<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Government colleges Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/government-colleges/feed/" rel="self" type="application/rss+xml" />
	<link>https://www.justkannada.in/tag/government-colleges/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 20 Sep 2019 12:02:25 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Government colleges Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/government-colleges/</link>
	<width>32</width>
	<height>32</height>
</image> 
	<item>
		<title>ಸರ್ಕಾರಿ ಕಾಲೇಜುಗಳ ಅಭಿವೃದ್ಧಿ ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಆದ್ಯತೆ-ಮೈಸೂರಿನಲ್ಲಿ ಡಿಸಿಎಂ ಡಾ.ಸಿ.ಎನ್ ಅಶ್ವಥ್ ನಾರಾಯಣ್ ನುಡಿ&#8230;</title>
		<link>https://www.justkannada.in/dcm-ashwath-narayan-mysore-development-government-colleges-quality-of-education/</link>
		
		<dc:creator><![CDATA[JK Desk]]></dc:creator>
		<pubDate>Fri, 20 Sep 2019 12:02:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[dcm-ashwath.narayan]]></category>
		<category><![CDATA[development]]></category>
		<category><![CDATA[education]]></category>
		<category><![CDATA[Government colleges]]></category>
		<category><![CDATA[Mysore.]]></category>
		<category><![CDATA[quality]]></category>
		<guid isPermaLink="false">https://www.justkannada.in/?p=12643</guid>

					<description><![CDATA[<p>ಮೈಸೂರು ಸೆ.20,2019(www.justkannada.in): ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗೆ ಹಾಗೂ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲು ಸರ್ಕಾರದಿಂದ ಪೂರಕವಾದ ಸಹಕಾರ ನೀಡಲಾಗುವುದು ಎಂದು ‌ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ, ಐಟಿ.ಮತ್ತು ಬಿಟಿ ಸಚಿವರಾದ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರು‌ ಹೇಳಿದರು. ನಗರದ ಮಹಾರಾಣಿ ಕಲಾ‌ ಕಾಲೇಜಿಗೆ ಭೇಟಿ ‌ನೀಡಿದ ಅವರು ಕಾಲೇಜಿನ‌ ಹೊರಾಂಗಣದಲ್ಲಿ ‌ಕಾಂಪೌಂಡ್ ನಿರ್ಮಿಸಲು ಸ್ಥಳ ವೀಕ್ಷಣೆ ಮಾಡಿ ಮಾತನಾಡಿದ  ಡಿಸಿಎಂ ಅಶ್ವಥ್ ನಾರಾಯಣ್,  ಕೂಡಲೆ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನ‌ ನೀಡಲಾಗುವುದು ಹಾಗೂ ಇಲ್ಲಿ ‌ಹುಡುಗಿಯರು ಮಾತ್ರ ಇದ್ದು, [&#8230;]</p>
