding="async" class="alignnone size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>The post <a href="https://www.justkannada.in/semiconductorgim/">&#8216;ಸೆಮಿಕಂಡಕ್ಟರ್ ಲಾಭ ನಮ್ಮದಾಗಲು ಗುಣಮಟ್ಟದ ಶಿಕ್ಷಣ, ಸಂಶೋಧನೆಯೇ ಆಧಾರ’</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಆನಂದ್ ಮಹೀಂದ್ರಗೆ ಕೊಡಗಿನ ಸವಿನೆನಪು, ಹೂಡಿಕೆಯ ಹುರುಪು</title>
		<link>https://www.justkannada.in/anand-mahindra/</link>
		
		<dc:creator><![CDATA[mahesh]]></dc:creator>
		<pubDate>Tue, 11 Feb 2025 14:43:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Anand Mahindra]]></category>
		<category><![CDATA[GIM]]></category>
		<category><![CDATA[invests zeal]]></category>
		<category><![CDATA[remembers Kodagu]]></category>
		<guid isPermaLink="false">https://www.justkannada.in/?p=136224</guid>

					<description><![CDATA[<p>ಬೆಂಗಳೂರು, Feb.11, 2025: ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿದ್ದ ಗಣ್ಯ ಉದ್ಯಮಿ ಆನಂದ್ ಮಹೀಂದ್ರ ಕನ್ನಡದಲ್ಲೇ ಮಾತು ಆರಂಭಿಸಿದರು. ಅವರು 60 ವರ್ಷಗಳ ನೆನಪಿನಾಳಕ್ಕೆ ಜಾರಿ, 1960ರ ಆಚೀಚೆ ತಾವು ತಮ್ಮ ತಂದೆ-ತಾಯಿಗಳೊಂದಿಗೆ ಕೊಡಗಿನ ಕುಟ್ಟದಲ್ಲಿ ಬೆಳೆದ ದಿನಗಳ ಅನುಭವಗಳನ್ನು ಹಂಚಿಕೊಂಡರು. ಪಂಜಾಬಿನವರಾದ ತಾವು ಇಲ್ಲಿನ ಕಾಫಿ ಪ್ಲಾಂಟೇಶನ್ ನಲ್ಲಿ ಕಲಿತ ಪಾಠಗಳನ್ನೇ ಉದ್ಯಮದಲ್ಲೂ ಅಳವಡಿಸಿಕೊಂಡಿರುವುದಾಗಿ ಹೇಳಿದರು. ಬಳಿಕ ಅವರು, ಮುಂದಿನ ಐದು ವರ್ಷಗಳಲ್ಲಿ ತಾವು ರಾಜ್ಯದಲ್ಲಿ ಮರುಬಳಕೆ ಇಂಧನ, ಪ್ರವಾಸ ಮತ್ತು ಆತಿಥ್ಯೋದ್ಯಮ, ವೈಮಾಂತರಿಕ್ಷ ಮತ್ತು ರಕ್ಷಣೆ, [&#8230;]</p>
<p>The post <a href="https://www.justkannada.in/anand-mahindra/">ಆನಂದ್ ಮಹೀಂದ್ರಗೆ ಕೊಡಗಿನ ಸವಿನೆನಪು, ಹೂಡಿಕೆಯ ಹುರುಪು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು, Feb.11, 2025: ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿದ್ದ ಗಣ್ಯ ಉದ್ಯಮಿ ಆನಂದ್ ಮಹೀಂದ್ರ ಕನ್ನಡದಲ್ಲೇ ಮಾತು ಆರಂಭಿಸಿದರು. ಅವರು 60 ವರ್ಷಗಳ ನೆನಪಿನಾಳಕ್ಕೆ ಜಾರಿ, 1960ರ ಆಚೀಚೆ ತಾವು ತಮ್ಮ ತಂದೆ-ತಾಯಿಗಳೊಂದಿಗೆ ಕೊಡಗಿನ ಕುಟ್ಟದಲ್ಲಿ ಬೆಳೆದ ದಿನಗಳ ಅನುಭವಗಳನ್ನು ಹಂಚಿಕೊಂಡರು. ಪಂಜಾಬಿನವರಾದ ತಾವು ಇಲ್ಲಿನ ಕಾಫಿ ಪ್ಲಾಂಟೇಶನ್ ನಲ್ಲಿ ಕಲಿತ ಪಾಠಗಳನ್ನೇ ಉದ್ಯಮದಲ್ಲೂ ಅಳವಡಿಸಿಕೊಂಡಿರುವುದಾಗಿ ಹೇಳಿದರು.</p>
<p><img loading="lazy" decoding="async" class="alignnone size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>ಬಳಿಕ ಅವರು, ಮುಂದಿನ ಐದು ವರ್ಷಗಳಲ್ಲಿ ತಾವು ರಾಜ್ಯದಲ್ಲಿ ಮರುಬಳಕೆ ಇಂಧನ, ಪ್ರವಾಸ ಮತ್ತು ಆತಿಥ್ಯೋದ್ಯಮ, ವೈಮಾಂತರಿಕ್ಷ ಮತ್ತು ರಕ್ಷಣೆ, ವಿದ್ಯುಚ್ಚಾಲಿತ ತ್ರಿಚಕ್ರ ವಾಹನ ತಯಾರಿಕೆ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರಗಳಲ್ಲಿ 40 ಸಾವಿರ ಕೋಟಿ ರೂ. ಬಂಡವಾಳ ಹೂಡುವುದಾಗಿ ಘೋಷಿಸಿದರು. ಮಹೀಂದ್ರ ಸಮೂಹವು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಬೆಂಗಳೂರಿನಲ್ಲಿ ಸದ್ಯಕ್ಕೆ 5,000 ಕೋಟಿ ರೂ. ಮೊತ್ತದ ಯೋಜನೆಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ 6,000 ಕೋಟಿ ರೂ. ಹೂಡುವುದಾಗಿ ಅವರು ಪ್ರಕಟಿಸಿದರು. ಕೊನೆಯಲ್ಲಿ `ಕರ್ನಾಟಕಕ್ಕೆ ಧನ್ಯವಾದಗಳು’ ಎನ್ನುವ ಮೂಲಕ ಕನ್ನಡದಲ್ಲೇ ಮಾತು ಮುಗಿಸಿ, ಎಲ್ಲರ ಮನ ಗೆದ್ದರು.</p>