<p>The post <a href="https://www.justkannada.in/dcm-ashwath-narayan-mysore-development-government-colleges-quality-of-education/">ಸರ್ಕಾರಿ ಕಾಲೇಜುಗಳ ಅಭಿವೃದ್ಧಿ ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಆದ್ಯತೆ-ಮೈಸೂರಿನಲ್ಲಿ ಡಿಸಿಎಂ ಡಾ.ಸಿ.ಎನ್ ಅಶ್ವಥ್ ನಾರಾಯಣ್ ನುಡಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು ಸೆ.20,2019(<a href="https://www.justkannada.in">www.justkannada.in</a>): ಸರ್ಕಾರಿ ಕಾಲೇಜುಗಳ ಅಭಿವೃದ್ಧಿಗೆ ಹಾಗೂ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲು ಸರ್ಕಾರದಿಂದ ಪೂರಕವಾದ ಸಹಕಾರ ನೀಡಲಾಗುವುದು ಎಂದು ‌ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ, ಐಟಿ.ಮತ್ತು ಬಿಟಿ ಸಚಿವರಾದ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರು‌ ಹೇಳಿದರು.</p>
<p>ನಗರದ ಮಹಾರಾಣಿ ಕಲಾ‌ ಕಾಲೇಜಿಗೆ ಭೇಟಿ ‌ನೀಡಿದ ಅವರು ಕಾಲೇಜಿನ‌ ಹೊರಾಂಗಣದಲ್ಲಿ ‌ಕಾಂಪೌಂಡ್ ನಿರ್ಮಿಸಲು ಸ್ಥಳ ವೀಕ್ಷಣೆ ಮಾಡಿ ಮಾತನಾಡಿದ  ಡಿಸಿಎಂ ಅಶ್ವಥ್ ನಾರಾಯಣ್,  ಕೂಡಲೆ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನ‌ ನೀಡಲಾಗುವುದು ಹಾಗೂ ಇಲ್ಲಿ ‌ಹುಡುಗಿಯರು ಮಾತ್ರ ಇದ್ದು, ಅವರಿಗೆ ಸೂಕ್ತ ರಕ್ಷಣೆ ನೀಡುವ ಮೂಲಕ ಅಗತ್ಯವಾದ ಮೂಲ ಸೌಕರ್ಯಗಳನ್ನು ಒದಗಿಸಕೊಡಲು ನಾವು ಸಿದ್ದರಿದ್ದೇವೆ ಎಂದರು.</p>
<p>ರಾಜ್ಯದಲ್ಲಿ ಮೈಸೂರು ಶಿಕ್ಷಣ ಕ್ಷೇತ್ರದಲ್ಲಿ ‌ಉತ್ತಮ‌ ಸ್ಥಾನವನ್ನು ‌ಪಡೆದಿದೆ. ಅಂತಹ ನಗರದಲ್ಲಿ ಸರ್ಕಾರಿ‌ ಕಾಲೇಜುಗಳು ಮತ್ತಷ್ಟು ಅಭಿವೃದ್ಧಿ ಹೊಂದುವ ಅವಶ್ಯಕತೆ ಇದೆ. ಶೌಚಾಲಯ, ಕ್ಯಾಂಟೀನ್, ಗ್ರಂಥಾಲಯ ‌ಹೀಗೆ‌ ಹಲವಾರು ಸಮಸ್ಯೆಗಳನ್ನು ಹಲವಾರು ಕಾಲೇಜುಗಳು‌ ಹೊಂದಿದ್ದು, ರಾಜ್ಯಾದ್ಯಂತ ‌ಕಾಲೇಜುಗಳ ಅಭಿವೃದ್ಧಿಗೆ ಹಾಗೂ‌ ಶಿಕ್ಷಣದ ಗುಣಮಟ್ಟಕ್ಕೆ ನಾನು‌ ಮೊದಲನೇ ಆಧ್ಯತೆ ನೀಡುತ್ತೇನೆ ಎಂದರು.</p>
<p>ಕಾಲೇಜುಗಳ ಜೊತೆಯಲ್ಲಿ ಐಟಿ ಬಿಟಿ ಕಂಪನಿಗಳ‌ ಸಂಪರ್ಕವನ್ನು ಕಲ್ಪಿಸಲು ಚಿಂತನೆ ನಡೆಸಲಾಗಿದ್ದು, ಇದರಿಂದ ಕಾಲೇಜು‌ ವಿದ್ಯಾರ್ಥಿಗಳಿಗೆ ಕಂಪನಿಗಳ ಒಡನಾಟ ಬೆಳೆಯಲಿದ್ದು, ಶಿಕ್ಷಣ ಮುಗಿದ ನಂತರ ಉದ್ಯೋಗ ಪಡೆಯಲು ಅನುಕೂಲವಾಗಲಿದೆ ಎಂದರು.</p>
<p>ಮಹಾರಾಣಿ ಕಾಲೇಜಿನ‌ ಕಟ್ಟಡವನ್ನು ವೀಕ್ಷಣೆ ಮಾಡಿ ಅಲ್ಲಿ ಕಾರಣಾಂತರಗಳಿಂದ ಗ್ರಂಥಾಲಯ ಮುಚ್ಚಲ್ಪಟ್ಟಿದ್ದು, ಅದನ್ನು ಪ್ರಾಂಶುಪಾಲರು ಸಂಬಂಧ ಪಟ್ಟವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಂಡು ಶೀಘ್ರವಾಗಿ ಗ್ರಂಥಾಲಯ ತೆರೆಯುವಂತೆ  ಸೂಚಿಸಿದರು.</p>
<p>ಈ ಸಂದರ್ಭದಲ್ಲಿ ಶಾಸಕ ಎಲ್.ನಾಗೇಂದ್ರ, ಮುಖಂಡರಾದ ಮಂಜುನಾಥ್, ಶಿವಣ್ಣ ಹಾಗೂ ಕಾಲೇಜಿನ‌ ಪ್ರಾಂಶುಪಾಲರು ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: DCM -Ashwath Narayan &#8211; Mysore &#8211; development &#8211; government colleges &#8211; quality of education.</p>
<p>&nbsp;</p>
<p>The post <a href="https://www.justkannada.in/dcm-ashwath-narayan-mysore-development-government-colleges-quality-of-education/">ಸರ್ಕಾರಿ ಕಾಲೇಜುಗಳ ಅಭಿವೃದ್ಧಿ ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಆದ್ಯತೆ-ಮೈಸೂರಿನಲ್ಲಿ ಡಿಸಿಎಂ ಡಾ.ಸಿ.ಎನ್ ಅಶ್ವಥ್ ನಾರಾಯಣ್ ನುಡಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶೀಘ್ರದಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಖಾಲಿ ಇರುವ 3,800 ಉಪನ್ಯಾಸಕ ಹುದ್ದೆ ಭರ್ತಿ: ಸಚಿವ ಜಿ.ಟಿ.ದೇವೇಗೌಡ</title>
		<link>https://www.justkannada.in/government-colleges3800-lecturers-appointed-g-t-devegowda/</link>
		
		<dc:creator><![CDATA[JK Desk]]></dc:creator>
		<pubDate>Tue, 04 Jun 2019 08:55:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[3]]></category>
		<category><![CDATA[800 lecturers appointed]]></category>
		<category><![CDATA[g.t.devegowda]]></category>
		<category><![CDATA[Government colleges]]></category>
		<guid isPermaLink="false">https://www.justkannada.in/?p=3296</guid>

					<description><![CDATA[<p>ಬೆಂಗಳೂರು:ಜೂ-4;(www.justkannada.in) ಶೀಘ್ರದಲ್ಲೇ ಸರ್ಕಾರಿ ಪದವಿ ಕಾಲೇಜಿನಲ್ಲಿ ಖಾಲಿ ಇರುವ 3,800 ಉಪನ್ಯಾಸಕ ಹುದ್ದೆ ಭರ್ತಿಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿಯಿರುವ 396 ಪ್ರಾಂಶುಪಾಲರ ಹುದ್ದೆಗಳಲ್ಲಿ ಶೇ.50ರಷ್ಟು ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಈಗಾಗಲೇ ಅನುಮೋದನೆ ನೀಡಿದೆ. ಹಾಗೆಯೇ ಖಾಲಿ ಇರುವ 3,800 ಉಪನ್ಯಾಸಕರ ಭರ್ತಿಗೂ ಅನುಮತಿ ಕೋರಿದ್ದೇವೆ. ಆರ್ಥಿಕ ಇಲಾಖೆಯಿಂದ ಅನುಮತಿ ಸಿಕ್ಕ ನಂತರ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಿದ್ದೇವೆ ಎಂದರು. ಈ ವರ್ಷ [&#8230;]</p>