<p><img loading="lazy" decoding="async" class="alignnone size-full wp-image-136215" src="https://www.justkannada.in/wp-content/uploads/2025/02/rajnath-sing.jpg" alt="" width="500" height="367" srcset="https://www.justkannada.in/wp-content/uploads/2025/02/rajnath-sing.jpg 500w, https://www.justkannada.in/wp-content/uploads/2025/02/rajnath-sing-300x220.jpg 300w, https://www.justkannada.in/wp-content/uploads/2025/02/rajnath-sing-80x60.jpg 80w, https://www.justkannada.in/wp-content/uploads/2025/02/rajnath-sing-150x110.jpg 150w" sizes="auto, (max-width: 500px) 100vw, 500px" /></p>
<p><strong>1 ಲಕ್ಷ ಕೋಟಿ ರೂ. ಹೂಡಿಕೆ: ಸಜ್ಜನ್ ಜಿಂದಾಲ್ :</strong></p>
<p>ತಮ್ಮ ನೇತೃತ್ವದ ಜಿಂದಾಲ್ ಸಮೂಹವು ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಒಟ್ಟು 1 ಲಕ್ಷ ಕೋಟಿ ರೂ.ಗೂ ಹೆಚ್ಚಿನ ಬಂಡವಾಳ ತೊಡಗಿಸಲಿದೆ. ಇದರಲ್ಲಿ ಉಕ್ಕು ಉತ್ಪಾದನೆ ವಲಯದಲ್ಲಿ 45 ಸಾವಿರ ಕೋಟಿ ರೂ. ಮತ್ತು ಆತಿಥ್ಯೋದ್ಯಮ, ಸೌರವಿದ್ಯುತ್, ಪರಿಸರಸ್ನೇಹಿ ಇಂಧನ ಮತ್ತು ಗ್ರೀನ್ ಹೈಡ್ರೋಜನ್ ಕ್ಷೇತ್ರಗಳಲ್ಲಿ 56 ಸಾವಿರ ಕೋಟಿ ರೂ. ಹೂಡಲಾಗುವುದು ಎಂದು ಉದ್ಯಮಿ ಸಜ್ಜನ್ ಜಿಂದಾಲ್ ಹೇಳಿದರು.</p>
<p>key words: Anand Mahindra, remembers Kodagu, invests zeal, GIM</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>SUMMARY: </strong></p>
<p>Anand Mahindra remembers Kodagu, invests zeal</p>
<p><img loading="lazy" decoding="async" class="alignnone size-full wp-image-136225" src="https://www.justkannada.in/wp-content/uploads/2025/02/mahindra.jpg" alt="" width="500" height="320" srcset="https://www.justkannada.in/wp-content/uploads/2025/02/mahindra.jpg 500w, https://www.justkannada.in/wp-content/uploads/2025/02/mahindra-300x192.jpg 300w, https://www.justkannada.in/wp-content/uploads/2025/02/mahindra-150x96.jpg 150w" sizes="auto, (max-width: 500px) 100vw, 500px" /></p>
<p>Anand Mahindra, a prominent industrialist who attended the investors&#8217; meet, started his speech in Kannada. He slipped back into his 60-year-old memory and shared his experiences of growing up with his parents in Kutta in Kodagu in the late 1960s. He said that being from Punjab, he has applied the lessons he learnt from the coffee plantation here in the industry</p>
<p>The post <a href="https://www.justkannada.in/anand-mahindra/">ಆನಂದ್ ಮಹೀಂದ್ರಗೆ ಕೊಡಗಿನ ಸವಿನೆನಪು, ಹೂಡಿಕೆಯ ಹುರುಪು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