<p>The post <a href="https://www.justkannada.in/government-colleges3800-lecturers-appointed-g-t-devegowda/">ಶೀಘ್ರದಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಖಾಲಿ ಇರುವ 3,800 ಉಪನ್ಯಾಸಕ ಹುದ್ದೆ ಭರ್ತಿ: ಸಚಿವ ಜಿ.ಟಿ.ದೇವೇಗೌಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು:ಜೂ-4;(www.justkannada.in) ಶೀಘ್ರದಲ್ಲೇ ಸರ್ಕಾರಿ ಪದವಿ ಕಾಲೇಜಿನಲ್ಲಿ ಖಾಲಿ ಇರುವ 3,800 ಉಪನ್ಯಾಸಕ ಹುದ್ದೆ ಭರ್ತಿಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.</p>
<p>ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿಯಿರುವ 396 ಪ್ರಾಂಶುಪಾಲರ ಹುದ್ದೆಗಳಲ್ಲಿ ಶೇ.50ರಷ್ಟು ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಈಗಾಗಲೇ ಅನುಮೋದನೆ ನೀಡಿದೆ. ಹಾಗೆಯೇ ಖಾಲಿ ಇರುವ 3,800 ಉಪನ್ಯಾಸಕರ ಭರ್ತಿಗೂ ಅನುಮತಿ ಕೋರಿದ್ದೇವೆ. ಆರ್ಥಿಕ ಇಲಾಖೆಯಿಂದ ಅನುಮತಿ ಸಿಕ್ಕ ನಂತರ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಿದ್ದೇವೆ ಎಂದರು.</p>
<p>ಈ ವರ್ಷ ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ಹುದ್ದೆಗಳನ್ನು ಮಾತ್ರ ಭರ್ತಿ ಮಾಡಿಕೊಳ್ಳಲಾಗುವುದು. ಬೋಧಕೇತರ ಸಿಬ್ಬಂದಿ ನೇಮಕದ ಪ್ರಸ್ತಾವನೆ ಇನ್ನೂ ಆರ್ಥಿಕ ಇಲಾಖೆಗೆ ಕಳುಹಿಸಿಲ್ಲ ಎಂದು ಹೇಳಿದರು.</p>
<p>ಬೆಂಗಳೂರು ವಿವಿ ತ್ರಿಭಜನೆಯ ನಂತರ ಸರ್ಕಾರದಿಂದ ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ಉತ್ತರ ವಿವಿಗೆ ಅನುದಾನ ಹೋಗಿಲ್ಲ. ಈಗ ಅನುದಾನ ಹಂಚಿಕೆಗೆ ಬೇಕಾದ ಅವಕಾಶವನ್ನು ಆರ್ಥಿಕ ಇಲಾಖೆ ಮೂಲಕ ಪಡೆದಿದ್ದು, ರೂಸಾ ಅನುದಾನದಲ್ಲಿ ವಿವಿಗಳಿಗೆ ಹಣ ಒದಗಿಸಲಾಗುವುದು ಎಂದರು.</p>
<p>ಪದವಿ ವಿದ್ಯಾರ್ಥಿಗಳಿಗೆ ನೀಡಬೇಕಿರುವ ಲ್ಯಾಪ್‌ಟಾಪ್‌ ಟೆಂಡರ್ ನಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಹಂಚಿಕೆ ಸಾಧ್ಯವಾಗಿಲ್ಲ. ಹೊಸದಾಗಿ ಟೆಂಡರ್‌ ಪ್ರಕ್ರಿಯೆ ನಡೆಸಿ, ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವ ಸಂಬಂಧ ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.</p>
<h1>ಶೀಘ್ರದಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಖಾಲಿ ಇರುವ 3,800 ಉಪನ್ಯಾಸಕ ಹುದ್ದೆ ಭರ್ತಿ: ಸಚಿವ ಜಿ.ಟಿ.ದೇವೇಗೌಡ</h1>
<h1>Government colleges,3,800 lecturers appointed, G T Devegowda</h1>
<p>The post <a href="https://www.justkannada.in/government-colleges3800-lecturers-appointed-g-t-devegowda/">ಶೀಘ್ರದಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಖಾಲಿ ಇರುವ 3,800 ಉಪನ್ಯಾಸಕ ಹುದ್ದೆ ಭರ್ತಿ: ಸಚಿವ ಜಿ.ಟಿ.ದೇವೇಗೌಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
